ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ-ಪೋಷಕರ‌ ಪಾದಪೂಜಾ ಕಾರ್ಯಕ್ರಮ

ದೊಡ್ಡಬಳ್ಳಾಪುರ ನಗರದ ಹೆಸರಾಂತ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಂಪ್ರದಾಯದಂತೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.

ಸರಸ್ವತಿ ಪೂಜೆ ಹಾಗೂ ಪೋಷಕರ‌ ಪಾದಪೂಜಾ ಕಾರ್ಯಕ್ರಮದಲ್ಲಿ ಪೋಷಕರು, ಮಕ್ಕಳು ಬಹಳ ಸಂತಸದಿಂದ ಪಾಲ್ಗೊಂಡು ಮಕ್ಕಳು ತಮ್ಮ ಪೋಷಕರುಗಳಿಗೆ ಲವಲವಿಕೆಯಿಂದ ಪಾದಪೂಜೆ ಮಾಡಿದರು. ಮಕ್ಕಳಿಂದ ಪಾದಪೂಜೆ ಮಾಡಿಸಿಕೊಂಡ ಪೋಷಕರು ಭಾವುಕರಾದರು…

ಪಾದಪೂಜೆ ಕಾರ್ಯಕ್ರಮದಲ್ಲಿ ಪೂಜೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನು ಮಕ್ಕಳಿಗೆ ನೀಡಿ ಪೋಷಕರ ಪಾದಪೂಜೆ ಮಾಡಿಸಲಾಯಿತು.

ಶಾಲೆಯಲ್ಲಿ ನಡೆದ ಪಾದಪೂಜೆಯ ಕುರಿತು ಶಾಲೆಯ ಕಾರ್ಯದರ್ಶಿ ಸತೀಶ್ ರಾಜ್ ಮಾತನಾಡಿ, ನಮ್ಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಜನ್ಮದಾತರಿಗೆ ಪಾದಪೂಜೆಯನ್ನು ನಡೆಸಲಾಗಿತ್ತು.‌ ಪಾದಪೂಜೆಯ ಮುಖ್ಯ ಉದ್ದೇಶ, ಮಕ್ಕಳು ಪೋಷಕರನ್ನು ಕಡೆಗಣಿಸುವುದನ್ನು ತಡೆಯಲು, ಮಕ್ಕಳಿಗೆ ವಿದ್ಯೆಯ ಜೊತೆ ನೈತಿಕ ಶಿಕ್ಷಣವನ್ನು ನೀಡಬೇಕು. ಮಕ್ಕಳ ಕರ್ತವ್ಯ, ಬಾಧ್ಯತೆಗಳೇನು ಏನೆಂಬುದನ್ನು ತಿಳಿಸಿಕೊಡುವುದು, ತಂದೆ- ತಾಯಿ ಮಕ್ಕಳ ಸಂಬಂದವನ್ನು ಗಟ್ಟಿಗೊಳಿಸುವುದು ಎಂದು ಹೇಳಿದರು.

ಪೋಷಕರು ಮಾತನಾಡಿ, ತಂದೆ-ತಾಯಿಗಳ ತಮ್ಮ ಮಕ್ಕಳು ಗೌರವ ಹಾಗೂ ಸಂಸ್ಕಾರದ ಕಲಿಯಬೇಕು‌ ಎಂಬುದು ಗುರುಕುಲ ಪದ್ಧತಿಯಲ್ಲಿತ್ತು. ಈ ಒಂದು ಅಂಶವನ್ನು ಈ ಶಾಲೆ ಅಳವಡಿಸಿಕೊಂಡಿದೆ. ಈಗ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬರಬೇಕು ಎಂಬುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಇಲ್ಲಿ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುತ್ತಿದ್ದಾರೆ, ಇದರ ಭಾಗವಾಗಿ ಶಾಲೆಯಲ್ಲಿ ಶಾರದೆಯ ಪೂಜೆಯ ಅಂಗವಾಗಿ ಪಾದಪೂಜೆ ನಡೆಸುತ್ತಿದ್ದಾರೆ. ಇದು ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಜಾಗೃತಿ ಮೂಡುವಂತಹ ಕಾರ್ಯಕ್ರಮವಾಗಿದೆ. ಇದರಿಂದ ಪೋಷಕರು ಮಕ್ಕಳಿಗೆ ಹೇಗೆ ಕಲಿಸಬೇಕು ಅನ್ನೋದು ತಿಳಿದುಬರುತ್ತದೆ ಎಂದರು.

ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ, ಪಾದಪೂಜೆ ನಡೆಯುತ್ತದೆ ಎಂದು ಕೇಳಿದ್ದೆ, ಆದರೆ ಇಲ್ಲಿಗೆ ಬಂದ ಮೇಲೆ ನನಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತುಂಬ ಸಂತೋಷವಾಯಿತು. ನಾನು ಇಂದು ನಮ್ಮ ಪೋಷಕರ ಪಾದಪೂಜೆ ಮಾಡಿದೆನು. ಇದರಿಂದ ಸಂತಸವಾಗಿದ್ದು, ನಮ್ಮ ಸಾಧನೆಗೆ ಸ್ಫೂರ್ತಿ ಸಿಗುತ್ತದೆ ಎಂದರು. ಈ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಮಾತ್ರ ನಡೆಸಲಾಗುತ್ತದೆ. ನಾನು ಈ ಶಾಲೆಯಲ್ಲಿ ಓದುತ್ತಿರುವುದು ಹೆಮ್ಮಯ ವಿಚಾರ ಎಂದರು.

ಈ ವೇಳೆ ನ್ಯಾಷನಲ್ ಪ್ರೈಡ್ ಶಾಲೆಯ ಸಂಸ್ಥಾಪಕರಾದ ಸಿ.ಎನ್ ನಾಗರಾಜು, ಮುಖ್ಯ ಶಿಕ್ಷಕಿ ರಶ್ಮಿ, ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಎಲ್ಲಾ ಪೋಷಕರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

46 minutes ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

7 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

17 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

22 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

23 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

1 day ago