ನೋಟಿಸ್ ನೀಡದೆ ದಿನಗೂಲಿ ಬ್ಯಾಂಕ್ ನೌಕರನ ತೆರವು: ಕೆಲಸ ಕಳೆದುಕೊಂಡು ಕಣ್ಣೀರಿಟ್ಟ ನೌಕರಿ ವಂಚಿತ ಹನುಮಂತರಾಜು

ತಾಲ್ಲೂಕಿನ ಯೂನಿಯನ್ ಬ್ಯಾಂಕ್ ಮೆಳೆಕೋಟೆ ಶಾಖೆಯಲ್ಲಿ ಪರಿಶಿಷ್ಟ ಜಾತಿಯ ಹನುಮಂತರಾಜು ರವರನ್ನು ಯಾವುದೇ ನೋಟಿಸ್ ನೀಡದೆ, ಕೆಲಸದಿಂದ ತೆಗೆದು ಹಾಕಿದ ಕ್ರಮಕ್ಕೆ ಬ್ಯಾಂಕ್ ಎಂಪ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸುತ್ತದೆ ಎಂದು ಬಿ.ಎಸ್.ಎಫ್.ಐ ನ ರಾಜ್ಯ ಕಾರ್ಯದರ್ಶಿ ಕೆ.ನಾಗರಾಜ್ ಶಾನಭೋಗ್ ಹೇಳಿದರು.

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು. ಯೂನಿಯನ್ ಬ್ಯಾಂಕಿನಲ್ಲಿ ಪರಿಶಿಷ್ಟ ಜಾತಿಯ ಯುವಕ ಎಂ.ಹನುಮಂತರಾಜು ಎಂಬುವರು ಸತತವಾಗಿ 15 ವರ್ಷ ಬ್ಯಾಂಕಿನಲ್ಲಿ ದುಡಿಯುತ್ತಿದ್ದಾರೆ, ತಮ್ಮ ಚುರುಕುತನದ ಸೇವೆಯಿಂದ ಗ್ರಾಹಕವರ್ಗ ಹಾಗೂ ಸಿಬ್ಬಂದಿ ವರ್ಗದ ಮೆಚ್ಚುಗೆಯನ್ನೂ ಪಡೆದಿರುತ್ತಾರೆ.

ಈ ನಡುವೆ, ಹಲವು ವರ್ಷಗಳು ಕಾದರೂ ನೌಕರಿ ಖಾಯಂ ಆಗದ ಹಿನ್ನೆಲೆ ಹನುಮಂತರಾಜು ಮತ್ತು ಇತರ ಐದು ಮಂದಿ ಸೇರಿ ತಮ್ಮ ಸಮಾನ ಕೆಲಸಕ್ಕೆ ಸಮಾನ ವೇತನ ಮತ್ತು ಖಾಯಂ ನೇಮಕಾತಿಗಾಗಿ ಬೆಂಗಳೂರಿನ ಕಾರ್ಮಿಕ ಕಚೇರಿಯಲ್ಲಿ ದೂರನ್ನು ದಾಖಲಿಸಿದ್ದರು, ಈ ಅರ್ಜಿ ಇನ್ನು ಇತ್ಯರ್ಥವಾಗಿಲ್ಲ.

ಈ ಮಧ್ಯೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಡೆಪ್ಯೂಟಿ ಜನರಲ್ ಮ್ಯಾನೇಜರ್ ರವರು ಮೌಖಿಕವಾಗಿ ಮಳೆಕೋಟೆ ಶಾಖಾಧಿಕಾರಿಗೆ ನಿರ್ದೇಶನ ನೀಡಿ, ಮಾರ್ಚ್ 10, ರಿಂದ ಹನುಮಂತರಾಜುರನ್ನು ಕೆಲಸಕ್ಕೆ ಸೇರಿಸಬೇಡಿ ಎಂದು ಆದೇಶ ಕೊಟ್ಟಿದ್ದಾರೆಂದು ತಿಳಿಸಿ ಬ್ಯಾಂಕ್ ನ ಮ್ಯಾನೇಜರ್, ಹನುಮಂತರಾಜುಗೆ ಮುನ್ಸೂಚನೆಯಾಗಿ ಯಾವುದೇ ನೋಟೀಸ್ ನೀಡದೆ ಏಕಾಏಕಿ ಕೆಲಸಕ್ಕೆ ಬರದಂತೆ ಸೂಚಿಸಿರುವುದು I.D ಆಕ್ಟ್ ನ ಸೆಕ್ಷನ್ 33ರ ಸ್ಪಷ್ಟ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕಳೆದ 15 ವರ್ಷಗಳಿಂದ ಹನುಮಂತರಾಜು ರವರನ್ನು ಬ್ಯಾಂಕ್ ಚೌಕಟ್ಟಿಗೆ ಸೀಮಿತವಾದ ಕೆಲಸವಲ್ಲದೆ ಇತರೆ ಬೇರೆ ಕೆಲಸಗಳನ್ನು ದುಡಿಸಿಕೊಂಡು ಈಗ ಕಾನೂನು ಬಾಹಿರವಾಗಿ ಅವರನ್ನು ಬೀದಿಗೆ ತಳ್ಳಿರುವ ಯೂನಿಯನ್ ಬ್ಯಾಂಕಿನ ಕ್ರಮವನ್ನು ಬ್ಯಾಂಕಿನ ನೌಕಕರ ಸಂಘಟನೆ (ಬಿ.ಇ.ಎಫ್.ಐ) ರ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.

ಒಬ್ಬ ಪರಿಶಿಷ್ಟ ಜಾತಿಗೆ ಸೇರಿರುವ ಯುವಕನ ಮೇಲೆ ಆಡಳಿತ ಅಧಿಕಾರಿಗಳು ನಡೆಸಿದ ದುರ್ನಡತೆಯ ವಿರುದ್ಧ ಈ ಕೂಡಲೇ ಬೆಂಗಳೂರಿನ ರೀಜಿನಲ್ ಲೇಬರ್ ಕಮಿಷನರ್ ರವರು ಕ್ರಮ ಜರುಗಿಸಬೇಕು ಮತ್ತು ಹನುಮಂತರಾಜು ರವರನ್ನು ಈ ಕೂಡಲೇ ಬ್ಯಾಂಕಿನಲ್ಲಿ ಕೆಲಸಕ್ಕೆ‌ ಸೇರಿಸಿಕೊಂಡು ಖಾಯಂ ಗೊಳಿಸಬೇಕು ಎಂದು ಬ್ಯಾಂಕಿನ ಉನ್ನತ ಅಧಿಕಾರಿಗಳನ್ನೂ ಈ ಮೂಲಕ ಒತ್ತಾಯಿಸಿದರು.

ಬಳಿಕ ಕೆಲಸ ಕಳೆದುಕೊಂಡ ಹನುಮಂತರಾಜು ಮಾತನಾಡಿ, ಆರಂಭದಲ್ಲಿ 2 ವರ್ಷ ಕೆಲಸ ಮಾಡಿ ನಂತರ ಕೆಲಸ ಖಾಯಂಗೊಳಿಸಲಾಗುವುದು ಎಂದು ಆಸೆ ತೋರಿಸಿ ಕೆಲಸಕ್ಕೆ ಸೇರಿಸಿಕೊಂಡ ಬ್ಯಾಂಕ್‌ ನವರು 10 ವರ್ಷಕ್ಕೂ ಹೆಚ್ಚು ಕಾಲ ದುಡಿಸಿಕೊಂಡಿದ್ದಾರೆ, ಈ ನಡುವೆ ಯೂನಿಯನ್ ಬ್ಯಾಂಕ್ ಶಾಖೆಗೆ ವರ್ಗಾವಣೆಯಾಗಿ ಬಂದ ಎಲ್ಲಾ ಶಾಖಾಧಿಕಾರಿಗಳು ಮತ್ತು ಡಿಜಿಎಂ, ಜೋನಲ್ ಅಧಿಕಾರಿಗಳು, ಮುಖ್ಯ ಕಚೇರಿಗೆ ಹೋಗಿ ಮುಖಾಮುಖಿ ಭೇಟಿಯಾಗಿ ನೌಕರಿ ಖಾಯಂ ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಮನವಿ ಮಾಡಿಕೊಂಡಿದ್ದೆ ಆದರೇ ಯಾವುದೇ ಪ್ರಯೋಜನವಾಗಿಲ್ಲ.

ಈ ಕಾರಣದಿಂದಾಗಿ ನಾನು ಲೇಬರ್ ಕೋರ್ಟ್ ಗೆ ನೌಕರಿ ಖಾಯಂ ಗೊಳಿಸುವಂತೆ ಅರ್ಜಿ ಹಾಕಿದ್ದೆ, ಇದೇ ಕಾರಣವಾಗಿರಿಸಿಕೊಂಡು ನನ್ನ ಜಾಗಕ್ಕೆ‌ ಬೇರೆಯವರನ್ನು ಸೇರಿಸಿ ನನ್ನ ಖಾತೆಗೆ ಹಣ ಹಾಕದೇ ನಗದು ರೂಪದಲ್ಲಿ ನೀಡಿ ಈಗ ಏಕಾಏಕಿ ನನ್ನನ್ನು ಕೆಲಸದಿಂದ ತೆರವುಗೊಳಿಸಿದ್ದಾರೆ,

ಈಗಾಗಲೇ ಬ್ಯಾಂಕ್ ಗಾಗಿ 15 ವರ್ಷ ಕೆಲಸ ನಿರ್ವಹಿಸಿದ್ದೇನೆ, ಈಗ ನನಗೆ 45 ವರ್ಷ, ನನ್ನ ಕುಟುಂಬಕ್ಕೆ ಆಧಾರವಾಗಿರುವ ನನ್ನನ್ನ ಏಕಾಏಕಿ ಕೆಲಸಕ್ಕೆ ಬರಬೇಡ ಎಂದು ಹೇಳಿ ನನ್ನ ಕುಟುಂಬವನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ, ಅಧಿಕಾರಿಗಳು ನನಗೆ ಹಾಗೂ ನನ್ನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಕಣ್ಣೀರಿಟ್ಟರು.

ಕಚೇರಿ ಸಹಾಯಕ ಹುದ್ದೆಗೆ ಖಾಯಂ ನೌಕರ ನೇಮಕ ಆಗಿದ್ದರಿಂದ ದಿನಗೂಲಿ ನೌಕರ ಹನುಮಂತರಾಜು ಅವರನ್ನು ತೆರವುಗೊಳಿಸಲಾಗಿದೆ. ಒಂದೇ ಹುದ್ದೆಗೆ ಇಬ್ಬರನ್ನು ನೇಮಕ ಮಾಡಲು ಆಗುವುದಿಲ್ಲ, ಹೀಗೆ ಮಾಡಿದರೆ ಬ್ಯಾಂಕಿಗೆ ಹೊರೆ ಆಗುತ್ತದೆ ಎಂದು ಯೂನಿಯನ್ ಬ್ಯಾಂಕ್ ಮೆಳೆಕೋಟೆ ಶಾಖೆ ಮ್ಯಾನೇಜರ್ ನವೀನ್ ಪ್ರತಿಕ್ರಿಯಿಸಿದರು.

ಏಪ್ರಿಲ್ 4 ರಂದು ದೆಹಲಿಯಲ್ಲಿ ಧರಣಿ

ನೌಕರರ ಮೇಲೆ ದೌರ್ಜನ್ಯವಾಗಿ ನಡೆಸಿಕೊಳ್ಳುತ್ತಿರುವ ಪ್ರಕರಣಗಳು ಈಗಾಗಲೇ ದೇಶದ ಹಲವು ಕಡೆಗಳಲ್ಲಿ ನಡೆಯುತ್ತಿದೆ ಇದನ್ನು ಖಂಡಿಸಿ ದೇಶದ‌ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಬ್ಯಾಂಕ್ ನೌಕರರ ಸಂಘಟನೆಯಿಂದ ಧರಣಿ ಸತ್ಯಾಗ್ರಹ ಮಾಡುತ್ತಿದೆ ಎಂದು ಬಿ.ಇ.ಎಫ್.ಐ ನ ರಾಜ್ಯ ಕಾರ್ಯದರ್ಶಿ ನಾಗೇಶ್ ಶ್ಯಾನಬೋಗ್ ತಿಳಿಸಿದರು.

ಈ ಸುದ್ದಿಗೋಷ್ಟಿಯಲ್ಲಿ ಬ್ಯಾಂಕ್ ಎಂಪ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ಮಾದವ, ಹನುಮಂತರಾಜು, ಇತರರು ಇದ್ದರು.

Ramesh Babu

Journalist

Recent Posts

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

13 minutes ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

6 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

7 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

10 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

13 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

1 day ago