Categories: ಕೋಲಾರ

ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಎಸೆತ ವಿಚಾರ: ವಕೀಲನ ವಿರುದ್ಧ ಕ್ರಮಕ್ಕೆ ಕದಸಂಸ ಒತ್ತಾಯ

ಕೋಲಾರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ರವರ ಮೇಲಿನ ಘಟನೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಅವಮಾನವಾಗಿದೆ ಸಾಮಾಜಿಕ ನ್ಯಾಯ ಮತ್ತು ಜ್ಯಾತ್ಯಾತೀತ ನಿಲುವು ಹೊಂದಿರುವ ನ್ಯಾಯಾಧೀಶರ ಮೇಲಿನ ಘಟನೆಯು ಖಂಡನೀಯವಾಗಿದ್ದು ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರ ಎಚ್ಚರವಹಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕದಸಂಸ) ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಕಳಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ವಿ ನಾರಾಯಣಸ್ವಾಮಿ ಮಾತನಾಡಿ ಭಾರತ ಸಂವಿಧಾನದ ಅತ್ಯುನ್ನತ ಅಂಗವಾದ ಸರ್ವೋಚ್ಚ ನ್ಯಾಯಾಲಯದ ನ್ಯಾಯ ಪೀಠದ ಮೇಲೆ ನಡೆದ ಶೂ ಎಸೆತದ ದಾಳಿಯನ್ನು ಪ್ರತಿಯೊಬ್ಬ ನಾಗರೀಕರು ಖಂಡಿಸಬೇಕಾಗಿದೆ ನ ಭಾರತದ ರಾಷ್ಟ್ರಪತಿಗಳು ತಕ್ಷಣ ಮಧ್ಯ ಪ್ರವೇಶ ಮಾಡಿ ಈ ಕೃತ್ಯ ಎಸಗಿರುವ ಆರೋಪಿ ರಾಕೇಶ ಕಿಶೋರ್ ಅವರನ್ನು ಕೂಡಲೇ ಬಂಧಿಸಿ ಉನ್ನತ ನ್ಯಾಯಾಂಗ ತನಿಖೆ ನಡೆಸಿ, ಈತನ ಕುಟುಂಬಕ್ಕೆ ಸಂಬಂಧಪಟ್ಟ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಹಾಗೂ ಘಟನೆಯ ಹಿಂದೆ ವ್ಯವಸ್ಥಿತ ಪಿತೂರಿ ಮಾಡಿರುವ ಪ್ರಚೋದಕರನ್ನು ಪತ್ತೆ ಹಚ್ಚಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ವೇಮಗಲ್ ಸುಧಾಕರ್ ಮಾತನಾಡಿ ಸಂವಿಧಾನದ ಅಂಗವಾದ ನ್ಯಾಯಾಂಗದ ಹುದ್ದೆಯನ್ನು ಒಬ್ಬ ಪರಿಶಿಷ್ಟ ಜಾತಿಯವರಿಗೆ ಈ ಹುದ್ದೆ ಸಿಕ್ಕಿರುವುದನ್ನು ಸಹಿಸದ ಮನುವಾದಿ ಜಾತಿವಾದಿ ಕೋಮುವಾದಿಗಳ ಕುತಂತ್ರದಿಂದ ಈ ಘಟನೆ ನಡೆಸಿರುವುದನ್ನು ಕದಸಂಸ ಖಂಡಿಸುತ್ತದೆ ಈ ಅಹಿತಕರ ಘಟನೆಯ ಹೊಣೆಯನ್ನು ಭಾರತದ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರವರನ್ನು ಹೊಣೆಗಾರರನ್ನಾಗಿ ಮಾಡಬೇಕು ತಪ್ಪು ಮಾಡಿರುವ ಜಾತಿವಾದಿ ರಾಕೇಶ್ ಕಿಶೋರ್ ವಿರುದ್ದ ತನಿಖೆ ನಡೆಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ಟಿ.ಜಯರಾಮ್, ಜಿಲ್ಲಾ ಸಂಘಟನಾ ಸಂಚಾಲಕರಾದ ಕೆಂಬೋಡಿ ರವೀಂದ್ರ ಕುಮಾರ್, ವಡಗೇರಿ ಮುನಿಯಪ್ಪ ಗುರುಮೂರ್ತಿ, ಮಗದುಮ್ ಷರೀಫ್, ಮಹಿಳಾ ಸಂಚಾಲಕಿ ಸೊಣ್ಣೇನಹಳ್ಳಿ ಮಂಜುಳಾ, ಮುಖಂಡರಾದ ಸಿ.ಎನ್ ಚಂದ್ರಶೇಖರ್, ಹನುಮಂತು, ಮಂಜುನಾಥ್, ಶೇಷಾದ್ರಿ, ರಮೇಶ್, ಬೈರೇಗೌಡ, ಅಮರಾವತಿ, ಸುಹೇಲ್ ಅಹಮದ್, ಅಮರಾವತಿ, ವರಲಕ್ಷ್ಮೀ, ರಾಧಮ್ಮ, ಶಶಿಕಲಾ, ಮುಂತಾದವರು ಇದ್ದರು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

6 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

7 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

18 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

18 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

18 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

1 day ago