ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಶಾಲೆಯ ಬಾಗಿಲು ತೆರೆದಿದೆ, ತೊದಲು ನುಡಿಯುತ್ತಿದ್ದ ಮಕ್ಕಳು ಅಕ್ಷರಗಳ ಉಚ್ಛಾರಣೆ, ಬರೆಯಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆ ಇಂದು ನಗರದ ನ್ಯಾಷನಲ್ ಪ್ರೈಡ್ ಶಾಲೆಯ ಮೊದಲ ದಿನವಾದ ಇಂದು ಶಾಸ್ತ್ರಬದ್ದವಾಗಿಯೇ ಆರಂಭಿಸಲಾಗಿದೆ.
ನೂತನವಾಗಿ ಶಾಲೆಗೆ ದಾಖಲಾದ ಸಾಮೂಹಿಕ ಅಕ್ಷರಾಭ್ಯಾಸದಲ್ಲಿ ಭಾಗವಹಿಸಿ ಜ್ಞಾನದ ದೇವತೆ ಸ್ವರತಿಯ ಅಶೀರ್ವಾದದೊಂದಿಗೆ ವಿದ್ಯೆ ಕಲಿಕೆಯನ್ನ ಆರಂಭಿಸಿದರು.
ಸಾಮಾನ್ಯವಾಗಿ ಶೃಂಗೇರಿಯ ಶಾರದಾಂಬೆಯ ಸನ್ನಿಧಿಯಲ್ಲಿ ತಮ್ಮ ಮಕ್ಕಳ ಅಕ್ಷರಾಭ್ಯಾಸವನ್ನ ಮಾಡುತ್ತಾರೆ, ಈ ಪರಂಪರೆಯನ್ನೇ ಈ ಶಾಲೆಯಲ್ಲಿ ಪ್ರತಿಯೊಂದು ಮಗುವಿನ ಅಕ್ಷರಾಭ್ಯಾಸವನ್ನ ಸಾಮೂಹಿಕವಾಗಿ ಮಾಡಲಾಯಿತು.
ಮೊದಲ ಅಕ್ಷರವಾಗಿ ಮಕ್ಕಳು ಕನ್ನಡ ವರ್ಣಮಾಲೆಯ ಅ ಆ ಇ ಈ ನ್ನು ಸ್ಲೇಟ್ ನಲ್ಲಿ ಬರೆದು ಶಾಸ್ತ್ರೋಕ್ತವಾಗಿ ಮೊದಲ ದಿನ ಆರಂಭಿಸಿದರು.
ಮಕ್ಕಳ ಜೊತೆಯಲ್ಲಿ ಬಂದ ಪೋಷಕರು ಅಕ್ಷರಭ್ಯಾಸದಲ್ಲಿ ಭಾಗಿಯಾಗಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.
ಪುರಾಣಗಳಲ್ಲಿ ವಾಲ್ಮೀಕಿ ಮಹರ್ಷಿಗಳು ಲವಕುಶರಿಗೆ ಅಕ್ಷರಭ್ಯಾಸವನ್ನು ಮಾಡಿಸುವ ಮೂಲಕ ವಿದ್ಯೆಯನ್ನು ಪ್ರಾರಂಭಿಸಿದ್ದರು ಎಂಬ ಉಲ್ಲೇಖವಿದೆ. ಸರ್ವಧರ್ಮ ಸಮನ್ವಯತೆ ಸಾರುವ ನಿಟ್ಟಿನಲ್ಲಿ ಈ ಶಾಲೆ ಮುಂದಿದೆ. ಅದೇರೀತಿ ಶಿಸ್ತು ಮತ್ತು ಸಮಯ ಪಾಲನೆ ಶಾಲೆಯ ಪ್ರಮುಖ ಆದ್ಯತೆಯಾಗಿದೆ.
ತಾಯಿ ಸರಸ್ವತಿಯ ಆಶೀರ್ವಾದ ಮಗುವಿನ ಶಿಕ್ಷಣದ ಪ್ರಯಾಣದತ್ತ ಸುಗಮವಾಗಿ ಕರೆದೊಯುತ್ತದೆ ಎಂಬ ನಂಬಿಕೆಯೊಂದಿಗೆ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಪ್ರೀತಿಯನ್ನು ತುಂಬಲು ಹಾಗೂ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಲು ಅಕ್ಷರಾಭ್ಯಾಸ ಕಾರ್ಯಕ್ರಮವು ಸಹಕಾರಿಯಾಗಿದೆ ಎಂದು ಶಾಲಾ ಕಾರ್ಯದರ್ಶಿ ಸಿ ಎನ್ ಸತೀಶ್ ರಾಜ್ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ಸಿ.ನಾಗರಾಜು, ಸುನಂದಾ, ಪ್ರಾಂಶುಪಾಲೆ ರಶ್ಮಿ ಸತೀಶ್ ರಾಜ್, ಅನುಸೂಯಾ, ಸಂಯೋಜಕಿ ತೇಜಸ್ವಿನಿ, ಶಿಕ್ಷಕ ವೃಂದ್ಧ, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…