Categories: ಕೋಲಾರ

ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಎಸೆತ ವಿಚಾರ: ವಕೀಲನ ವಿರುದ್ಧ ಕ್ರಮಕ್ಕೆ ಕದಸಂಸ ಒತ್ತಾಯ

ಕೋಲಾರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ರವರ ಮೇಲಿನ ಘಟನೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಅವಮಾನವಾಗಿದೆ ಸಾಮಾಜಿಕ ನ್ಯಾಯ ಮತ್ತು ಜ್ಯಾತ್ಯಾತೀತ ನಿಲುವು ಹೊಂದಿರುವ ನ್ಯಾಯಾಧೀಶರ ಮೇಲಿನ ಘಟನೆಯು ಖಂಡನೀಯವಾಗಿದ್ದು ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರ ಎಚ್ಚರವಹಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕದಸಂಸ) ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಕಳಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ವಿ ನಾರಾಯಣಸ್ವಾಮಿ ಮಾತನಾಡಿ ಭಾರತ ಸಂವಿಧಾನದ ಅತ್ಯುನ್ನತ ಅಂಗವಾದ ಸರ್ವೋಚ್ಚ ನ್ಯಾಯಾಲಯದ ನ್ಯಾಯ ಪೀಠದ ಮೇಲೆ ನಡೆದ ಶೂ ಎಸೆತದ ದಾಳಿಯನ್ನು ಪ್ರತಿಯೊಬ್ಬ ನಾಗರೀಕರು ಖಂಡಿಸಬೇಕಾಗಿದೆ ನ ಭಾರತದ ರಾಷ್ಟ್ರಪತಿಗಳು ತಕ್ಷಣ ಮಧ್ಯ ಪ್ರವೇಶ ಮಾಡಿ ಈ ಕೃತ್ಯ ಎಸಗಿರುವ ಆರೋಪಿ ರಾಕೇಶ ಕಿಶೋರ್ ಅವರನ್ನು ಕೂಡಲೇ ಬಂಧಿಸಿ ಉನ್ನತ ನ್ಯಾಯಾಂಗ ತನಿಖೆ ನಡೆಸಿ, ಈತನ ಕುಟುಂಬಕ್ಕೆ ಸಂಬಂಧಪಟ್ಟ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಹಾಗೂ ಘಟನೆಯ ಹಿಂದೆ ವ್ಯವಸ್ಥಿತ ಪಿತೂರಿ ಮಾಡಿರುವ ಪ್ರಚೋದಕರನ್ನು ಪತ್ತೆ ಹಚ್ಚಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ವೇಮಗಲ್ ಸುಧಾಕರ್ ಮಾತನಾಡಿ ಸಂವಿಧಾನದ ಅಂಗವಾದ ನ್ಯಾಯಾಂಗದ ಹುದ್ದೆಯನ್ನು ಒಬ್ಬ ಪರಿಶಿಷ್ಟ ಜಾತಿಯವರಿಗೆ ಈ ಹುದ್ದೆ ಸಿಕ್ಕಿರುವುದನ್ನು ಸಹಿಸದ ಮನುವಾದಿ ಜಾತಿವಾದಿ ಕೋಮುವಾದಿಗಳ ಕುತಂತ್ರದಿಂದ ಈ ಘಟನೆ ನಡೆಸಿರುವುದನ್ನು ಕದಸಂಸ ಖಂಡಿಸುತ್ತದೆ ಈ ಅಹಿತಕರ ಘಟನೆಯ ಹೊಣೆಯನ್ನು ಭಾರತದ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರವರನ್ನು ಹೊಣೆಗಾರರನ್ನಾಗಿ ಮಾಡಬೇಕು ತಪ್ಪು ಮಾಡಿರುವ ಜಾತಿವಾದಿ ರಾಕೇಶ್ ಕಿಶೋರ್ ವಿರುದ್ದ ತನಿಖೆ ನಡೆಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ಟಿ.ಜಯರಾಮ್, ಜಿಲ್ಲಾ ಸಂಘಟನಾ ಸಂಚಾಲಕರಾದ ಕೆಂಬೋಡಿ ರವೀಂದ್ರ ಕುಮಾರ್, ವಡಗೇರಿ ಮುನಿಯಪ್ಪ ಗುರುಮೂರ್ತಿ, ಮಗದುಮ್ ಷರೀಫ್, ಮಹಿಳಾ ಸಂಚಾಲಕಿ ಸೊಣ್ಣೇನಹಳ್ಳಿ ಮಂಜುಳಾ, ಮುಖಂಡರಾದ ಸಿ.ಎನ್ ಚಂದ್ರಶೇಖರ್, ಹನುಮಂತು, ಮಂಜುನಾಥ್, ಶೇಷಾದ್ರಿ, ರಮೇಶ್, ಬೈರೇಗೌಡ, ಅಮರಾವತಿ, ಸುಹೇಲ್ ಅಹಮದ್, ಅಮರಾವತಿ, ವರಲಕ್ಷ್ಮೀ, ರಾಧಮ್ಮ, ಶಶಿಕಲಾ, ಮುಂತಾದವರು ಇದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

10 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

11 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago