ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್‌ ನಂ.1: 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದ ಕರ್ನಾಟಕ ಪೊಲೀಸ್ ಇಲಾಖೆ

ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್‌ ನಂ.1 ಸ್ಥಾನ ಪಡೆದುಕೊಂಡಿದೆ. 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಜನತೆಗಾಗಿ ಹಗಲು ರಾತ್ರಿ ದುಡಿಯುವ ಕರ್ನಾಟಕ ಪೊಲೀಸ್‌ ಇಲಾಖೆಗೆ ಈ ಗರಿಮೆ ಸಂದಿರುವುದು ಹೆಮ್ಮೆಯ ಸಂಗತಿ.

ದೇಶದ ಪ್ರತಿಷ್ಠಿತ ಇಂಡಿಯಾ ಜಸ್ಟೀಸ್‌ ರಿಪೋರ್ಟ್‌ ನವರು ನಡೆಸಿದ ಸಮೀಕ್ಷಾ ವರದಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಇಡೀ ದೇಶದಲ್ಲೇ ನ್ಯಾಯ ನೀಡಿಕೆ (Justice delivery) ಯಲ್ಲಿ ಪ್ರಥಮ‌ ಸ್ಥಾನದಲ್ಲಿದೆ. ಒಟ್ಟು 10 ಅಂಕಗಳನ್ನು ಆಧಾರವಾಗಿಟ್ಟು ನಡೆಸಿದ ಈ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ 6.38 ಅಂಕಗಳಿಕೆಯ ಮೂಲಕ ಪ್ರಥಮ‌ ಸ್ಥಾನದಲ್ಲಿದೆ.

ಅಪರಾಧ ಕೃತ್ಯಗಳನ್ನು ಪತ್ತೆಹಚ್ಚುವುದು, ಅಪರಾಧಿಗಳ ಬಂಧನ, ಕೃತ್ಯದ ಸಾಕ್ಷ್ಯ ಸಂಗ್ರಹಣೆ ಹೀಗೆ ನ್ಯಾಯಾಲಯದಿಂದ ಪ್ರಕರಣದ ತೀರ್ಪು ಬಂದು ಸಂತ್ರಸ್ತರಿಗೆ ನ್ಯಾಯ ದೊರಕುವವರೆಗೆ ವಿವಿಧ ಹಂತಗಳಲ್ಲಿ ಪೊಲೀಸ್‌ ಇಲಾಖೆಯು ನಿರ್ಣಾಯಕ ಪಾತ್ರ ವಹಿಸಲಿದೆ. ಈ ಎಲ್ಲಾ ಕಾರ್ಯಗಳನ್ನು ನಾಡಿನ ಪೊಲೀಸ್‌ ಇಲಾಖೆ ದೇಶದ ಇತರೆ ಎಲ್ಲಾ ರಾಜ್ಯಗಳ ಪೊಲೀಸರಿಗಿಂತ ಅತ್ಯಂತ ದಕ್ಷವಾಗಿ, ಪ್ರಾಮಾಣಿಕವಾಗಿ ನಿರ್ವಹಿಸುತ್ತಿದೆ ಎಂಬುದು ಶ್ಲಾಘನೀಯ.

ನಾಗರಿಕರ ಪ್ರಾಣ ರಕ್ಷಣೆ, ಸಮಾಜಘಾತುಕರ ಹೆಡೆಮುರಿ ಕಟ್ಟಲು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕರ್ನಾಟಕ ಪೊಲೀಸ್‌ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ.

Ramesh Babu

Journalist

View Comments

  • ಒಂದು ಕಡೆ ಸಂತೋಷದ ವಿಚಾರ ಒಂದು ಕಡೆ ದುಃಖದ ವಿಚಾರ ಕರ್ನಾಟಕ ರಾಜ್ಯ ಎಲ್ಲ ರಾಜ್ಯಕ್ಕಿಂತ ಕಡಿಮೆ ಪೊಲೀಸ್ ಇಲಾಖೆಯ ಸಂಬಳ ನೌಕರಸ್ಥರು ನಾವು .
    ಇದರ ಬಗ್ಗೆ ಮಾಧ್ಯಮಗಳು ಹೇಳಿಕೆ ಯಾಕೆ ಇಲ್ಲ ?

Recent Posts

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

2 hours ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

1 day ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

1 day ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

1 day ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago