ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸಾಮೂಹಿಕ ಅಕ್ಷರಾಭ್ಯಾಸ

ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಶಾಲೆಯ ಬಾಗಿಲು ತೆರೆದಿದೆ, ತೊದಲು ನುಡಿಯುತ್ತಿದ್ದ ಮಕ್ಕಳು ಅಕ್ಷರಗಳ ಉಚ್ಛಾರಣೆ, ಬರೆಯಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆ ಇಂದು ನಗರದ ನ್ಯಾಷನಲ್ ಪ್ರೈಡ್ ಶಾಲೆಯ ಮೊದಲ ದಿನವಾದ ಇಂದು ಶಾಸ್ತ್ರಬದ್ದವಾಗಿಯೇ ಆರಂಭಿಸಲಾಗಿದೆ.

ನೂತನವಾಗಿ ಶಾಲೆಗೆ ದಾಖಲಾದ ಸಾಮೂಹಿಕ ಅಕ್ಷರಾಭ್ಯಾಸದಲ್ಲಿ ಭಾಗವಹಿಸಿ ಜ್ಞಾನದ ದೇವತೆ ಸ್ವರತಿಯ ಅಶೀರ್ವಾದದೊಂದಿಗೆ ವಿದ್ಯೆ ಕಲಿಕೆಯನ್ನ ಆರಂಭಿಸಿದರು.

ಸಾಮಾನ್ಯವಾಗಿ ಶೃಂಗೇರಿಯ ಶಾರದಾಂಬೆಯ ಸನ್ನಿಧಿಯಲ್ಲಿ ತಮ್ಮ ಮಕ್ಕಳ ಅಕ್ಷರಾಭ್ಯಾಸವನ್ನ ಮಾಡುತ್ತಾರೆ, ಈ ಪರಂಪರೆಯನ್ನೇ ಈ ಶಾಲೆಯಲ್ಲಿ ಪ್ರತಿಯೊಂದು ಮಗುವಿನ ಅಕ್ಷರಾಭ್ಯಾಸವನ್ನ ಸಾಮೂಹಿಕವಾಗಿ ಮಾಡಲಾಯಿತು.

ಮೊದಲ ಅಕ್ಷರವಾಗಿ ಮಕ್ಕಳು ಕನ್ನಡ ವರ್ಣಮಾಲೆಯ ಅ ಆ ಇ ಈ ನ್ನು ಸ್ಲೇಟ್ ನಲ್ಲಿ ಬರೆದು ಶಾಸ್ತ್ರೋಕ್ತವಾಗಿ ಮೊದಲ ದಿನ ಆರಂಭಿಸಿದರು.

ಮಕ್ಕಳ ಜೊತೆಯಲ್ಲಿ ಬಂದ ಪೋಷಕರು ಅಕ್ಷರಭ್ಯಾಸದಲ್ಲಿ ಭಾಗಿಯಾಗಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಪುರಾಣಗಳಲ್ಲಿ ವಾಲ್ಮೀಕಿ ಮಹರ್ಷಿಗಳು ಲವಕುಶರಿಗೆ ಅಕ್ಷರಭ್ಯಾಸವನ್ನು ಮಾಡಿಸುವ ಮೂಲಕ ವಿದ್ಯೆಯನ್ನು ಪ್ರಾರಂಭಿಸಿದ್ದರು ಎಂಬ ಉಲ್ಲೇಖವಿದೆ. ಸರ್ವಧರ್ಮ ಸಮನ್ವಯತೆ ಸಾರುವ ನಿಟ್ಟಿನಲ್ಲಿ ಈ ಶಾಲೆ ಮುಂದಿದೆ. ಅದೇರೀತಿ ಶಿಸ್ತು ಮತ್ತು ಸಮಯ ಪಾಲನೆ ಶಾಲೆಯ ಪ್ರಮುಖ ಆದ್ಯತೆಯಾಗಿದೆ.

ತಾಯಿ ಸರಸ್ವತಿಯ ಆಶೀರ್ವಾದ ಮಗುವಿನ ಶಿಕ್ಷಣದ ಪ್ರಯಾಣದತ್ತ ಸುಗಮವಾಗಿ ಕರೆದೊಯುತ್ತದೆ ಎಂಬ ನಂಬಿಕೆಯೊಂದಿಗೆ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಪ್ರೀತಿಯನ್ನು ತುಂಬಲು ಹಾಗೂ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಲು ಅಕ್ಷರಾಭ್ಯಾಸ ಕಾರ್ಯಕ್ರಮವು ಸಹಕಾರಿಯಾಗಿದೆ ಎಂದು ಶಾಲಾ ಕಾರ್ಯದರ್ಶಿ  ಸಿ ಎನ್ ಸತೀಶ್ ರಾಜ್ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ಸಿ.ನಾಗರಾಜು, ಸುನಂದಾ, ಪ್ರಾಂಶುಪಾಲೆ ರಶ್ಮಿ ಸತೀಶ್ ರಾಜ್, ಅನುಸೂಯಾ, ಸಂಯೋಜಕಿ ತೇಜಸ್ವಿನಿ, ಶಿಕ್ಷಕ ವೃಂದ್ಧ, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

3 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

14 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

15 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago