ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸಾಮೂಹಿಕ ಅಕ್ಷರಾಭ್ಯಾಸ

ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಶಾಲೆಯ ಬಾಗಿಲು ತೆರೆದಿದೆ, ತೊದಲು ನುಡಿಯುತ್ತಿದ್ದ ಮಕ್ಕಳು ಅಕ್ಷರಗಳ ಉಚ್ಛಾರಣೆ, ಬರೆಯಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆ ಇಂದು ನಗರದ ನ್ಯಾಷನಲ್ ಪ್ರೈಡ್ ಶಾಲೆಯ ಮೊದಲ ದಿನವಾದ ಇಂದು ಶಾಸ್ತ್ರಬದ್ದವಾಗಿಯೇ ಆರಂಭಿಸಲಾಗಿದೆ.

ನೂತನವಾಗಿ ಶಾಲೆಗೆ ದಾಖಲಾದ ಸಾಮೂಹಿಕ ಅಕ್ಷರಾಭ್ಯಾಸದಲ್ಲಿ ಭಾಗವಹಿಸಿ ಜ್ಞಾನದ ದೇವತೆ ಸ್ವರತಿಯ ಅಶೀರ್ವಾದದೊಂದಿಗೆ ವಿದ್ಯೆ ಕಲಿಕೆಯನ್ನ ಆರಂಭಿಸಿದರು.

ಸಾಮಾನ್ಯವಾಗಿ ಶೃಂಗೇರಿಯ ಶಾರದಾಂಬೆಯ ಸನ್ನಿಧಿಯಲ್ಲಿ ತಮ್ಮ ಮಕ್ಕಳ ಅಕ್ಷರಾಭ್ಯಾಸವನ್ನ ಮಾಡುತ್ತಾರೆ, ಈ ಪರಂಪರೆಯನ್ನೇ ಈ ಶಾಲೆಯಲ್ಲಿ ಪ್ರತಿಯೊಂದು ಮಗುವಿನ ಅಕ್ಷರಾಭ್ಯಾಸವನ್ನ ಸಾಮೂಹಿಕವಾಗಿ ಮಾಡಲಾಯಿತು.

ಮೊದಲ ಅಕ್ಷರವಾಗಿ ಮಕ್ಕಳು ಕನ್ನಡ ವರ್ಣಮಾಲೆಯ ಅ ಆ ಇ ಈ ನ್ನು ಸ್ಲೇಟ್ ನಲ್ಲಿ ಬರೆದು ಶಾಸ್ತ್ರೋಕ್ತವಾಗಿ ಮೊದಲ ದಿನ ಆರಂಭಿಸಿದರು.

ಮಕ್ಕಳ ಜೊತೆಯಲ್ಲಿ ಬಂದ ಪೋಷಕರು ಅಕ್ಷರಭ್ಯಾಸದಲ್ಲಿ ಭಾಗಿಯಾಗಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಪುರಾಣಗಳಲ್ಲಿ ವಾಲ್ಮೀಕಿ ಮಹರ್ಷಿಗಳು ಲವಕುಶರಿಗೆ ಅಕ್ಷರಭ್ಯಾಸವನ್ನು ಮಾಡಿಸುವ ಮೂಲಕ ವಿದ್ಯೆಯನ್ನು ಪ್ರಾರಂಭಿಸಿದ್ದರು ಎಂಬ ಉಲ್ಲೇಖವಿದೆ. ಸರ್ವಧರ್ಮ ಸಮನ್ವಯತೆ ಸಾರುವ ನಿಟ್ಟಿನಲ್ಲಿ ಈ ಶಾಲೆ ಮುಂದಿದೆ. ಅದೇರೀತಿ ಶಿಸ್ತು ಮತ್ತು ಸಮಯ ಪಾಲನೆ ಶಾಲೆಯ ಪ್ರಮುಖ ಆದ್ಯತೆಯಾಗಿದೆ.

ತಾಯಿ ಸರಸ್ವತಿಯ ಆಶೀರ್ವಾದ ಮಗುವಿನ ಶಿಕ್ಷಣದ ಪ್ರಯಾಣದತ್ತ ಸುಗಮವಾಗಿ ಕರೆದೊಯುತ್ತದೆ ಎಂಬ ನಂಬಿಕೆಯೊಂದಿಗೆ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಪ್ರೀತಿಯನ್ನು ತುಂಬಲು ಹಾಗೂ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಲು ಅಕ್ಷರಾಭ್ಯಾಸ ಕಾರ್ಯಕ್ರಮವು ಸಹಕಾರಿಯಾಗಿದೆ ಎಂದು ಶಾಲಾ ಕಾರ್ಯದರ್ಶಿ  ಸಿ ಎನ್ ಸತೀಶ್ ರಾಜ್ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ಸಿ.ನಾಗರಾಜು, ಸುನಂದಾ, ಪ್ರಾಂಶುಪಾಲೆ ರಶ್ಮಿ ಸತೀಶ್ ರಾಜ್, ಅನುಸೂಯಾ, ಸಂಯೋಜಕಿ ತೇಜಸ್ವಿನಿ, ಶಿಕ್ಷಕ ವೃಂದ್ಧ, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

2 hours ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago