ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ಶೂ ಎಸೆತ ವಿಚಾರ: ವಕೀಲ ಆರ್.ವಿ.ಮಹೇಶ್ ಕುಮಾರ್ ಖಂಡನೆ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆತ ಪ್ರಯತ್ನದ ಪ್ರಕರಣವನ್ನು ವಕೀಲ ಆರ್.ವಿ.ಮಹೇಶ್ ಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಮಾತನಾಡಿದ ವಕೀಲ ಆರ್.ವಿ.ಮಹೇಶ್ ಕುಮಾರ್, ಇದು ಮುಖ್ಯ ನ್ಯಾಯಮೂರ್ತಿಯವರ ಮೇಲೆ ನಡೆದ ದಾಳಿಯಲ್ಲ. ಇದು ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸಂವಿಧಾನ ಜಾರಿಯಾದಾಗಲೇ ನಮ್ಮ ದೇಶದ ಸಂವಿಧಾನವನ್ನು ಈ ಸನಾತನವಾದಿಗಳು ವಿರೋಧಿಸಿದ್ದರು. ದಲಿತನೊಬ್ಬ ಮುಖ್ಯ ನ್ಯಾಯಮೂರ್ತಿಯ ಪೀಠದಲ್ಲಿ ಕುಳಿತು ನ್ಯಾಯ ಕೊಡುವುದನ್ನು ಈ ಸನಾತನವಾದಿಗಳು ಯಾವೊತ್ತು ಒಪ್ಪಿಕೊಳ್ಳುವುದಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ನಡೆಸಿ, ಈ ದಾಳಿಯ ಹಿಂದಿನ ಸನಾತನವಾದಿಗಳ ಹುನ್ನಾರವನ್ನು ಕೇಂದ್ರ ಸರ್ಕಾರ ಬಯಲಿಗೆಳೆಯಬೇಕೆಂದು ಒತ್ತಾಯಿಸಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿಯೇ ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಅವರ ಮೇಲೆ ದಾಳಿ ನಡೆದಿದೆ ಎಂದರೆ  ಸಮಾಜ ಯಾವ ದಿಕ್ಕಿನಲ್ಲಿ ಹೋಗುತ್ತಾ ಇದೆ ಯೋಚನೆ ಮಾಡಬೇಕಾದ ಸಂದರ್ಭ ಬಂದಿದೆ ಪ್ರತಿಯೊಬ್ಬ ಭಾರತೀಯರು ಅವರ ಜೊತೆ ನಿಲ್ಲಬೇಕು ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಕಳಕಳಿಯ ನ್ಯಾಯಮೂರ್ತಿಗಳಾಗಿ ದೇಶಾದ್ಯಂತ ಗುರುತಿಸಿಕೊಂಡಿದ್ದಾರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ನಂಬಿಕೆಗೆ ವಕೀಲ ದ್ರೋಹ ಬಗೆದಿದ್ದಾನೆ ಎಂದು ಆರೋಪಿಸಿದರು.

ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು  ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಬೇಧವಿಲ್ಲದವರು ದೇಶದಲ್ಲಿ ಎಲ್ಲಾ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ  ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕು ಶೋಷಿತ ಸಮುದಾಯದವರಾದ ಬಿ.ಆರ್. ಗವಾಯಿ ಅವರು ತಮ್ಮ ಶ್ರಮದಿಂದ ದೇಶದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಹೊರಹೊಮ್ಮಿದ್ದಾರೆ. ಅವರ ಮೇಲಿನ ಹಿಂಸಾತ್ಮಕ ಘಟನೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ ಎಂದರು.

Ramesh Babu

Journalist

Recent Posts

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

11 hours ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

15 hours ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

15 hours ago

ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…

17 hours ago

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವ ಹುಡುಕುತ್ತಾ ಹೊರಟಾಗ……

ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…

2 days ago

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…

2 days ago