ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್‌ ನಂ.1: 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದ ಕರ್ನಾಟಕ ಪೊಲೀಸ್ ಇಲಾಖೆ

ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್‌ ನಂ.1 ಸ್ಥಾನ ಪಡೆದುಕೊಂಡಿದೆ. 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಜನತೆಗಾಗಿ ಹಗಲು ರಾತ್ರಿ ದುಡಿಯುವ ಕರ್ನಾಟಕ ಪೊಲೀಸ್‌ ಇಲಾಖೆಗೆ ಈ ಗರಿಮೆ ಸಂದಿರುವುದು ಹೆಮ್ಮೆಯ ಸಂಗತಿ.

ದೇಶದ ಪ್ರತಿಷ್ಠಿತ ಇಂಡಿಯಾ ಜಸ್ಟೀಸ್‌ ರಿಪೋರ್ಟ್‌ ನವರು ನಡೆಸಿದ ಸಮೀಕ್ಷಾ ವರದಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಇಡೀ ದೇಶದಲ್ಲೇ ನ್ಯಾಯ ನೀಡಿಕೆ (Justice delivery) ಯಲ್ಲಿ ಪ್ರಥಮ‌ ಸ್ಥಾನದಲ್ಲಿದೆ. ಒಟ್ಟು 10 ಅಂಕಗಳನ್ನು ಆಧಾರವಾಗಿಟ್ಟು ನಡೆಸಿದ ಈ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ 6.38 ಅಂಕಗಳಿಕೆಯ ಮೂಲಕ ಪ್ರಥಮ‌ ಸ್ಥಾನದಲ್ಲಿದೆ.

ಅಪರಾಧ ಕೃತ್ಯಗಳನ್ನು ಪತ್ತೆಹಚ್ಚುವುದು, ಅಪರಾಧಿಗಳ ಬಂಧನ, ಕೃತ್ಯದ ಸಾಕ್ಷ್ಯ ಸಂಗ್ರಹಣೆ ಹೀಗೆ ನ್ಯಾಯಾಲಯದಿಂದ ಪ್ರಕರಣದ ತೀರ್ಪು ಬಂದು ಸಂತ್ರಸ್ತರಿಗೆ ನ್ಯಾಯ ದೊರಕುವವರೆಗೆ ವಿವಿಧ ಹಂತಗಳಲ್ಲಿ ಪೊಲೀಸ್‌ ಇಲಾಖೆಯು ನಿರ್ಣಾಯಕ ಪಾತ್ರ ವಹಿಸಲಿದೆ. ಈ ಎಲ್ಲಾ ಕಾರ್ಯಗಳನ್ನು ನಾಡಿನ ಪೊಲೀಸ್‌ ಇಲಾಖೆ ದೇಶದ ಇತರೆ ಎಲ್ಲಾ ರಾಜ್ಯಗಳ ಪೊಲೀಸರಿಗಿಂತ ಅತ್ಯಂತ ದಕ್ಷವಾಗಿ, ಪ್ರಾಮಾಣಿಕವಾಗಿ ನಿರ್ವಹಿಸುತ್ತಿದೆ ಎಂಬುದು ಶ್ಲಾಘನೀಯ.

ನಾಗರಿಕರ ಪ್ರಾಣ ರಕ್ಷಣೆ, ಸಮಾಜಘಾತುಕರ ಹೆಡೆಮುರಿ ಕಟ್ಟಲು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕರ್ನಾಟಕ ಪೊಲೀಸ್‌ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ.

Ramesh Babu

Journalist

View Comments

  • ಒಂದು ಕಡೆ ಸಂತೋಷದ ವಿಚಾರ ಒಂದು ಕಡೆ ದುಃಖದ ವಿಚಾರ ಕರ್ನಾಟಕ ರಾಜ್ಯ ಎಲ್ಲ ರಾಜ್ಯಕ್ಕಿಂತ ಕಡಿಮೆ ಪೊಲೀಸ್ ಇಲಾಖೆಯ ಸಂಬಳ ನೌಕರಸ್ಥರು ನಾವು .
    ಇದರ ಬಗ್ಗೆ ಮಾಧ್ಯಮಗಳು ಹೇಳಿಕೆ ಯಾಕೆ ಇಲ್ಲ ?

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

3 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

12 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago