Categories: ಕೋಲಾರ

ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ಶೂ ಎಸೆತ ಖಂಡನೀಯ: ಕಾನೂನು ಕ್ರಮಕ್ಕೆ ಒತ್ತಾಯ

ಕೋಲಾರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆತದ ದಾಳಿಯು ಸಂವಿಧಾನಕ್ಕೆ ಮಾಡಿರುವ ಅವಮಾನವಾಗಿದೆ ಮುಖ್ಯನ್ಯಾಯಮೂರ್ತಿಗಳಿಗೆ ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ಪಕ್ಷದ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯ ಮಾಡಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಸುಪ್ರೀಂ ಕೋರ್ಟ್‌ನಲ್ಲಿಯೇ ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಅವರ ಮೇಲೆ ದಾಳಿ ನಡೆದಿದೆ ಎಂದರೆ ಸಮಾಜ ಯಾವ ದಿಕ್ಕಿನಲ್ಲಿ ಹೋಗುತ್ತಾ ಇದೆ ಯೋಚನೆ ಮಾಡಬೇಕಾದ ಸಂದರ್ಭ ಬಂದಿದೆ ಪ್ರತಿಯೊಬ್ಬ ಭಾರತೀಯರು ಅವರ ಜೊತೆ ನಿಲ್ಲಬೇಕು ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಮಾಜಿಕ ಕಳಕಳಿಯ ನ್ಯಾಯಮೂರ್ತಿಗಳಾಗಿ ದೇಶಾದ್ಯಂತ ಗುರುತಿಸಿಕೊಂಡಿದ್ದಾರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ನಂಬಿಕೆಗೆ ವಕೀಲ ದ್ರೋಹ ಬಗೆದಿದ್ದಾನೆ ಎಂದು ಆರೋಪಿಸಿದರು

ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಬೇಧವಿಲ್ಲದವರು ದೇಶದಲ್ಲಿ ಎಲ್ಲಾ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕು ಶೋಷಿತ ಸಮುದಾಯದವರಾದ ಬಿ.ಆರ್. ಗವಾಯಿ ಅವರು ತಮ್ಮ ಶ್ರಮದಿಂದ ದೇಶದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಹೊರಹೊಮ್ಮಿದ್ದಾರೆ. ಅವರ ಮೇಲಿನ ಹಿಂಸಾತ್ಮಕ ಘಟನೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ ಈ ಕೃತ್ಯವನ್ನು ಎಸಗಿದ ವಕೀಲನ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ನ್ಯಾಯಾಂಗ ವ್ಯವಸ್ಥೆಯ ಗೌರವವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಜವಾಬ್ದಾರಿಯಾಗಿದೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದ್ದಾರೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

3 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

17 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

18 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

19 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

19 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

23 hours ago