ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲ್ಲೂಕಿನ ಸಾರ್ವಜನಿಕರ ಗಮನಕ್ಕೆ ತರಬಯಸುವುದೇನೆಂದರೆ, ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಸರ್ಕಾರಿ ರಜಾದಿನ ಹಾಗೂ ಪ್ರತಿ ಮಂಗಳವಾರ ಹೊರತುಪಡಿಸಿ, ಉಳಿದಂತೆ, ಎಲ್ಲಾ ದಿನಗಳು ಬೆಳಗ್ಗೆ 7 ಗಂಟೆಯಿಂದ ಮದ್ಯಾಹ್ನ 12 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತೆರೆಯಬೇಕಾಗಿರುತ್ತದೆ. ಮಾಹೆಯ ಕೊನೆಯವರೆಗೂ ಪಡಿತರ ವಿತರಣೆಮಾಡಬೇಕಾಗಿರುತ್ತದೆ.
ಒಂದು ವೇಳೆ ತಾಲ್ಲೂಕುಗಳಲ್ಲಿ ಈ ಬಗ್ಗೆ ಅಂದರೆ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಕಾರ್ಯನಿರ್ವಹಿಸದೇ ಇದ್ದಲ್ಲಿ ದೇವನಹಳ್ಳಿ ತಾಲ್ಲೂಕು ಆಹಾರ ಶಿರಸ್ತೇದಾರ್ ಶ್ರೀಧರ್.ಎನ್(9945724948), ದೇವನಹಳ್ಳಿ ತಾಲ್ಲೂಕು ಆಹಾರ ನಿರೀಕ್ಷಕರು ಕೆ.ಶ್ಯಾಮ್ಪ್ರಸಾದ್(9448376570), ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ಶಿರಸ್ತೇದಾರ್ ಶಶಿಕಲಾ.ಈ(9110672505), ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ನಿರೀಕ್ಷಕರು ರಾಜು ಸಬಸ್ಟೀನ್(9945275227), ಹೊಸಕೋಟೆ ತಾಲ್ಲೂಕು ಆಹಾರ ಶಿರಸ್ತೇದಾರ್ ವಿ ನಟರಾಜ್ ರೆಡ್ಡಿ(9902294444), ಹೊಸಕೋಟೆ ತಾಲ್ಲೂಕು ಆಹಾರ ನಿರೀಕ್ಷಕರು ಬಿ.ಶಿವಕುಮಾರ್(9902805563), ನೆಲಮಂಗಲ ತಾಲ್ಲೂಕು ಆಹಾರ ಶಿರಸ್ತೇದಾರ್ ಕೃಷ್ಣಮೂರ್ತಿ(8660184016), ನೆಲಮಂಗಲ ತಾಲ್ಲೂಕು ಆಹಾರ ನಿರೀಕ್ಷಕರು ಜಯಕುಮಾರ್(9886781111), ನೆಲಮಂಗಲ ತಾಲ್ಲೂಕು ಆಹಾರ ನಿರೀಕ್ಷಕರು ಸೈಯದ್ ಅಮಾನುಲ್ಲಾ(9036434552)ತಾಲ್ಲೂಕು ಆಹಾರ ಶಾಖೆ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…