ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್‌ ನಂ.1: 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದ ಕರ್ನಾಟಕ ಪೊಲೀಸ್ ಇಲಾಖೆ

ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್‌ ನಂ.1 ಸ್ಥಾನ ಪಡೆದುಕೊಂಡಿದೆ. 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಜನತೆಗಾಗಿ ಹಗಲು ರಾತ್ರಿ ದುಡಿಯುವ ಕರ್ನಾಟಕ ಪೊಲೀಸ್‌ ಇಲಾಖೆಗೆ ಈ ಗರಿಮೆ ಸಂದಿರುವುದು ಹೆಮ್ಮೆಯ ಸಂಗತಿ.

ದೇಶದ ಪ್ರತಿಷ್ಠಿತ ಇಂಡಿಯಾ ಜಸ್ಟೀಸ್‌ ರಿಪೋರ್ಟ್‌ ನವರು ನಡೆಸಿದ ಸಮೀಕ್ಷಾ ವರದಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಇಡೀ ದೇಶದಲ್ಲೇ ನ್ಯಾಯ ನೀಡಿಕೆ (Justice delivery) ಯಲ್ಲಿ ಪ್ರಥಮ‌ ಸ್ಥಾನದಲ್ಲಿದೆ. ಒಟ್ಟು 10 ಅಂಕಗಳನ್ನು ಆಧಾರವಾಗಿಟ್ಟು ನಡೆಸಿದ ಈ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ 6.38 ಅಂಕಗಳಿಕೆಯ ಮೂಲಕ ಪ್ರಥಮ‌ ಸ್ಥಾನದಲ್ಲಿದೆ.

ಅಪರಾಧ ಕೃತ್ಯಗಳನ್ನು ಪತ್ತೆಹಚ್ಚುವುದು, ಅಪರಾಧಿಗಳ ಬಂಧನ, ಕೃತ್ಯದ ಸಾಕ್ಷ್ಯ ಸಂಗ್ರಹಣೆ ಹೀಗೆ ನ್ಯಾಯಾಲಯದಿಂದ ಪ್ರಕರಣದ ತೀರ್ಪು ಬಂದು ಸಂತ್ರಸ್ತರಿಗೆ ನ್ಯಾಯ ದೊರಕುವವರೆಗೆ ವಿವಿಧ ಹಂತಗಳಲ್ಲಿ ಪೊಲೀಸ್‌ ಇಲಾಖೆಯು ನಿರ್ಣಾಯಕ ಪಾತ್ರ ವಹಿಸಲಿದೆ. ಈ ಎಲ್ಲಾ ಕಾರ್ಯಗಳನ್ನು ನಾಡಿನ ಪೊಲೀಸ್‌ ಇಲಾಖೆ ದೇಶದ ಇತರೆ ಎಲ್ಲಾ ರಾಜ್ಯಗಳ ಪೊಲೀಸರಿಗಿಂತ ಅತ್ಯಂತ ದಕ್ಷವಾಗಿ, ಪ್ರಾಮಾಣಿಕವಾಗಿ ನಿರ್ವಹಿಸುತ್ತಿದೆ ಎಂಬುದು ಶ್ಲಾಘನೀಯ.

ನಾಗರಿಕರ ಪ್ರಾಣ ರಕ್ಷಣೆ, ಸಮಾಜಘಾತುಕರ ಹೆಡೆಮುರಿ ಕಟ್ಟಲು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕರ್ನಾಟಕ ಪೊಲೀಸ್‌ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ.

Ramesh Babu

Journalist

View Comments

  • ಒಂದು ಕಡೆ ಸಂತೋಷದ ವಿಚಾರ ಒಂದು ಕಡೆ ದುಃಖದ ವಿಚಾರ ಕರ್ನಾಟಕ ರಾಜ್ಯ ಎಲ್ಲ ರಾಜ್ಯಕ್ಕಿಂತ ಕಡಿಮೆ ಪೊಲೀಸ್ ಇಲಾಖೆಯ ಸಂಬಳ ನೌಕರಸ್ಥರು ನಾವು .
    ಇದರ ಬಗ್ಗೆ ಮಾಧ್ಯಮಗಳು ಹೇಳಿಕೆ ಯಾಕೆ ಇಲ್ಲ ?

Recent Posts

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

1 hour ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

20 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

23 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

2 days ago