ನ್ಯಾಯ ಬೆಲೆ ಅಂಗಡಿಗಳಲ್ಲಿ ಇ-ಪಾಸ್ ಮತ್ತು ಎಲೆಕ್ಟ್ರಾನಿಕ್ಸ್ ವೇಯಿಂಗ್ ಮಷಿನ್ ಗಳನ್ನು ಅಳವಡಿಸಲು ಸೂಚನೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಅಧಿಕಾರಿಗಳು ಮತ್ತು ನ್ಯಾಯ ಬೆಲೆ ಅಂಗಡಿಗಳ ಮಾಲಿಕರ ಸಂಘದ ಅಧ್ಯಕ್ಷರುಗಳೊಂದಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್.ಮುನಿಯಪ್ಪ ಇಂದು ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.

ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿ,
ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇಕೆವೈಸಿ ಮಾಡಿಸತಕ್ಕದ್ದು, ಪಡಿತರ ಪರಿಷ್ಕರಣೆಯ ಕಾರ್ಯ ಸಮರ್ಪಕವಾಗಿರಲಿ ಮತ್ತು ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ ಗೆ ಬದಲಾಗಿದ್ದಲ್ಲಿ ಅದನ್ನು ಸಂಬಂದಪಟ್ಟ ತಾಲ್ಲೂಕಿನ ತಹಶಿಲ್ದಾರರ ಕಚೇರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದಾಗ ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ ಗೆ ವರ್ಗಾಯಿಸಲಾಗುತ್ತದೆ ಎಂದರು.

ತಾಲ್ಲೂಕು‌ ಮಟ್ಟದಲ್ಲಿ ಅಧಿಕಾರಿಗಳು ಅರ್ಹ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ಪಡಿತರ ಕಾರ್ಡ್ ನ್ನು ಪರಿಶೀಲನೆ ಮಾಡಿ ಸತ್ಯಾಂಶವನ್ನು ನಮಗೆ ಒಂದು ವಾರದೊಳಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾನದಂಡಗಳ ನಿರ್ದೇಶನದಂತೆ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚಿ ಎಪಿಎಲ್ ಆಗಿ ಪರಿವರ್ತಿಸುವುದು. ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳ ಕಾರ್ಡ್ ಗಳನ್ನು ರದ್ದು ಮಾಡಬಾರದು ಎಂದು ತಿಳಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ನ್ಯಾಯಬೆಲೆ ಅಂಗಡಿಗಳನ್ನು ಆಧ್ಯಾತೆಯ ಮೇಲೆ ಮಂಜೂರು ಮಾಡಲು ಒಂದು ತಿಂಗಳೊಳಗೆ ಕ್ರಮ ವಹಿಸಲಾಗುವುದು. ಇದರಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಮೇರೆಗೆ ಸುಮಾರು 3517 ನೂತನ ನ್ಯಾಯ ಬೆಲೆ ಅಂಗಡಿಗಳನ್ನು ಒಳ ಮೀಸಲಾತಿ ಆಧಾರದ ಮೇಲೆ ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ನೀಡುತ್ತಿರುವುದು ಎಂದರು.

ನ್ಯಾಯಬೆಲೆ ಅಂಗಡಿ‌ ಮಾಲೀಕರಿಗೆ ಯಾವುದೇ ಸಮಸ್ಯೆಗಳಿಲ್ಲದೆ ಪರಿಹರಿಸಲಾಗುವುದು. ನ್ಯಾಯ ಬೆಲೆ ಅಂಗಡಿಗಳಲ್ಲಿ ಯಂತ್ರಗಳ ಅಳವಡಿಕೆಗೆ ತಾವು ಮುಂದಾಗಿ‌ ಇದನ್ನು ಒಳಪಡಿಸಬೇಕು ತಮಗೆ ಬರುವ ಚಿಲ್ಲರೆ ಲಾಭಾಂಶವನ್ನು ಸರಿಯಾದ ಸಮಯಕ್ಕೆ ಸಮರ್ಪಕವಾಗಿ ನೀಡಲಾಗುತ್ತದೆ ತಾವು ಗ್ರಾಹಕರಿಗೆ ಸರಿಯಾದ ಸಮಯದಲ್ಲಿ ಪಡಿತರ ವಿತರಿಸಬೇಕು ಎಂದರು.

ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಸುಮಾರು 13 ಲಕ್ಷ ಕಾರ್ಡ್ ಗಳು ಅನರ್ಹ ಕಾರ್ಡಗಳಿದ್ದು ಇವುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಿರುವ ಬಗ್ಗೆ ಚರ್ಚೆ ನಡೆಸಿದ್ದು. ರಾಜ್ಯದಲ್ಲಿ ಅರ್ಹ ಫಲಾನುಭವಿಯನ್ನು ಶೀಘ್ರದಲ್ಲಿ ಗುರುತಿಸಬೇಕು ಅನರ್ಹರನ್ನು ಮಾತ್ರ ತಾವು ಎಪಿಎಲ್ ಗೆ ವರ್ಗಾಯಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಇತರೆ ರಾಜ್ಯಗಳ ಮಾನದಂಡಗಳನ್ನು ಸಹಾ ತಾವು ಸಂಗ್ರಹಿಸಿ ಅವನ್ನು ಪರಿಶೀಲನೆ ನಡೆಸಿ ಅನ್ವಯಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

3 ಲಕ್ಷದ 96 ಸಾವಿರ ಪಡಿತರ ಕಾರ್ಡ್ ಗಳನ್ನು ಒಂದು ತಿಂಗಳೊಳಗೆ ಪರಿಷ್ಕರಣೆ ಮಾಡಿ ನೂತನ ಕಾರ್ಡ್ ನೀಡಲು ಕ್ರಮ ವಹಿಸಲು ಸೂಚಿಸಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಾಲ್ ರಾಗಿಗೆ ರೂ 4886 ಬೆಲೆಯಂತೆ ಖರೀದಿಸಲಾಗುತ್ತಿದೆ. ಈಗಾಗಲೇ 6ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಇದರಿಂದ ಒಟ್ಟು 3000 ಕೋಟಿ ರೂ.ಗಳೊಂದಿಗೆ 2,57,000 ಸಾವಿರ ರೈತರಿಗೆ ಈ ಯೋಜನೆಯು ಪ್ರಯೋಜನವಾಗಲಿದೆ ಎಂದರು.

ಕಾನೂನು ‌ಮಾಪನ ಶಾಸ್ತ್ರ ಇಲಾಖೆಯ ವತಿಯಿಂದ ಬೆಳಗಾವಿ ಮತ್ತು ಕಲಬುರಗಿ ವಿಭಾಗದಲ್ಲಿ ಸುಮಾರು 71 ಸಕ್ಕರೆ ಕಾರ್ಖಾನೆಗಳ ತಪಾಸಣೆ ಮಾಡಿದ್ದು ಕಬ್ಬು ಬೆಳೆಗಾರರ ಹಿಂದೆ ಇದ್ದ ಲೋಪದೋಷಗಳನ್ನು ಸರಿಪಡಿಸಲಾಗಿದೆ ತೂಕದಲ್ಲಿ ಮೋಸವನ್ನು ತಡೆಯಲಾಗಿದೆ ಇಲ್ಲಿಯವರೆಗೂ ಸುಮಾರು 50 ಸಾವಿರ ಕೋಟಿ ರೂಗಳು ಅಭಿಸಂಧಾನ ಶುಲ್ಕ ವಸೂಲಿ ಮಾಡಲಾಗಿದೆ ಎಂದರು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಪ್ರಸಾದ್ ಎನ್.ವಿ,ಆಯುಕ್ತರಾದ ಎಂ. ಕನಗವಲ್ಲಿ,ಕಾನೂನು ಮಾಪನ ಇಲಾಖೆಯ ನಿಯಂತ್ರಕರಾದ ಎಂ.ಎಸ್.ಎನ್ ಬಾಬು,ನಿಗಮ ನಿರ್ದೇಶಕ ಜಗದೀಶ್,ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಜಂಟಿ ನಿರ್ದೇಶಕರು ಐಟಿ ರಾಜಶೇಖರ್,ಕುಮುದಾ ಹಾಗೂ ಪಡಿತರ ವಿತರಕ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ, ಮತ್ತು ಕೃಷ್ಣ ನಾಯಕ್ ಹಾಗೂ ಸಂಘದ ಪಧಾದಿಕಾರಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

42 minutes ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

10 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

10 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

12 hours ago