ಕೋಲಾರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ರವರ ಮೇಲಿನ ಘಟನೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಅವಮಾನವಾಗಿದೆ ಸಾಮಾಜಿಕ ನ್ಯಾಯ ಮತ್ತು ಜ್ಯಾತ್ಯಾತೀತ ನಿಲುವು ಹೊಂದಿರುವ ನ್ಯಾಯಾಧೀಶರ ಮೇಲಿನ ಘಟನೆಯು ಖಂಡನೀಯವಾಗಿದ್ದು ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರ ಎಚ್ಚರವಹಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕದಸಂಸ) ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಕಳಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ವಿ ನಾರಾಯಣಸ್ವಾಮಿ ಮಾತನಾಡಿ ಭಾರತ ಸಂವಿಧಾನದ ಅತ್ಯುನ್ನತ ಅಂಗವಾದ ಸರ್ವೋಚ್ಚ ನ್ಯಾಯಾಲಯದ ನ್ಯಾಯ ಪೀಠದ ಮೇಲೆ ನಡೆದ ಶೂ ಎಸೆತದ ದಾಳಿಯನ್ನು ಪ್ರತಿಯೊಬ್ಬ ನಾಗರೀಕರು ಖಂಡಿಸಬೇಕಾಗಿದೆ ನ ಭಾರತದ ರಾಷ್ಟ್ರಪತಿಗಳು ತಕ್ಷಣ ಮಧ್ಯ ಪ್ರವೇಶ ಮಾಡಿ ಈ ಕೃತ್ಯ ಎಸಗಿರುವ ಆರೋಪಿ ರಾಕೇಶ ಕಿಶೋರ್ ಅವರನ್ನು ಕೂಡಲೇ ಬಂಧಿಸಿ ಉನ್ನತ ನ್ಯಾಯಾಂಗ ತನಿಖೆ ನಡೆಸಿ, ಈತನ ಕುಟುಂಬಕ್ಕೆ ಸಂಬಂಧಪಟ್ಟ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಹಾಗೂ ಘಟನೆಯ ಹಿಂದೆ ವ್ಯವಸ್ಥಿತ ಪಿತೂರಿ ಮಾಡಿರುವ ಪ್ರಚೋದಕರನ್ನು ಪತ್ತೆ ಹಚ್ಚಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ವೇಮಗಲ್ ಸುಧಾಕರ್ ಮಾತನಾಡಿ ಸಂವಿಧಾನದ ಅಂಗವಾದ ನ್ಯಾಯಾಂಗದ ಹುದ್ದೆಯನ್ನು ಒಬ್ಬ ಪರಿಶಿಷ್ಟ ಜಾತಿಯವರಿಗೆ ಈ ಹುದ್ದೆ ಸಿಕ್ಕಿರುವುದನ್ನು ಸಹಿಸದ ಮನುವಾದಿ ಜಾತಿವಾದಿ ಕೋಮುವಾದಿಗಳ ಕುತಂತ್ರದಿಂದ ಈ ಘಟನೆ ನಡೆಸಿರುವುದನ್ನು ಕದಸಂಸ ಖಂಡಿಸುತ್ತದೆ ಈ ಅಹಿತಕರ ಘಟನೆಯ ಹೊಣೆಯನ್ನು ಭಾರತದ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರವರನ್ನು ಹೊಣೆಗಾರರನ್ನಾಗಿ ಮಾಡಬೇಕು ತಪ್ಪು ಮಾಡಿರುವ ಜಾತಿವಾದಿ ರಾಕೇಶ್ ಕಿಶೋರ್ ವಿರುದ್ದ ತನಿಖೆ ನಡೆಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ಟಿ.ಜಯರಾಮ್, ಜಿಲ್ಲಾ ಸಂಘಟನಾ ಸಂಚಾಲಕರಾದ ಕೆಂಬೋಡಿ ರವೀಂದ್ರ ಕುಮಾರ್, ವಡಗೇರಿ ಮುನಿಯಪ್ಪ ಗುರುಮೂರ್ತಿ, ಮಗದುಮ್ ಷರೀಫ್, ಮಹಿಳಾ ಸಂಚಾಲಕಿ ಸೊಣ್ಣೇನಹಳ್ಳಿ ಮಂಜುಳಾ, ಮುಖಂಡರಾದ ಸಿ.ಎನ್ ಚಂದ್ರಶೇಖರ್, ಹನುಮಂತು, ಮಂಜುನಾಥ್, ಶೇಷಾದ್ರಿ, ರಮೇಶ್, ಬೈರೇಗೌಡ, ಅಮರಾವತಿ, ಸುಹೇಲ್ ಅಹಮದ್, ಅಮರಾವತಿ, ವರಲಕ್ಷ್ಮೀ, ರಾಧಮ್ಮ, ಶಶಿಕಲಾ, ಮುಂತಾದವರು ಇದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…