ದೊಡ್ಡಬಳ್ಳಾಪುರ ಕೋರ್ಟ್ ಆವರಣದಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕ್ ಮಾಡಿದ್ದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದಲ್ಲದೇ ದಂಡ ಕೂಡ ವಿಧಿಸಿದರು.
ನ್ಯಾಯಾಧೀಶರ ಸೂಚನೆ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಅಡ್ಡಾದಿಡ್ಡಿಯಾಗಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಜಪ್ತಿ ಮಾಡಿ ಕೆಲವೊಂದು ವಾಹನಗಳ ಮಾಲೀಕರಿಗೆ ದಂಡ ಕೂಡ ವಿಧಿಸಿದರು.
ಇನ್ನು ಮುಂದೆ ನಿಗದಿತ ವಾಹನ ನಿಲುಗಡೆ ಸ್ಥಳದಲ್ಲಿ ಮಾತ್ರ ವಾಹನಗಳನ್ನು ಪಾರ್ಕ್ ಮಾಡುವಂತೆ ಎಚ್ಚರಿಸಿದರು.
ನ್ಯಾಯಾಲಯದ ಒಳಗಡೆ ಪ್ರವೇಶಿಸುವ ಮುನ್ನ ಸಾರ್ವಜನಿಕರು ಕೆಲವೊಂದು ಶಿಸ್ತುಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇ ಬೇಕಾಗಿರುತ್ತದೆ. ಸಾರ್ವಜನಿಕರು ತಮ್ಮ ಮೊಬೈಲ್ ಗಳನ್ನು ಸೈಲೆಂಟ್ ಅಥವಾ ಸ್ವೀಚ್ ಆಫ್ ಮಾಡತಕ್ಕದು. ನ್ಯಾಯಾಲಯದ ಆವರಣದಲ್ಲಿ ತಂಬಾಕು ಹಾಗೂ ಧೂಮಪಾನ ಮಾಡಬಾರದು. ಸಾರ್ವಜನಿಕರು ನ್ಯಾಯಾಲಯವನ್ನು ದೇವಾಲಯದಂತೆ ಪರಿಗಣಿಸಿ ಶಿಸ್ತಿನಿಂದ ವರ್ತಿಸುವುದು… ನ್ಯಾಯಾಲಯ ಕಲಾಪ ನಡೆಯುತ್ತಿರುವಾಗ ನಿಶ್ಯಬ್ಧವಾಗಿರುವುದು. ನ್ಯಾಯಾಲಯದ ಒಳಭಾಗದಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿ ನಿಂತು ಮಾತನಾಡಬಾರದು. ನ್ಯಾಯಾಲಯ ಒಳಂಗಣದಲ್ಲಿ ಉಗುಳುವುದು.. ಪ್ಲಾಸ್ಟಿಕ್ ಬಾಟಲ್ ಗಗಳನ್ನು ಹಾಕದೆ ಸ್ವಚ್ಛತೆ ಕಾಪಾಡುವುದು.. ನ್ಯಾಯಾಲಯದಲ್ಲಿನ ಶೌಚಲಯವನ್ನು ಸ್ವಚ್ಛತೆಯಿಂದಿಡುವುದು.. ಕಕ್ಷಿದಾರರು ವಕೀಲರೊಂದಿಗೆ ಸೌಜನ್ಯದಿಂದ ವರ್ತಿಸುವುದು… ಸೇರಿದಂತೆ ಇತರೆ ಶಿಸ್ತುಗಳನ್ನು ಪಾಲನೆ ಮಾಡಬೇಕು….
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…