ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅರಳು ಮಲ್ಲಿಗೆ ಬಾಗಿಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ದೊಡ್ಡಬಳ್ಳಾಪುರ:2024 – 25 ನೇ ಸಾಲಿನ ಅರಳು ಮಲ್ಲಿಗೆ ಬಾಗಿಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಶುಕ್ರವಾರ ನಗರದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ನ್ಯಾಷನಲ್ ಪ್ರೈಡ್ ಶಾಲೆಯ ಕಾರ್ಯದರ್ಶಿಯಾದ ಸತೀಶ್ ರಾಜ್ ಮಾತನಾಡಿ, ಸ್ಪರ್ಧೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಶಿಸ್ತು ಮತ್ತು ಸಮಯ ಪಾಲನೆ ಎಲ್ಲರಲ್ಲೂ ಇರಬೇಕು ಎಂದರು.

ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಕಂಠಪಾಠ, ಅಭಿನಯ ಗೀತೆ, ದೇಶಭಕ್ತಿ ಗೀತೆ, ಛದ್ಮ ವೇಷ, ಕವನ ವಾಚನ, ಪ್ರಬಂಧ, ಚಿತ್ರಕಲೆ, ಕ್ಲೇ ಮಾಡ್ಲಿಂಗ್ ಮುಂತಾದ ಸ್ಪರ್ಧೆಗಳಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿ ಬಹುಮಾನ ಪಡೆದರು.

ನ್ಯಾಷನಲ್ ಪ್ರೈಡ್ ಶಾಲೆಯ ಸಂಸ್ಥಾಪಕ ಸಿ.ನಾಗರಾಜು,  ಪ್ರಾಂಶುಪಾಲರಾದ ರಶ್ಮಿ, ಆಡಳಿತಾಧಿಕಾರಿ ಬಿಂದು, ಎಂಎಸ್ವಿ ಶಾಲೆಯ ಸಂಸ್ಥಾಪಕ ಎ. ಸುಬ್ರಹ್ಮಣ್ಯ, ಅರಳು ಮಲ್ಲಿಗೆ ಬಾಗಿಲು ಕ್ಲಸ್ಟರ್  ಸಿ.ಆರ್.ಪಿ ರಾಜಶೇಖರ್,  ಇ.ಸಿ. ಓ ಜಯಶ್ರೀ ಹಾಗೂ ಹಲವು ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರಾದ ರಾಜು, ರಾಮಕೃಷ್ಣಯ್ಯ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

2 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

2 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

4 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

5 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

13 hours ago