ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಶಾಲೆಯ ಬಾಗಿಲು ತೆರೆದಿದೆ, ತೊದಲು ನುಡಿಯುತ್ತಿದ್ದ ಮಕ್ಕಳು ಅಕ್ಷರಗಳ ಉಚ್ಛಾರಣೆ, ಬರೆಯಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆ ಇಂದು ನಗರದ ನ್ಯಾಷನಲ್ ಪ್ರೈಡ್ ಶಾಲೆಯ ಮೊದಲ ದಿನವಾದ ಇಂದು ಶಾಸ್ತ್ರಬದ್ದವಾಗಿಯೇ ಆರಂಭಿಸಲಾಗಿದೆ.
ನೂತನವಾಗಿ ಶಾಲೆಗೆ ದಾಖಲಾದ ಸಾಮೂಹಿಕ ಅಕ್ಷರಾಭ್ಯಾಸದಲ್ಲಿ ಭಾಗವಹಿಸಿ ಜ್ಞಾನದ ದೇವತೆ ಸ್ವರತಿಯ ಅಶೀರ್ವಾದದೊಂದಿಗೆ ವಿದ್ಯೆ ಕಲಿಕೆಯನ್ನ ಆರಂಭಿಸಿದರು.
ಸಾಮಾನ್ಯವಾಗಿ ಶೃಂಗೇರಿಯ ಶಾರದಾಂಬೆಯ ಸನ್ನಿಧಿಯಲ್ಲಿ ತಮ್ಮ ಮಕ್ಕಳ ಅಕ್ಷರಾಭ್ಯಾಸವನ್ನ ಮಾಡುತ್ತಾರೆ, ಈ ಪರಂಪರೆಯನ್ನೇ ಈ ಶಾಲೆಯಲ್ಲಿ ಪ್ರತಿಯೊಂದು ಮಗುವಿನ ಅಕ್ಷರಾಭ್ಯಾಸವನ್ನ ಸಾಮೂಹಿಕವಾಗಿ ಮಾಡಲಾಯಿತು.
ಮೊದಲ ಅಕ್ಷರವಾಗಿ ಮಕ್ಕಳು ಕನ್ನಡ ವರ್ಣಮಾಲೆಯ ಅ ಆ ಇ ಈ ನ್ನು ಸ್ಲೇಟ್ ನಲ್ಲಿ ಬರೆದು ಶಾಸ್ತ್ರೋಕ್ತವಾಗಿ ಮೊದಲ ದಿನ ಆರಂಭಿಸಿದರು.
ಮಕ್ಕಳ ಜೊತೆಯಲ್ಲಿ ಬಂದ ಪೋಷಕರು ಅಕ್ಷರಭ್ಯಾಸದಲ್ಲಿ ಭಾಗಿಯಾಗಿದ್ದರ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.
ಪುರಾಣಗಳಲ್ಲಿ ವಾಲ್ಮೀಕಿ ಮಹರ್ಷಿಗಳು ಲವಕುಶರಿಗೆ ಅಕ್ಷರಭ್ಯಾಸವನ್ನು ಮಾಡಿಸುವ ಮೂಲಕ ವಿದ್ಯೆಯನ್ನು ಪ್ರಾರಂಭಿಸಿದ್ದರು ಎಂಬ ಉಲ್ಲೇಖವಿದೆ. ಸರ್ವಧರ್ಮ ಸಮನ್ವಯತೆ ಸಾರುವ ನಿಟ್ಟಿನಲ್ಲಿ ಈ ಶಾಲೆ ಮುಂದಿದೆ. ಅದೇರೀತಿ ಶಿಸ್ತು ಮತ್ತು ಸಮಯ ಪಾಲನೆ ಶಾಲೆಯ ಪ್ರಮುಖ ಆದ್ಯತೆಯಾಗಿದೆ.
ತಾಯಿ ಸರಸ್ವತಿಯ ಆಶೀರ್ವಾದ ಮಗುವಿನ ಶಿಕ್ಷಣದ ಪ್ರಯಾಣದತ್ತ ಸುಗಮವಾಗಿ ಕರೆದೊಯುತ್ತದೆ ಎಂಬ ನಂಬಿಕೆಯೊಂದಿಗೆ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಪ್ರೀತಿಯನ್ನು ತುಂಬಲು ಹಾಗೂ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಲು ಅಕ್ಷರಾಭ್ಯಾಸ ಕಾರ್ಯಕ್ರಮವು ಸಹಕಾರಿಯಾಗಿದೆ ಎಂದು ಶಾಲಾ ಕಾರ್ಯದರ್ಶಿ ಸಿ ಎನ್ ಸತೀಶ್ ರಾಜ್ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ಸಿ.ನಾಗರಾಜು, ಸುನಂದಾ, ಪ್ರಾಂಶುಪಾಲೆ ರಶ್ಮಿ ಸತೀಶ್ ರಾಜ್, ಅನುಸೂಯಾ, ಸಂಯೋಜಕಿ ತೇಜಸ್ವಿನಿ, ಶಿಕ್ಷಕ ವೃಂದ್ಧ, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…