ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ, ಪೋಷಕರ ಪಾದಪೂಜೆ ಕಾರ್ಯಕ್ರಮ

ದೊಡ್ಡಬಳ್ಳಾಪುರದ ಪ್ರತಿಷ್ಠಿತ ಶಾಲೆಯಾದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಧೈರ್ಯವಾಗಿ ಎದುರಿಸಲಿ, ಒಳ್ಳೆಯ ಸಂಸ್ಕಾರ ಪಡೆಯಲಿ ಎಂಬ ಉದ್ದೇಶದಿಂದ ಸರಸ್ವತಿ ಪೂಜೆ ಮತ್ತು ತಂದೆ ತಾಯಿಗಳ ಪಾದಪೂಜೆಯನ್ನು ಶಾಲೆಯ ಸಂಸ್ಥಾಪಕರಾದ ಸಿ ನಾಗರಾಜು ಕಾರ್ಯದರ್ಶಿ ಸತೀಶ್ ರಾಜ್, ಮುಖ್ಯ ಶಿಕ್ಷಕಿ ರಶ್ಮಿ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು. ಶಾಲೆಯ ಎಲ್ಲಾ ಪೋಷಕರು ಪೂಜಾ ಕಾರ್ಯಗಳಲ್ಲಿ ತುಂಬಾ ಉತ್ಸಾಹದಿಂದ ಭಾಗವಹಿಸಿದ್ದರು.

“ಮಾತೃ ದೇವೋ ಭವ ಪಿತೃ ದೇವೋ ಭವ” ಎಂಬ ನುಡಿಯಂತೆ ವಿದ್ಯಾರ್ಥಿಗಳಿಗೆ ತಂದೆ ತಾಯಿಯ ಮಹತ್ವ ಎಷ್ಟು, ಯಾವ ರೀತಿ ಗೌರವದಿಂದ ಕಾಣಬೇಕು, ತಂದೆ ತಾಯಿಗಳೆ ನಮಗೆ ಕಣ್ಣಿಗೆ ಕಾಣುವ ದೇವರ ಸಮಾನ ಎಂಬ ಕಲ್ಪನೆಯನ್ನು ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳ ಅರಿವಿಗೆ ತರಲಾಯಿತು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಪೋಷಕರನ್ನು ವಿಶೇಷ ವ್ಯವಸ್ಥೆ ಮಾಡಿ, ಸಾಲಾಗಿ ಕೂರಿಸಿ ತಮ್ಮ ಮಕ್ಕಳಿಂದ ಪಾದಗಳಿಗೆ ಪೂಜೆಯನ್ನು ಮಾಡಿಸಿ, ತಂದೆ ತಾಯಿಯಿಂದ ಆಶೀರ್ವಾದವನ್ನು ಮಾಡಿಸಲಾಯಿತು. ಇದು ಮಕ್ಕಳ ವಿದ್ಯಾಭ್ಯಾಸದ ಕಡೆ ಧನಾತ್ಮಕ ಪ್ರಗತಿಯನ್ನು ನೀಡಲಿದೆ. ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಪೋಷಕರು ಆಶೀರ್ವದಿಸಿ ಸಂತೃಪ್ತ ಭಾವನೆಯನ್ನು ವ್ಯಕ್ತಪಡಿಸಿದರು ವಿದ್ಯಾರ್ಥಿಗಳು ಸಹ ತಂದೆ ತಾಯಿ ಆಶೀರ್ವಾದದ ಮಹತ್ವವನ್ನು ಅರಿತು ಸುಸಂದರ್ಭವನ್ನು ಸ್ಮರಿಸಿದರು.

ಸರಸ್ವತಿ ಪೂಜೆಯು ವಿದ್ಯಾರ್ಥಿಗಳಲ್ಲಿ ವಿದ್ಯೆಯ ಕಡೆಗೆ ಗಮನಹರಿಸಿ ವಿದ್ಯೆ, ಬುದ್ಧಿಯನ್ನು ನೀಡಮ್ಮ ಎಂದು ಸ್ಮರಿಸಿ, ಪೂಜಿಸುವ ಪೂಜಾ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯಲು, ಅವರು ಓದಿದ್ದೆಲ್ಲ ನೆನಪಿಗೆ ಬರಲು, ತಾಯಿ ಶಾರದೆ ಆಶೀರ್ವಾದ ಮಕ್ಕಳಿಗೆ ಸಿಗಲಿ ಎಂದು ಭಕ್ತಿಯಿಂದ ತಾಯಿ ಶಾರದೆಯನ್ನು ಪೂಜಿಸಲಾಯಿತು. ಕೊನೆಯಲ್ಲಿ ಪ್ರಸಾದವನ್ನು ನೀಡಲಾಯಿತು.

ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪವಿತ್ರವಾದ ಆಚರಣೆ ಇದು ಕೇವಲ ಒಂದು ಸಂಪ್ರದಾಯವಲ್ಲ ಅದು ಕೃತಜ್ಞತೆ ಗೌರವ ಮತ್ತು ಭಕ್ತಿಯ ಸಂಕೇತವಾಗಿದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯದರ್ಶಿ ಸತೀಶ್ ರಾಜ್ “ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು” ಹಾಗಾಗಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ತಂದೆ ತಾಯಿಗಳನ್ನು ಗೌರವಿಸುವುದು. ವಿನಯ ವಿಧೇಯತೆಯಿಂದ ನಡೆದುಕೊಳ್ಳುವುದು ಹೇಗೆ ಎಂದು ಕಲಿಸಿ ಉತ್ತಮ ಪ್ರಜೆಯನ್ನಾಗಿ ನಿರ್ಮಿಸುವುದು, ನಮ್ಮ ಉದ್ದೇಶವಾಗಿದೆ. ಅದರ ಒಂದು ಭಾಗವಾಗಿ ಸರಸ್ವತಿ ಪೂಜೆ ಮತ್ತು ತಂದೆ ತಾಯಿಗಳ ಪಾದಗಳಿಗೆ ಪೂಜಿಸಿ ಆಶೀರ್ವಾದ ಪಡೆಯುವ ಕಾರ್ಯಕ್ರಮ ಇದಾಗಿದೆ.  ಇದರ ಮೂಲಕ ಎಲ್ಲ ವಿದ್ಯಾರ್ಥಿಗಳು ಯಶಸ್ಸನ್ನ ಗಳಿಸಲಿ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಲಿ ಎಂದು ಬಯಸುತ್ತೇನೆ ಎಂದು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರು ತುಂಬಾ ಉತ್ಸಾಹದಿಂದ ಭಾಗವಹಿಸಿ ತಮ್ಮ ಮಕ್ಕಳಿಗೆ ಆಶೀರ್ವದಿಸಿ, ತುಂಬಾ ಸಂತೋಷ ಮತ್ತು ಗೌರವ ಸಮರ್ಪಣ ಭಾವವನ್ನು ವ್ಯಕ್ತಪಡಿಸಿದರು.

ಯಶಸ್ವಿಯಾಗಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರಿಗೆ ಹಾಗೂ ಗುರು ಹಿರಿಯರಿಗೆ ನ್ಯಾಷನಲ್ ಪ್ರೈಡ್ ಶಾಲೆಯ ಆಡಳಿತ ಮಂಡಳಿ ಧನ್ಯವಾದಗಳನ್ನು ಅರ್ಪಿಸಿತು.

Ramesh Babu

Journalist

Recent Posts

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

6 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

16 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

21 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

22 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

1 day ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

2 days ago