ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ-ಪೋಷಕರ‌ ಪಾದಪೂಜಾ ಕಾರ್ಯಕ್ರಮ

ದೊಡ್ಡಬಳ್ಳಾಪುರ ನಗರದ ಹೆಸರಾಂತ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಂಪ್ರದಾಯದಂತೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.

ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮದಲ್ಲಿ ಪೋಷಕರು, ಮಕ್ಕಳು ಬಹಳ ಸಂತಸದಿಂದ ಪಾಲ್ಗೊಂಡು ಮಕ್ಕಳು ತಮ್ಮ ಪೋಷಕರುಗಳಿಗೆ ಲವಲವಿಕೆಯಿಂದ ಪಾದಪೂಜೆ ಮಾಡಿದರು. ಮಕ್ಕಳಿಂದ ಪಾದಪೂಜೆ ಮಾಡಿಸಿಕೊಂಡ ಪೋಷಕರು ಭಾವುಕರಾದರು…

ಪಾದಪೂಜೆ ಕಾರ್ಯಕ್ರಮದಲ್ಲಿ ಪೂಜೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನು ಮಕ್ಕಳಿಗೆ ನೀಡಿ ಪೋಷಕರ ಪಾದಪೂಜೆ ಮಾಡಿಸಲಾಯಿತು.

ಶಾಲೆಯಲ್ಲಿ ನಡೆದ ಪಾದಪೂಜೆಯ ಕುರಿತು ಶಾಲೆಯ ಕಾರ್ಯದರ್ಶಿ ಸತೀಶ್ ರಾಜ್ ಮಾತನಾಡಿ, ನಮ್ಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಜನ್ಮದಾತರಿಗೆ ಪಾದಪೂಜೆಯನ್ನು ನಡೆಸಲಾಗಿತ್ತು.‌ ಪಾದಪೂಜೆಯ ಮುಖ್ಯ ಉದ್ದೇಶ, ಮಕ್ಕಳು ಪೋಷಕರನ್ನು ಕಡೆಗಣಿಸುವುದನ್ನು ತಡೆಯಲು, ಮಕ್ಕಳಿಗೆ ವಿದ್ಯೆಯ ಜೊತೆ ನೈತಿಕ ಶಿಕ್ಷಣವನ್ನು ನೀಡಬೇಕು. ಮಕ್ಕಳ ಕರ್ತವ್ಯ, ಬಾಧ್ಯತೆಗಳೇನು ಏನೆಂಬುದನ್ನು ತಿಳಿಸಿಕೊಡುವುದು, ತಂದೆ- ತಾಯಿ ಮಕ್ಕಳ ಸಂಬಂದವನ್ನು ಗಟ್ಟಿಗೊಳಿಸುವುದು ಎಂದು ಹೇಳಿದರು.

ಪೋಷಕರು ಮಾತನಾಡಿ, ತಂದೆ-ತಾಯಿಗಳ ತಮ್ಮ ಮಕ್ಕಳು ಗೌರವ ಹಾಗೂ ಸಂಸ್ಕಾರದ ಕಲಿಯಬೇಕು‌ ಎಂಬುದು ಗುರುಕುಲ ಪದ್ಧತಿಯಲ್ಲಿತ್ತು. ಈ ಒಂದು ಅಂಶವನ್ನು ಈ ಶಾಲೆ ಅಳವಡಿಸಿಕೊಂಡಿದೆ. ಈಗ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬರಬೇಕು ಎಂಬುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಇಲ್ಲಿ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುತ್ತಿದ್ದಾರೆ, ಇದರ ಭಾಗವಾಗಿ ಶಾಲೆಯಲ್ಲಿ ಶಾರದೆಯ ಪೂಜೆಯ ಅಂಗವಾಗಿ ಪಾದಪೂಜೆ ನಡೆಸುತ್ತಿದ್ದಾರೆ. ಇದು ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಜಾಗೃತಿ ಮೂಡುವಂತಹ ಕಾರ್ಯಕ್ರಮವಾಗಿದೆ. ಇದರಿಂದ ಪೋಷಕರು ಮಕ್ಕಳಿಗೆ ಹೇಗೆ ಕಲಿಸಬೇಕು ಅನ್ನೋದು ತಿಳಿದುಬರುತ್ತದೆ ಎಂದರು.

ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ, ಪಾದಪೂಜೆ ನಡೆಯುತ್ತದೆ ಎಂದು ಕೇಳಿದ್ದೆ, ಆದರೆ ಇಲ್ಲಿಗೆ ಬಂದ ಮೇಲೆ ನನಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತುಂಬ ಸಂತೋಷವಾಯಿತು. ನಾನು ಇಂದು ನಮ್ಮ ಪೋಷಕರ ಪಾದಪೂಜೆ ಮಾಡಿದೆನು. ಇದರಿಂದ ಸಂತಸವಾಗಿದ್ದು, ನಮ್ಮ ಸಾಧನೆಗೆ ಸ್ಫೂರ್ತಿ ಸಿಗುತ್ತದೆ ಎಂದರು. ಈ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಮಾತ್ರ ನಡೆಸಲಾಗುತ್ತದೆ. ನಾನು ಈ ಶಾಲೆಯಲ್ಲಿ ಓದುತ್ತಿರುವುದು ಹೆಮ್ಮಯ ವಿಚಾರ ಎಂದರು.

ಈ ವೇಳೆ ನ್ಯಾಷನಲ್ ಪ್ರೈಡ್ ಶಾಲೆಯ ಸಂಸ್ಥಾಪಕರಾದ ಸಿ.ಎನ್ ನಾಗರಾಜು, ಮುಖ್ಯ ಶಿಕ್ಷಕಿ ರಶ್ಮಿ, ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಎಲ್ಲಾ ಪೋಷಕರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್: ಒಂದೇ ದಿನ ಮೂರು ಮನೆಗಳಲ್ಲಿ ಕಳ್ಳತನ

ದೇವನಹಳ್ಳಿ ಹೊರ ವಲಯದಲ್ಲಿ ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್ ಆಗಿದೆ.. ಆವತಿ ಗ್ರಾಮದಲ್ಲಿ ಒಂದೇ ದಿನ ಮೂರು ಮನೆಗಳಲ್ಲಿ…

2 hours ago

ಯುಗಾದಿ ಹಬ್ಬದ ಸಂದರ್ಭದಲ್ಲಿ ಗ್ರಾಮದಲ್ಲಿ ಬೈಕ್ ವೀಲಿಂಗ್ ವಿಚಾರ: ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ: ದೊಣ್ಣೆ ಹಿಡಿದು ಬಡಿದಾಡಿಕೊಂಡ ಯುವಕರ ಗುಂಪು

ಯುಗಾದಿ ಹಬ್ಬದ ಸಂದರ್ಭದಲ್ಲಿ ನಶೆಯಲ್ಲಿ ವೀಲಿಂಗ್ ಮಾಡುತ್ತಿರುವಾಗ ಗ್ರಾಮದವರು ಪ್ನಶ್ನೆ ಮಾಡಿದ್ದಕ್ಕೆ  ಯುವಕರು ದೊಣ್ಣೆ ಹಿಡಿದು ಹಲ್ಲೆ ಮಾಡಿರುವ ಘಟನೆ…

3 hours ago

ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……

ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ. ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ,…

10 hours ago

ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು…

21 hours ago

ಮಾ.21, 22ರಂದು ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್

ಮಾ.21, 22ರಂದು ದೊಡ್ಡಬಳ್ಳಾಪುರದ‌ ಹಾದ್ರೀಪುರ ಗ್ರಾಮದಲ್ಲಿ‌ ಎರಡನೇ‌ ವರ್ಷದ ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ... ಜೈ ಆಂಜನೇಯ, ರಾಕ್…

22 hours ago

ಎಲ್‌ಪಿಜಿ ಸಿಲಿಂಡರ್ ಗಾಗಿ ಮುಗಿಬಿದ್ದ ಜನ

ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ…

1 day ago