ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲ್ಲೂಕಿನ ಸಾರ್ವಜನಿಕರ ಗಮನಕ್ಕೆ ತರಬಯಸುವುದೇನೆಂದರೆ, ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಸರ್ಕಾರಿ ರಜಾದಿನ ಹಾಗೂ ಪ್ರತಿ ಮಂಗಳವಾರ ಹೊರತುಪಡಿಸಿ, ಉಳಿದಂತೆ, ಎಲ್ಲಾ ದಿನಗಳು ಬೆಳಗ್ಗೆ 7 ಗಂಟೆಯಿಂದ ಮದ್ಯಾಹ್ನ 12 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತೆರೆಯಬೇಕಾಗಿರುತ್ತದೆ. ಮಾಹೆಯ ಕೊನೆಯವರೆಗೂ ಪಡಿತರ ವಿತರಣೆಮಾಡಬೇಕಾಗಿರುತ್ತದೆ.
ಒಂದು ವೇಳೆ ತಾಲ್ಲೂಕುಗಳಲ್ಲಿ ಈ ಬಗ್ಗೆ ಅಂದರೆ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಕಾರ್ಯನಿರ್ವಹಿಸದೇ ಇದ್ದಲ್ಲಿ ದೇವನಹಳ್ಳಿ ತಾಲ್ಲೂಕು ಆಹಾರ ಶಿರಸ್ತೇದಾರ್ ಶ್ರೀಧರ್.ಎನ್(9945724948), ದೇವನಹಳ್ಳಿ ತಾಲ್ಲೂಕು ಆಹಾರ ನಿರೀಕ್ಷಕರು ಕೆ.ಶ್ಯಾಮ್ಪ್ರಸಾದ್(9448376570), ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ಶಿರಸ್ತೇದಾರ್ ಶಶಿಕಲಾ.ಈ(9110672505), ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ನಿರೀಕ್ಷಕರು ರಾಜು ಸಬಸ್ಟೀನ್(9945275227), ಹೊಸಕೋಟೆ ತಾಲ್ಲೂಕು ಆಹಾರ ಶಿರಸ್ತೇದಾರ್ ವಿ ನಟರಾಜ್ ರೆಡ್ಡಿ(9902294444), ಹೊಸಕೋಟೆ ತಾಲ್ಲೂಕು ಆಹಾರ ನಿರೀಕ್ಷಕರು ಬಿ.ಶಿವಕುಮಾರ್(9902805563), ನೆಲಮಂಗಲ ತಾಲ್ಲೂಕು ಆಹಾರ ಶಿರಸ್ತೇದಾರ್ ಕೃಷ್ಣಮೂರ್ತಿ(8660184016), ನೆಲಮಂಗಲ ತಾಲ್ಲೂಕು ಆಹಾರ ನಿರೀಕ್ಷಕರು ಜಯಕುಮಾರ್(9886781111), ನೆಲಮಂಗಲ ತಾಲ್ಲೂಕು ಆಹಾರ ನಿರೀಕ್ಷಕರು ಸೈಯದ್ ಅಮಾನುಲ್ಲಾ(9036434552)ತಾಲ್ಲೂಕು ಆಹಾರ ಶಾಖೆ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…