ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ-ಪೋಷಕರ‌ ಪಾದಪೂಜಾ ಕಾರ್ಯಕ್ರಮ

ದೊಡ್ಡಬಳ್ಳಾಪುರ ನಗರದ ಹೆಸರಾಂತ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಂಪ್ರದಾಯದಂತೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.

ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮದಲ್ಲಿ ಪೋಷಕರು, ಮಕ್ಕಳು ಬಹಳ ಸಂತಸದಿಂದ ಪಾಲ್ಗೊಂಡು ಮಕ್ಕಳು ತಮ್ಮ ಪೋಷಕರುಗಳಿಗೆ ಲವಲವಿಕೆಯಿಂದ ಪಾದಪೂಜೆ ಮಾಡಿದರು. ಮಕ್ಕಳಿಂದ ಪಾದಪೂಜೆ ಮಾಡಿಸಿಕೊಂಡ ಪೋಷಕರು ಭಾವುಕರಾದರು…

ಪಾದಪೂಜೆ ಕಾರ್ಯಕ್ರಮದಲ್ಲಿ ಪೂಜೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನು ಮಕ್ಕಳಿಗೆ ನೀಡಿ ಪೋಷಕರ ಪಾದಪೂಜೆ ಮಾಡಿಸಲಾಯಿತು.

ಶಾಲೆಯಲ್ಲಿ ನಡೆದ ಪಾದಪೂಜೆಯ ಕುರಿತು ಶಾಲೆಯ ಕಾರ್ಯದರ್ಶಿ ಸತೀಶ್ ರಾಜ್ ಮಾತನಾಡಿ, ನಮ್ಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಜನ್ಮದಾತರಿಗೆ ಪಾದಪೂಜೆಯನ್ನು ನಡೆಸಲಾಗಿತ್ತು.‌ ಪಾದಪೂಜೆಯ ಮುಖ್ಯ ಉದ್ದೇಶ, ಮಕ್ಕಳು ಪೋಷಕರನ್ನು ಕಡೆಗಣಿಸುವುದನ್ನು ತಡೆಯಲು, ಮಕ್ಕಳಿಗೆ ವಿದ್ಯೆಯ ಜೊತೆ ನೈತಿಕ ಶಿಕ್ಷಣವನ್ನು ನೀಡಬೇಕು. ಮಕ್ಕಳ ಕರ್ತವ್ಯ, ಬಾಧ್ಯತೆಗಳೇನು ಏನೆಂಬುದನ್ನು ತಿಳಿಸಿಕೊಡುವುದು, ತಂದೆ- ತಾಯಿ ಮಕ್ಕಳ ಸಂಬಂದವನ್ನು ಗಟ್ಟಿಗೊಳಿಸುವುದು ಎಂದು ಹೇಳಿದರು.

ಪೋಷಕರು ಮಾತನಾಡಿ, ತಂದೆ-ತಾಯಿಗಳ ತಮ್ಮ ಮಕ್ಕಳು ಗೌರವ ಹಾಗೂ ಸಂಸ್ಕಾರದ ಕಲಿಯಬೇಕು‌ ಎಂಬುದು ಗುರುಕುಲ ಪದ್ಧತಿಯಲ್ಲಿತ್ತು. ಈ ಒಂದು ಅಂಶವನ್ನು ಈ ಶಾಲೆ ಅಳವಡಿಸಿಕೊಂಡಿದೆ. ಈಗ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬರಬೇಕು ಎಂಬುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಇಲ್ಲಿ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುತ್ತಿದ್ದಾರೆ, ಇದರ ಭಾಗವಾಗಿ ಶಾಲೆಯಲ್ಲಿ ಶಾರದೆಯ ಪೂಜೆಯ ಅಂಗವಾಗಿ ಪಾದಪೂಜೆ ನಡೆಸುತ್ತಿದ್ದಾರೆ. ಇದು ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಜಾಗೃತಿ ಮೂಡುವಂತಹ ಕಾರ್ಯಕ್ರಮವಾಗಿದೆ. ಇದರಿಂದ ಪೋಷಕರು ಮಕ್ಕಳಿಗೆ ಹೇಗೆ ಕಲಿಸಬೇಕು ಅನ್ನೋದು ತಿಳಿದುಬರುತ್ತದೆ ಎಂದರು.

ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ, ಪಾದಪೂಜೆ ನಡೆಯುತ್ತದೆ ಎಂದು ಕೇಳಿದ್ದೆ, ಆದರೆ ಇಲ್ಲಿಗೆ ಬಂದ ಮೇಲೆ ನನಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತುಂಬ ಸಂತೋಷವಾಯಿತು. ನಾನು ಇಂದು ನಮ್ಮ ಪೋಷಕರ ಪಾದಪೂಜೆ ಮಾಡಿದೆನು. ಇದರಿಂದ ಸಂತಸವಾಗಿದ್ದು, ನಮ್ಮ ಸಾಧನೆಗೆ ಸ್ಫೂರ್ತಿ ಸಿಗುತ್ತದೆ ಎಂದರು. ಈ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಮಾತ್ರ ನಡೆಸಲಾಗುತ್ತದೆ. ನಾನು ಈ ಶಾಲೆಯಲ್ಲಿ ಓದುತ್ತಿರುವುದು ಹೆಮ್ಮಯ ವಿಚಾರ ಎಂದರು.

ಈ ವೇಳೆ ನ್ಯಾಷನಲ್ ಪ್ರೈಡ್ ಶಾಲೆಯ ಸಂಸ್ಥಾಪಕರಾದ ಸಿ.ಎನ್ ನಾಗರಾಜು, ಮುಖ್ಯ ಶಿಕ್ಷಕಿ ರಶ್ಮಿ, ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಎಲ್ಲಾ ಪೋಷಕರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

8 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

20 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago