ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಜಿಲ್ಲಾ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ದೊಡ್ಡಬಳ್ಳಾಪುರ ನ್ಯಾಯಾಲಯ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ನಿರ್ಮಲಾ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಗಿಡಮರಗಳನ್ನು ಪೋಷಿಸುವುದರೊಂದಿಗೆ ಪರಿಸರ ಮಾಲಿನ್ಯ ತಡೆಯಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.

ಈ ವೇಳೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿಲ್ಪಾ,‌ ಸೀನಿಯರ್ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, 2ನೇ ಸತ್ರ ನ್ಯಾಯಾಧೀಶರಾದ ರವಿ ಬೇಟೆಗಾರ್, ಸಿವಿಲ್ ನ್ಯಾಯಾಧೀಶರಾದ ಕ್ರಾಂತಿ ಕಿರಣ್, ಪ್ರೀತಿ, ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ, ಉಪಾಧ್ಯಕ್ಷ ಸುರೇಶ್ ಮತ್ತು ಕಾರ್ಯದಶಿಗಳಾದ ಕೃಷ್ಣಮೂರ್ತಿ, ವಕೀಲೆ ಹಾಗೂ ವರದಿಗಾರರಾದ ಅನುಪಮ ಸೇರಿದಂತೆ‌ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

5 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

16 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

17 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago