ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ, ಪೋಷಕರ ಪಾದಪೂಜೆ ಕಾರ್ಯಕ್ರಮ

ದೊಡ್ಡಬಳ್ಳಾಪುರದ ಪ್ರತಿಷ್ಠಿತ ಶಾಲೆಯಾದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಧೈರ್ಯವಾಗಿ ಎದುರಿಸಲಿ, ಒಳ್ಳೆಯ ಸಂಸ್ಕಾರ ಪಡೆಯಲಿ ಎಂಬ ಉದ್ದೇಶದಿಂದ ಸರಸ್ವತಿ ಪೂಜೆ ಮತ್ತು ತಂದೆ ತಾಯಿಗಳ ಪಾದಪೂಜೆಯನ್ನು ಶಾಲೆಯ ಸಂಸ್ಥಾಪಕರಾದ ಸಿ ನಾಗರಾಜು ಕಾರ್ಯದರ್ಶಿ ಸತೀಶ್ ರಾಜ್, ಮುಖ್ಯ ಶಿಕ್ಷಕಿ ರಶ್ಮಿ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು. ಶಾಲೆಯ ಎಲ್ಲಾ ಪೋಷಕರು ಪೂಜಾ ಕಾರ್ಯಗಳಲ್ಲಿ ತುಂಬಾ ಉತ್ಸಾಹದಿಂದ ಭಾಗವಹಿಸಿದ್ದರು.

“ಮಾತೃ ದೇವೋ ಭವ ಪಿತೃ ದೇವೋ ಭವ” ಎಂಬ ನುಡಿಯಂತೆ ವಿದ್ಯಾರ್ಥಿಗಳಿಗೆ ತಂದೆ ತಾಯಿಯ ಮಹತ್ವ ಎಷ್ಟು, ಯಾವ ರೀತಿ ಗೌರವದಿಂದ ಕಾಣಬೇಕು, ತಂದೆ ತಾಯಿಗಳೆ ನಮಗೆ ಕಣ್ಣಿಗೆ ಕಾಣುವ ದೇವರ ಸಮಾನ ಎಂಬ ಕಲ್ಪನೆಯನ್ನು ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳ ಅರಿವಿಗೆ ತರಲಾಯಿತು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಪೋಷಕರನ್ನು ವಿಶೇಷ ವ್ಯವಸ್ಥೆ ಮಾಡಿ, ಸಾಲಾಗಿ ಕೂರಿಸಿ ತಮ್ಮ ಮಕ್ಕಳಿಂದ ಪಾದಗಳಿಗೆ ಪೂಜೆಯನ್ನು ಮಾಡಿಸಿ, ತಂದೆ ತಾಯಿಯಿಂದ ಆಶೀರ್ವಾದವನ್ನು ಮಾಡಿಸಲಾಯಿತು. ಇದು ಮಕ್ಕಳ ವಿದ್ಯಾಭ್ಯಾಸದ ಕಡೆ ಧನಾತ್ಮಕ ಪ್ರಗತಿಯನ್ನು ನೀಡಲಿದೆ. ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಪೋಷಕರು ಆಶೀರ್ವದಿಸಿ ಸಂತೃಪ್ತ ಭಾವನೆಯನ್ನು ವ್ಯಕ್ತಪಡಿಸಿದರು ವಿದ್ಯಾರ್ಥಿಗಳು ಸಹ ತಂದೆ ತಾಯಿ ಆಶೀರ್ವಾದದ ಮಹತ್ವವನ್ನು ಅರಿತು ಸುಸಂದರ್ಭವನ್ನು ಸ್ಮರಿಸಿದರು.

ಸರಸ್ವತಿ ಪೂಜೆಯು ವಿದ್ಯಾರ್ಥಿಗಳಲ್ಲಿ ವಿದ್ಯೆಯ ಕಡೆಗೆ ಗಮನಹರಿಸಿ ವಿದ್ಯೆ, ಬುದ್ಧಿಯನ್ನು ನೀಡಮ್ಮ ಎಂದು ಸ್ಮರಿಸಿ, ಪೂಜಿಸುವ ಪೂಜಾ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯಲು, ಅವರು ಓದಿದ್ದೆಲ್ಲ ನೆನಪಿಗೆ ಬರಲು, ತಾಯಿ ಶಾರದೆ ಆಶೀರ್ವಾದ ಮಕ್ಕಳಿಗೆ ಸಿಗಲಿ ಎಂದು ಭಕ್ತಿಯಿಂದ ತಾಯಿ ಶಾರದೆಯನ್ನು ಪೂಜಿಸಲಾಯಿತು. ಕೊನೆಯಲ್ಲಿ ಪ್ರಸಾದವನ್ನು ನೀಡಲಾಯಿತು.

ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪವಿತ್ರವಾದ ಆಚರಣೆ ಇದು ಕೇವಲ ಒಂದು ಸಂಪ್ರದಾಯವಲ್ಲ ಅದು ಕೃತಜ್ಞತೆ ಗೌರವ ಮತ್ತು ಭಕ್ತಿಯ ಸಂಕೇತವಾಗಿದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯದರ್ಶಿ ಸತೀಶ್ ರಾಜ್ “ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು” ಹಾಗಾಗಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ತಂದೆ ತಾಯಿಗಳನ್ನು ಗೌರವಿಸುವುದು. ವಿನಯ ವಿಧೇಯತೆಯಿಂದ ನಡೆದುಕೊಳ್ಳುವುದು ಹೇಗೆ ಎಂದು ಕಲಿಸಿ ಉತ್ತಮ ಪ್ರಜೆಯನ್ನಾಗಿ ನಿರ್ಮಿಸುವುದು, ನಮ್ಮ ಉದ್ದೇಶವಾಗಿದೆ. ಅದರ ಒಂದು ಭಾಗವಾಗಿ ಸರಸ್ವತಿ ಪೂಜೆ ಮತ್ತು ತಂದೆ ತಾಯಿಗಳ ಪಾದಗಳಿಗೆ ಪೂಜಿಸಿ ಆಶೀರ್ವಾದ ಪಡೆಯುವ ಕಾರ್ಯಕ್ರಮ ಇದಾಗಿದೆ.  ಇದರ ಮೂಲಕ ಎಲ್ಲ ವಿದ್ಯಾರ್ಥಿಗಳು ಯಶಸ್ಸನ್ನ ಗಳಿಸಲಿ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಲಿ ಎಂದು ಬಯಸುತ್ತೇನೆ ಎಂದು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರು ತುಂಬಾ ಉತ್ಸಾಹದಿಂದ ಭಾಗವಹಿಸಿ ತಮ್ಮ ಮಕ್ಕಳಿಗೆ ಆಶೀರ್ವದಿಸಿ, ತುಂಬಾ ಸಂತೋಷ ಮತ್ತು ಗೌರವ ಸಮರ್ಪಣ ಭಾವವನ್ನು ವ್ಯಕ್ತಪಡಿಸಿದರು.

ಯಶಸ್ವಿಯಾಗಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರಿಗೆ ಹಾಗೂ ಗುರು ಹಿರಿಯರಿಗೆ ನ್ಯಾಷನಲ್ ಪ್ರೈಡ್ ಶಾಲೆಯ ಆಡಳಿತ ಮಂಡಳಿ ಧನ್ಯವಾದಗಳನ್ನು ಅರ್ಪಿಸಿತು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

8 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

21 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago