ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸಾಮೂಹಿಕ ಅಕ್ಷರಾಭ್ಯಾಸ

ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಶಾಲೆಯ ಬಾಗಿಲು ತೆರೆದಿದೆ, ತೊದಲು ನುಡಿಯುತ್ತಿದ್ದ ಮಕ್ಕಳು ಅಕ್ಷರಗಳ ಉಚ್ಛಾರಣೆ, ಬರೆಯಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆ ಇಂದು ನಗರದ ನ್ಯಾಷನಲ್ ಪ್ರೈಡ್ ಶಾಲೆಯ ಮೊದಲ ದಿನವಾದ ಇಂದು ಶಾಸ್ತ್ರಬದ್ದವಾಗಿಯೇ ಆರಂಭಿಸಲಾಗಿದೆ.

ನೂತನವಾಗಿ ಶಾಲೆಗೆ ದಾಖಲಾದ ಸಾಮೂಹಿಕ ಅಕ್ಷರಾಭ್ಯಾಸದಲ್ಲಿ ಭಾಗವಹಿಸಿ ಜ್ಞಾನದ ದೇವತೆ ಸ್ವರತಿಯ ಅಶೀರ್ವಾದದೊಂದಿಗೆ ವಿದ್ಯೆ ಕಲಿಕೆಯನ್ನ ಆರಂಭಿಸಿದರು.

ಸಾಮಾನ್ಯವಾಗಿ ಶೃಂಗೇರಿಯ ಶಾರದಾಂಬೆಯ ಸನ್ನಿಧಿಯಲ್ಲಿ ತಮ್ಮ ಮಕ್ಕಳ ಅಕ್ಷರಾಭ್ಯಾಸವನ್ನ ಮಾಡುತ್ತಾರೆ, ಈ ಪರಂಪರೆಯನ್ನೇ ಈ ಶಾಲೆಯಲ್ಲಿ ಪ್ರತಿಯೊಂದು ಮಗುವಿನ ಅಕ್ಷರಾಭ್ಯಾಸವನ್ನ ಸಾಮೂಹಿಕವಾಗಿ ಮಾಡಲಾಯಿತು.

ಮೊದಲ ಅಕ್ಷರವಾಗಿ ಮಕ್ಕಳು ಕನ್ನಡ ವರ್ಣಮಾಲೆಯ ಅ ಆ ಇ ಈ ನ್ನು ಸ್ಲೇಟ್ ನಲ್ಲಿ ಬರೆದು ಶಾಸ್ತ್ರೋಕ್ತವಾಗಿ ಮೊದಲ ದಿನ ಆರಂಭಿಸಿದರು.

ಮಕ್ಕಳ ಜೊತೆಯಲ್ಲಿ ಬಂದ ಪೋಷಕರು ಅಕ್ಷರಭ್ಯಾಸದಲ್ಲಿ ಭಾಗಿಯಾಗಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಪುರಾಣಗಳಲ್ಲಿ ವಾಲ್ಮೀಕಿ ಮಹರ್ಷಿಗಳು ಲವಕುಶರಿಗೆ ಅಕ್ಷರಭ್ಯಾಸವನ್ನು ಮಾಡಿಸುವ ಮೂಲಕ ವಿದ್ಯೆಯನ್ನು ಪ್ರಾರಂಭಿಸಿದ್ದರು ಎಂಬ ಉಲ್ಲೇಖವಿದೆ. ಸರ್ವಧರ್ಮ ಸಮನ್ವಯತೆ ಸಾರುವ ನಿಟ್ಟಿನಲ್ಲಿ ಈ ಶಾಲೆ ಮುಂದಿದೆ. ಅದೇರೀತಿ ಶಿಸ್ತು ಮತ್ತು ಸಮಯ ಪಾಲನೆ ಶಾಲೆಯ ಪ್ರಮುಖ ಆದ್ಯತೆಯಾಗಿದೆ.

ತಾಯಿ ಸರಸ್ವತಿಯ ಆಶೀರ್ವಾದ ಮಗುವಿನ ಶಿಕ್ಷಣದ ಪ್ರಯಾಣದತ್ತ ಸುಗಮವಾಗಿ ಕರೆದೊಯುತ್ತದೆ ಎಂಬ ನಂಬಿಕೆಯೊಂದಿಗೆ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಪ್ರೀತಿಯನ್ನು ತುಂಬಲು ಹಾಗೂ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಲು ಅಕ್ಷರಾಭ್ಯಾಸ ಕಾರ್ಯಕ್ರಮವು ಸಹಕಾರಿಯಾಗಿದೆ ಎಂದು ಶಾಲಾ ಕಾರ್ಯದರ್ಶಿ  ಸಿ ಎನ್ ಸತೀಶ್ ರಾಜ್ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ಸಿ.ನಾಗರಾಜು, ಸುನಂದಾ, ಪ್ರಾಂಶುಪಾಲೆ ರಶ್ಮಿ ಸತೀಶ್ ರಾಜ್, ಅನುಸೂಯಾ, ಸಂಯೋಜಕಿ ತೇಜಸ್ವಿನಿ, ಶಿಕ್ಷಕ ವೃಂದ್ಧ, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Ramesh Babu

Journalist

Share
Published by
Ramesh Babu

Recent Posts

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

2 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

2 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

15 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

17 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

20 hours ago