Categories: ಕೋಲಾರ

ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಎಸೆತ ವಿಚಾರ: ವಕೀಲನ ವಿರುದ್ಧ ಕ್ರಮಕ್ಕೆ ಕದಸಂಸ ಒತ್ತಾಯ

ಕೋಲಾರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ರವರ ಮೇಲಿನ ಘಟನೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಅವಮಾನವಾಗಿದೆ ಸಾಮಾಜಿಕ ನ್ಯಾಯ ಮತ್ತು ಜ್ಯಾತ್ಯಾತೀತ ನಿಲುವು ಹೊಂದಿರುವ ನ್ಯಾಯಾಧೀಶರ ಮೇಲಿನ ಘಟನೆಯು ಖಂಡನೀಯವಾಗಿದ್ದು ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರ ಎಚ್ಚರವಹಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕದಸಂಸ) ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಕಳಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ವಿ ನಾರಾಯಣಸ್ವಾಮಿ ಮಾತನಾಡಿ ಭಾರತ ಸಂವಿಧಾನದ ಅತ್ಯುನ್ನತ ಅಂಗವಾದ ಸರ್ವೋಚ್ಚ ನ್ಯಾಯಾಲಯದ ನ್ಯಾಯ ಪೀಠದ ಮೇಲೆ ನಡೆದ ಶೂ ಎಸೆತದ ದಾಳಿಯನ್ನು ಪ್ರತಿಯೊಬ್ಬ ನಾಗರೀಕರು ಖಂಡಿಸಬೇಕಾಗಿದೆ ನ ಭಾರತದ ರಾಷ್ಟ್ರಪತಿಗಳು ತಕ್ಷಣ ಮಧ್ಯ ಪ್ರವೇಶ ಮಾಡಿ ಈ ಕೃತ್ಯ ಎಸಗಿರುವ ಆರೋಪಿ ರಾಕೇಶ ಕಿಶೋರ್ ಅವರನ್ನು ಕೂಡಲೇ ಬಂಧಿಸಿ ಉನ್ನತ ನ್ಯಾಯಾಂಗ ತನಿಖೆ ನಡೆಸಿ, ಈತನ ಕುಟುಂಬಕ್ಕೆ ಸಂಬಂಧಪಟ್ಟ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಹಾಗೂ ಘಟನೆಯ ಹಿಂದೆ ವ್ಯವಸ್ಥಿತ ಪಿತೂರಿ ಮಾಡಿರುವ ಪ್ರಚೋದಕರನ್ನು ಪತ್ತೆ ಹಚ್ಚಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ವೇಮಗಲ್ ಸುಧಾಕರ್ ಮಾತನಾಡಿ ಸಂವಿಧಾನದ ಅಂಗವಾದ ನ್ಯಾಯಾಂಗದ ಹುದ್ದೆಯನ್ನು ಒಬ್ಬ ಪರಿಶಿಷ್ಟ ಜಾತಿಯವರಿಗೆ ಈ ಹುದ್ದೆ ಸಿಕ್ಕಿರುವುದನ್ನು ಸಹಿಸದ ಮನುವಾದಿ ಜಾತಿವಾದಿ ಕೋಮುವಾದಿಗಳ ಕುತಂತ್ರದಿಂದ ಈ ಘಟನೆ ನಡೆಸಿರುವುದನ್ನು ಕದಸಂಸ ಖಂಡಿಸುತ್ತದೆ ಈ ಅಹಿತಕರ ಘಟನೆಯ ಹೊಣೆಯನ್ನು ಭಾರತದ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರವರನ್ನು ಹೊಣೆಗಾರರನ್ನಾಗಿ ಮಾಡಬೇಕು ತಪ್ಪು ಮಾಡಿರುವ ಜಾತಿವಾದಿ ರಾಕೇಶ್ ಕಿಶೋರ್ ವಿರುದ್ದ ತನಿಖೆ ನಡೆಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ಟಿ.ಜಯರಾಮ್, ಜಿಲ್ಲಾ ಸಂಘಟನಾ ಸಂಚಾಲಕರಾದ ಕೆಂಬೋಡಿ ರವೀಂದ್ರ ಕುಮಾರ್, ವಡಗೇರಿ ಮುನಿಯಪ್ಪ ಗುರುಮೂರ್ತಿ, ಮಗದುಮ್ ಷರೀಫ್, ಮಹಿಳಾ ಸಂಚಾಲಕಿ ಸೊಣ್ಣೇನಹಳ್ಳಿ ಮಂಜುಳಾ, ಮುಖಂಡರಾದ ಸಿ.ಎನ್ ಚಂದ್ರಶೇಖರ್, ಹನುಮಂತು, ಮಂಜುನಾಥ್, ಶೇಷಾದ್ರಿ, ರಮೇಶ್, ಬೈರೇಗೌಡ, ಅಮರಾವತಿ, ಸುಹೇಲ್ ಅಹಮದ್, ಅಮರಾವತಿ, ವರಲಕ್ಷ್ಮೀ, ರಾಧಮ್ಮ, ಶಶಿಕಲಾ, ಮುಂತಾದವರು ಇದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

3 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago