ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್‌ ನಂ.1: 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದ ಕರ್ನಾಟಕ ಪೊಲೀಸ್ ಇಲಾಖೆ

ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕ ಪೊಲೀಸ್‌ ನಂ.1 ಸ್ಥಾನ ಪಡೆದುಕೊಂಡಿದೆ. 10 ರಲ್ಲಿ 6.38 ಅಂಕಗಳೊಂದಿಗೆ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಜನತೆಗಾಗಿ ಹಗಲು ರಾತ್ರಿ ದುಡಿಯುವ ಕರ್ನಾಟಕ ಪೊಲೀಸ್‌ ಇಲಾಖೆಗೆ ಈ ಗರಿಮೆ ಸಂದಿರುವುದು ಹೆಮ್ಮೆಯ ಸಂಗತಿ.

ದೇಶದ ಪ್ರತಿಷ್ಠಿತ ಇಂಡಿಯಾ ಜಸ್ಟೀಸ್‌ ರಿಪೋರ್ಟ್‌ ನವರು ನಡೆಸಿದ ಸಮೀಕ್ಷಾ ವರದಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಇಡೀ ದೇಶದಲ್ಲೇ ನ್ಯಾಯ ನೀಡಿಕೆ (Justice delivery) ಯಲ್ಲಿ ಪ್ರಥಮ‌ ಸ್ಥಾನದಲ್ಲಿದೆ. ಒಟ್ಟು 10 ಅಂಕಗಳನ್ನು ಆಧಾರವಾಗಿಟ್ಟು ನಡೆಸಿದ ಈ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ 6.38 ಅಂಕಗಳಿಕೆಯ ಮೂಲಕ ಪ್ರಥಮ‌ ಸ್ಥಾನದಲ್ಲಿದೆ.

ಅಪರಾಧ ಕೃತ್ಯಗಳನ್ನು ಪತ್ತೆಹಚ್ಚುವುದು, ಅಪರಾಧಿಗಳ ಬಂಧನ, ಕೃತ್ಯದ ಸಾಕ್ಷ್ಯ ಸಂಗ್ರಹಣೆ ಹೀಗೆ ನ್ಯಾಯಾಲಯದಿಂದ ಪ್ರಕರಣದ ತೀರ್ಪು ಬಂದು ಸಂತ್ರಸ್ತರಿಗೆ ನ್ಯಾಯ ದೊರಕುವವರೆಗೆ ವಿವಿಧ ಹಂತಗಳಲ್ಲಿ ಪೊಲೀಸ್‌ ಇಲಾಖೆಯು ನಿರ್ಣಾಯಕ ಪಾತ್ರ ವಹಿಸಲಿದೆ. ಈ ಎಲ್ಲಾ ಕಾರ್ಯಗಳನ್ನು ನಾಡಿನ ಪೊಲೀಸ್‌ ಇಲಾಖೆ ದೇಶದ ಇತರೆ ಎಲ್ಲಾ ರಾಜ್ಯಗಳ ಪೊಲೀಸರಿಗಿಂತ ಅತ್ಯಂತ ದಕ್ಷವಾಗಿ, ಪ್ರಾಮಾಣಿಕವಾಗಿ ನಿರ್ವಹಿಸುತ್ತಿದೆ ಎಂಬುದು ಶ್ಲಾಘನೀಯ.

ನಾಗರಿಕರ ಪ್ರಾಣ ರಕ್ಷಣೆ, ಸಮಾಜಘಾತುಕರ ಹೆಡೆಮುರಿ ಕಟ್ಟಲು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕರ್ನಾಟಕ ಪೊಲೀಸ್‌ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ.

Ramesh Babu

Journalist

View Comments

  • ಒಂದು ಕಡೆ ಸಂತೋಷದ ವಿಚಾರ ಒಂದು ಕಡೆ ದುಃಖದ ವಿಚಾರ ಕರ್ನಾಟಕ ರಾಜ್ಯ ಎಲ್ಲ ರಾಜ್ಯಕ್ಕಿಂತ ಕಡಿಮೆ ಪೊಲೀಸ್ ಇಲಾಖೆಯ ಸಂಬಳ ನೌಕರಸ್ಥರು ನಾವು .
    ಇದರ ಬಗ್ಗೆ ಮಾಧ್ಯಮಗಳು ಹೇಳಿಕೆ ಯಾಕೆ ಇಲ್ಲ ?

Recent Posts

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

48 minutes ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

2 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

8 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

11 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

13 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

24 hours ago