ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್‌ ನಂ.1: 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದ ಕರ್ನಾಟಕ ಪೊಲೀಸ್ ಇಲಾಖೆ

ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್‌ ನಂ.1 ಸ್ಥಾನ ಪಡೆದುಕೊಂಡಿದೆ. 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಜನತೆಗಾಗಿ ಹಗಲು ರಾತ್ರಿ ದುಡಿಯುವ ಕರ್ನಾಟಕ ಪೊಲೀಸ್‌ ಇಲಾಖೆಗೆ ಈ ಗರಿಮೆ ಸಂದಿರುವುದು ಹೆಮ್ಮೆಯ ಸಂಗತಿ.

ದೇಶದ ಪ್ರತಿಷ್ಠಿತ ಇಂಡಿಯಾ ಜಸ್ಟೀಸ್‌ ರಿಪೋರ್ಟ್‌ ನವರು ನಡೆಸಿದ ಸಮೀಕ್ಷಾ ವರದಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಇಡೀ ದೇಶದಲ್ಲೇ ನ್ಯಾಯ ನೀಡಿಕೆ (Justice delivery) ಯಲ್ಲಿ ಪ್ರಥಮ‌ ಸ್ಥಾನದಲ್ಲಿದೆ. ಒಟ್ಟು 10 ಅಂಕಗಳನ್ನು ಆಧಾರವಾಗಿಟ್ಟು ನಡೆಸಿದ ಈ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ 6.38 ಅಂಕಗಳಿಕೆಯ ಮೂಲಕ ಪ್ರಥಮ‌ ಸ್ಥಾನದಲ್ಲಿದೆ.

ಅಪರಾಧ ಕೃತ್ಯಗಳನ್ನು ಪತ್ತೆಹಚ್ಚುವುದು, ಅಪರಾಧಿಗಳ ಬಂಧನ, ಕೃತ್ಯದ ಸಾಕ್ಷ್ಯ ಸಂಗ್ರಹಣೆ ಹೀಗೆ ನ್ಯಾಯಾಲಯದಿಂದ ಪ್ರಕರಣದ ತೀರ್ಪು ಬಂದು ಸಂತ್ರಸ್ತರಿಗೆ ನ್ಯಾಯ ದೊರಕುವವರೆಗೆ ವಿವಿಧ ಹಂತಗಳಲ್ಲಿ ಪೊಲೀಸ್‌ ಇಲಾಖೆಯು ನಿರ್ಣಾಯಕ ಪಾತ್ರ ವಹಿಸಲಿದೆ. ಈ ಎಲ್ಲಾ ಕಾರ್ಯಗಳನ್ನು ನಾಡಿನ ಪೊಲೀಸ್‌ ಇಲಾಖೆ ದೇಶದ ಇತರೆ ಎಲ್ಲಾ ರಾಜ್ಯಗಳ ಪೊಲೀಸರಿಗಿಂತ ಅತ್ಯಂತ ದಕ್ಷವಾಗಿ, ಪ್ರಾಮಾಣಿಕವಾಗಿ ನಿರ್ವಹಿಸುತ್ತಿದೆ ಎಂಬುದು ಶ್ಲಾಘನೀಯ.

ನಾಗರಿಕರ ಪ್ರಾಣ ರಕ್ಷಣೆ, ಸಮಾಜಘಾತುಕರ ಹೆಡೆಮುರಿ ಕಟ್ಟಲು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕರ್ನಾಟಕ ಪೊಲೀಸ್‌ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ.

Ramesh Babu

Journalist

View Comments

  • ಒಂದು ಕಡೆ ಸಂತೋಷದ ವಿಚಾರ ಒಂದು ಕಡೆ ದುಃಖದ ವಿಚಾರ ಕರ್ನಾಟಕ ರಾಜ್ಯ ಎಲ್ಲ ರಾಜ್ಯಕ್ಕಿಂತ ಕಡಿಮೆ ಪೊಲೀಸ್ ಇಲಾಖೆಯ ಸಂಬಳ ನೌಕರಸ್ಥರು ನಾವು .
    ಇದರ ಬಗ್ಗೆ ಮಾಧ್ಯಮಗಳು ಹೇಳಿಕೆ ಯಾಕೆ ಇಲ್ಲ ?

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

5 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

7 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

9 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

14 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

18 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago