ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ-ಪೋಷಕರ‌ ಪಾದಪೂಜಾ ಕಾರ್ಯಕ್ರಮ

ದೊಡ್ಡಬಳ್ಳಾಪುರ ನಗರದ ಹೆಸರಾಂತ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಂಪ್ರದಾಯದಂತೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.

ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮದಲ್ಲಿ ಪೋಷಕರು, ಮಕ್ಕಳು ಬಹಳ ಸಂತಸದಿಂದ ಪಾಲ್ಗೊಂಡು ಮಕ್ಕಳು ತಮ್ಮ ಪೋಷಕರುಗಳಿಗೆ ಲವಲವಿಕೆಯಿಂದ ಪಾದಪೂಜೆ ಮಾಡಿದರು. ಮಕ್ಕಳಿಂದ ಪಾದಪೂಜೆ ಮಾಡಿಸಿಕೊಂಡ ಪೋಷಕರು ಭಾವುಕರಾದರು…

ಪಾದಪೂಜೆ ಕಾರ್ಯಕ್ರಮದಲ್ಲಿ ಪೂಜೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನು ಮಕ್ಕಳಿಗೆ ನೀಡಿ ಪೋಷಕರ ಪಾದಪೂಜೆ ಮಾಡಿಸಲಾಯಿತು.

ಶಾಲೆಯಲ್ಲಿ ನಡೆದ ಪಾದಪೂಜೆಯ ಕುರಿತು ಶಾಲೆಯ ಕಾರ್ಯದರ್ಶಿ ಸತೀಶ್ ರಾಜ್ ಮಾತನಾಡಿ, ನಮ್ಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಜನ್ಮದಾತರಿಗೆ ಪಾದಪೂಜೆಯನ್ನು ನಡೆಸಲಾಗಿತ್ತು.‌ ಪಾದಪೂಜೆಯ ಮುಖ್ಯ ಉದ್ದೇಶ, ಮಕ್ಕಳು ಪೋಷಕರನ್ನು ಕಡೆಗಣಿಸುವುದನ್ನು ತಡೆಯಲು, ಮಕ್ಕಳಿಗೆ ವಿದ್ಯೆಯ ಜೊತೆ ನೈತಿಕ ಶಿಕ್ಷಣವನ್ನು ನೀಡಬೇಕು. ಮಕ್ಕಳ ಕರ್ತವ್ಯ, ಬಾಧ್ಯತೆಗಳೇನು ಏನೆಂಬುದನ್ನು ತಿಳಿಸಿಕೊಡುವುದು, ತಂದೆ- ತಾಯಿ ಮಕ್ಕಳ ಸಂಬಂದವನ್ನು ಗಟ್ಟಿಗೊಳಿಸುವುದು ಎಂದು ಹೇಳಿದರು.

ಪೋಷಕರು ಮಾತನಾಡಿ, ತಂದೆ-ತಾಯಿಗಳ ತಮ್ಮ ಮಕ್ಕಳು ಗೌರವ ಹಾಗೂ ಸಂಸ್ಕಾರದ ಕಲಿಯಬೇಕು‌ ಎಂಬುದು ಗುರುಕುಲ ಪದ್ಧತಿಯಲ್ಲಿತ್ತು. ಈ ಒಂದು ಅಂಶವನ್ನು ಈ ಶಾಲೆ ಅಳವಡಿಸಿಕೊಂಡಿದೆ. ಈಗ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬರಬೇಕು ಎಂಬುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಇಲ್ಲಿ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುತ್ತಿದ್ದಾರೆ, ಇದರ ಭಾಗವಾಗಿ ಶಾಲೆಯಲ್ಲಿ ಶಾರದೆಯ ಪೂಜೆಯ ಅಂಗವಾಗಿ ಪಾದಪೂಜೆ ನಡೆಸುತ್ತಿದ್ದಾರೆ. ಇದು ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಜಾಗೃತಿ ಮೂಡುವಂತಹ ಕಾರ್ಯಕ್ರಮವಾಗಿದೆ. ಇದರಿಂದ ಪೋಷಕರು ಮಕ್ಕಳಿಗೆ ಹೇಗೆ ಕಲಿಸಬೇಕು ಅನ್ನೋದು ತಿಳಿದುಬರುತ್ತದೆ ಎಂದರು.

ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ, ಪಾದಪೂಜೆ ನಡೆಯುತ್ತದೆ ಎಂದು ಕೇಳಿದ್ದೆ, ಆದರೆ ಇಲ್ಲಿಗೆ ಬಂದ ಮೇಲೆ ನನಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತುಂಬ ಸಂತೋಷವಾಯಿತು. ನಾನು ಇಂದು ನಮ್ಮ ಪೋಷಕರ ಪಾದಪೂಜೆ ಮಾಡಿದೆನು. ಇದರಿಂದ ಸಂತಸವಾಗಿದ್ದು, ನಮ್ಮ ಸಾಧನೆಗೆ ಸ್ಫೂರ್ತಿ ಸಿಗುತ್ತದೆ ಎಂದರು. ಈ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಮಾತ್ರ ನಡೆಸಲಾಗುತ್ತದೆ. ನಾನು ಈ ಶಾಲೆಯಲ್ಲಿ ಓದುತ್ತಿರುವುದು ಹೆಮ್ಮಯ ವಿಚಾರ ಎಂದರು.

ಈ ವೇಳೆ ನ್ಯಾಷನಲ್ ಪ್ರೈಡ್ ಶಾಲೆಯ ಸಂಸ್ಥಾಪಕರಾದ ಸಿ.ಎನ್ ನಾಗರಾಜು, ಮುಖ್ಯ ಶಿಕ್ಷಕಿ ರಶ್ಮಿ, ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಎಲ್ಲಾ ಪೋಷಕರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago