Categories: ಕೋಲಾರ

ನ್ಯಾಯಾಲಯ ಆದೇಶ ಧಿಕ್ಕರಿಸಿ ಜಾಗ ಒತ್ತುವರಿ ಪ್ರತಿಭಟನೆಗೆ ಅನುಮತಿ ನಿರಾಕರಣೆ ಖಂಡನೀಯ

ಕೋಲಾರ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಿಳಿಸಿರುವ ನ್ಯಾಯಾಲಯ ಆದೇಶವನ್ನೂ ಧಿಕ್ಕರಿಸಿ, ವಾಲ್ಮೀಕಿ ಭವನಕ್ಕೆ ಸೇರಿದ ಜಾಗವನ್ನು ಸ್ವಜನಪಕ್ಷಪಾತದ ಮೂಲಕ ನಸೀರ್ ಅಹಮದ್ ಸೂಚನೆಯಂತೆ ಕಲ್ಯಾಣ ಮಂಟಪದ ಮಾಲೀಕ ನ್ಯಾಮತ್‌ಗೆ ನೀಡುವ ಜಿಲ್ಲಾಧಿಕಾರಿ ಯತ್ನ ಖಂಡಿಸಿ ಅ.15 ರಿಂದ ನಡೆಸಬೇಕೆಂದಿದ್ದ ಪ್ರತಿಭಟನೆಗೂ ಅನುಮತಿ ನಿರಾಕರಿಸಿದ್ದಾರೆ ಎಂದು ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಆರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಮುಖಂಡ ಕೆ.ಆನಂದ್‌ಕುಮಾರ್, ಹಿಂದಿನ ಜಿಲ್ಲಾಧಿಕಾರಿ ಮಂಜುನಾಥ್ ಅವರೇ ಒತ್ತುವರಿಯಾಗಿರುವುದು ನಿಜ ಎಂದು ತಿಳಿಸಿ ತೆರವಿಗೂ ಮುಂದಾಗಿದ್ದರು ಆದರೆ ಈಗಿನ ಜಿಲ್ಲಾಧಿಕಾರಿ ಕಲ್ಯಾಣ ಮಂಟಪ ಮಾಲೀಕರು ಒತ್ತುವರಿ ಮಾಡಿರುವ ಜಾಗದ ಒತ್ತುವರಿಯನ್ನು ಸಕ್ರಮಗೊಳಿಸಲು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿ, ವಾಲ್ಮೀಕಿ ಜಯಂತಿಗೆ ನಮ್ಮ ವಿರೋಧವಿಲ್ಲ ಆದರೆ ಸರ್ಕಾರ ಭವನಕ್ಕಾಗಿ ನೀಡಿರುವ 31 ಗುಂಟೆ ಜಮೀನು ಉಳಿಸಿಕೊಳ್ಳಲು ಎಂತಹ ಹೋರಾಟಕ್ಕೂ ಹಿಂಜರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಲ್ಯಾಣಮಂಟಪ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಪಟ್ಟಭದ್ರ ಹಿತಾಸಕ್ತಿಗಳು ಈ ಯತ್ನ ನಡೆಸಿದ್ದು, ಈ ಸಂಬಂಧ ನಮ್ಮ ಒಕ್ಕೂಟದಿಂದ ಪ್ರತಿಭಟನೆ ಜತೆಗೆ ಕಾನೂನು ಹೋರಾಟವನ್ನೂ ನಡೆಸುವುದಾಗಿ ಎಚ್ಚರಿಸಿದರು.

ನಮ್ಮ ಹೋರಾಟಕ್ಕೆ ಅನುಮತಿ ನೀಡದೇ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ವಿರುದ್ದವಾಗಿ ನಡೆದುಕೊಂಡಿದ್ದಾರೆ ಎಂದು ದೂರಿದ ಅವರು, ವಾಲ್ಮೀಕಿವೃತ್ತದಲ್ಲಿ ನಡೆಯುವ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸುತ್ತೇವೆ, ಜಿಲ್ಲಾಡಳಿತದ ಕಾರ್ಯಕ್ರಮದಿಂದ ದೂರವಿದ್ದು ಜಯಂತಿ ನಂತರ ಹೋರಾಟ ನಡೆಸುವುದು ನಿಶ್ಚಿತ ಎಂದು ತಿಳಿಸಿದರು.

ಅ.೧೫ ರಿಂದ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಅನುಮತಿ ನೀಡಲು ಕೋರಿ ಗಲ್‌ಪೇಟೆ ಠಾಣೆಗೆ ಮನವಿ ಸಲ್ಲಿಸಿದ್ದೇವು ಆದರೆ ಮೂರು ದಿನ ನಿಧಾನಿಸಿ ವಾಲ್ಮೀಕಿ ಜಯಂತಿಯ ನೆಪವೊಡ್ಡಿ ಅನುಮತಿ ನಿರಾಕರಿಸಿದ್ದಾರೆ, ಒಂದು ಹಂತದಲ್ಲಿ ಡಿಸಿಯನ್ನು ಕೇಳಿ ಎಂದು ಪೊಲೀಸರು ಸೂಚಿಸಿದರು ಎಂದು ಆರೋಪಿಸಿದ ಅವರು, ವಿಧಾನಪರಿಷತ್ ಸದಸ್ಯ ಅನಿಲ್‌ಕುಮಾರ್ ಬಳಿ ಹೋದರೆ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್‌ರ ಜತೆ ಮಾತನಾಡಲು ಸೂಚಿಸಿದರು ಎಂದು ಕಿಡಿಕಾರಿದರು.

ಖಾಸಗಿ ಕಲ್ಯಾಣ ಮಂಟಪದ ಮಾಲೀಕರು ವಾಲ್ಮೀಕಿ ಭವನದ ಎರಡೂ ಕಾಲು ಗುಂಟೆಯಲ್ಲಿ ಕಟ್ಟಡ ನಿರ್ಮಿಸಿಕೊಂಡಿದ್ದಾರೆ. ಇದೀಗ ಅದರ ಜತೆಗೆ ಭವನಕ್ಕೆ ಸೇರಿದ 10 ಗುಂಟೆ ಸೇರಿಸಿ ಜಿಲ್ಲಾಡಳಿತದ ಹಣದಿಂದಲೇ ಕಾಂಪೌಂಡ್ ನಿರ್ಮಿಸಿಕೊಟ್ಟು ಸಮುದಾಯಕ್ಕೆ ವಂಚನೆ ಮಾಡಲು ಹೊರಟಿರುವ ಜಿಲ್ಲಾಡಳಿತದ ಕ್ರಮವನ್ನು ಖಂಡಿಸುವುದಾಗಿ ತಿಳಿಸಿದರು.

ಸಮುದಾಯದ ಮುಖಂಡ ನರಸಿಂಹಯ್ಯ ಮಾತನಾಡಿ, ನಗರದ ಕೋಡಿಕಣ್ಣೂರು ರಸ್ತೆಯಲ್ಲಿ ಸರ್ಕಾರದಿಂದ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನ ಜಾಗವನ್ನು ಪಕ್ಕದ ಕಲ್ಯಾಣ ಮಂಟಪದ ಮಾಲೀಕರು ಅಕ್ರಮ ಒತ್ತುವರಿ ಮಾಡಿಕೊಟ್ಟು ಕಟ್ಟಡ ನಿರ್ಮಿಸಿಕೊಂಡಿದ್ದಾರೆ, ಈ ಹಿಂದೆ 2018 ರಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ಜೆ.ಮಂಜುನಾಥ್ ಅವರು ಅಳತೆ ಮಾಡಿಸಿ ಒತ್ತುವರಿ ಮಾಡಿರುವುದನ್ನು ಗುರುತಿಸಿ ತೆರವು ಕಾರ್ಯಾಚರಣೆ ನಡೆಸಿದಾಗ ಕಲ್ಯಾಣ ಮಂಟಪ ಮಾಲೀಕರು ಒಂದು ವಾರ ಸಮಯಾವಕಾಶ ಕೋರಿ ಆನಂತರ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದರು ಎಂದು ತಿಳಿಸಿದರು.

ಮುಖಂಡ ಮಾದೇಶ್ ಮಾತನಾಡಿ, ನ್ಯಾಯಾಲಯದ ಪ್ರಕರಣ ಸಂಖ್ಯೆ ಒ.ಎಸ್.31/2019 ಮತ್ತು ಎಂ.ಎ16/2020 ರAತೆ ಎರಡೂ ಪಕ್ಷದವರು ಪ್ರಕರಣ ಇತ್ಯರ್ಥವಾಗುವವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯ ಆದೇಶ ಮಾಡಿದೆ.
ನ್ಯಾಯಲಯದ ಆದೇಶವಿದ್ದರೂ ಜಿಲ್ಲಾಡಳಿತ ಕಲ್ಯಾಣ ಮಂಟಪದ ಮಾಲೀಕರ ಜತೆ ಶಾಮೀಲಾಗಿ ಒತ್ತುವರಿ ಆಗಿರುವ ಸ್ಥಳವನ್ನು ತೆರವು ಮಾಡದೇ ಕಲ್ಯಾಣ ಮಂಟಪ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಕಾಂಪೌಂಡ್ ನಿರ್ಮಾಣ ಮಾಡುತ್ತಿರುವುದು ಖಂಡನೀಯ ಎಂದರು.

ಕೂಡಲೇ ಡಿಸಿಯವರು ತಾವು ಮಾಡುತ್ತಿರುವ ತಪ್ಪು ತಿದ್ದಿಕೊಂಡು ವಾಲ್ಮೀಕಿ ಭವನದ ಜಾಗ ಉಳಿಸಲು ಕ್ರಮಕೈಗೊಳ್ಳಬೇಕು, ಇಲ್ಲವಾದಲ್ಲಿ ಇದು ಸ್ವಜನಪಕ್ಷಪಾತವಾಗುತ್ತದೆ ಎಂದು ಎಚ್ಚರಿಸುತ್ತಾ ಒಕ್ಕೂಟ ಈ ಸಂಬಂಧ ಎಂತಹ ಹೋರಾಟಕ್ಕೂ ಸಿದ್ದ ಎಂದರು.

ಸುದ್ದಿಗೋಷ್ಟಿಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರಾದ ನಾಗರಾಜ್, ಚಲಪತಿ, ತಿಮ್ಮಣ್ಣ, ಕೆಜಿಐಡಿ ನಾಗರಾಜ್, ಕೆಎಸ್‌ಆರ್‌ಟಿಸಿ ಮುನಿಯಪ್ಪ,ಬಾಬು, ಮುನೆಯ್ಯ, ಐತರಾಸನಹಳ್ಳಿ ನರಸಿಂಹಯ್ಯ, ಗಿರೀಶ್, ಓಬಟ್ಟಿ ಮೂರ್ತಿ, ವೆಂಕಟೇಶ್, ನವೀನ್ ಮತ್ತಿತರರಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

9 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

10 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

10 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

12 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

15 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

16 hours ago