ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಸರಸ್ವತಿ ಪೂಜೆ, ಪೋಷಕರ ಪಾದಪೂಜೆ ಕಾರ್ಯಕ್ರಮ

ದೊಡ್ಡಬಳ್ಳಾಪುರದ ಪ್ರತಿಷ್ಠಿತ ಶಾಲೆಯಾದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಧೈರ್ಯವಾಗಿ ಎದುರಿಸಲಿ, ಒಳ್ಳೆಯ ಸಂಸ್ಕಾರ ಪಡೆಯಲಿ ಎಂಬ ಉದ್ದೇಶದಿಂದ ಸರಸ್ವತಿ ಪೂಜೆ ಮತ್ತು ತಂದೆ ತಾಯಿಗಳ ಪಾದಪೂಜೆಯನ್ನು ಶಾಲೆಯ ಸಂಸ್ಥಾಪಕರಾದ ಸಿ ನಾಗರಾಜು ಕಾರ್ಯದರ್ಶಿ ಸತೀಶ್ ರಾಜ್, ಮುಖ್ಯ ಶಿಕ್ಷಕಿ ರಶ್ಮಿ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು. ಶಾಲೆಯ ಎಲ್ಲಾ ಪೋಷಕರು ಪೂಜಾ ಕಾರ್ಯಗಳಲ್ಲಿ ತುಂಬಾ ಉತ್ಸಾಹದಿಂದ ಭಾಗವಹಿಸಿದ್ದರು.

“ಮಾತೃ ದೇವೋ ಭವ ಪಿತೃ ದೇವೋ ಭವ” ಎಂಬ ನುಡಿಯಂತೆ ವಿದ್ಯಾರ್ಥಿಗಳಿಗೆ ತಂದೆ ತಾಯಿಯ ಮಹತ್ವ ಎಷ್ಟು, ಯಾವ ರೀತಿ ಗೌರವದಿಂದ ಕಾಣಬೇಕು, ತಂದೆ ತಾಯಿಗಳೆ ನಮಗೆ ಕಣ್ಣಿಗೆ ಕಾಣುವ ದೇವರ ಸಮಾನ ಎಂಬ ಕಲ್ಪನೆಯನ್ನು ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳ ಅರಿವಿಗೆ ತರಲಾಯಿತು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಪೋಷಕರನ್ನು ವಿಶೇಷ ವ್ಯವಸ್ಥೆ ಮಾಡಿ, ಸಾಲಾಗಿ ಕೂರಿಸಿ ತಮ್ಮ ಮಕ್ಕಳಿಂದ ಪಾದಗಳಿಗೆ ಪೂಜೆಯನ್ನು ಮಾಡಿಸಿ, ತಂದೆ ತಾಯಿಯಿಂದ ಆಶೀರ್ವಾದವನ್ನು ಮಾಡಿಸಲಾಯಿತು. ಇದು ಮಕ್ಕಳ ವಿದ್ಯಾಭ್ಯಾಸದ ಕಡೆ ಧನಾತ್ಮಕ ಪ್ರಗತಿಯನ್ನು ನೀಡಲಿದೆ. ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಪೋಷಕರು ಆಶೀರ್ವದಿಸಿ ಸಂತೃಪ್ತ ಭಾವನೆಯನ್ನು ವ್ಯಕ್ತಪಡಿಸಿದರು ವಿದ್ಯಾರ್ಥಿಗಳು ಸಹ ತಂದೆ ತಾಯಿ ಆಶೀರ್ವಾದದ ಮಹತ್ವವನ್ನು ಅರಿತು ಸುಸಂದರ್ಭವನ್ನು ಸ್ಮರಿಸಿದರು.

ಸರಸ್ವತಿ ಪೂಜೆಯು ವಿದ್ಯಾರ್ಥಿಗಳಲ್ಲಿ ವಿದ್ಯೆಯ ಕಡೆಗೆ ಗಮನಹರಿಸಿ ವಿದ್ಯೆ, ಬುದ್ಧಿಯನ್ನು ನೀಡಮ್ಮ ಎಂದು ಸ್ಮರಿಸಿ, ಪೂಜಿಸುವ ಪೂಜಾ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯಲು, ಅವರು ಓದಿದ್ದೆಲ್ಲ ನೆನಪಿಗೆ ಬರಲು, ತಾಯಿ ಶಾರದೆ ಆಶೀರ್ವಾದ ಮಕ್ಕಳಿಗೆ ಸಿಗಲಿ ಎಂದು ಭಕ್ತಿಯಿಂದ ತಾಯಿ ಶಾರದೆಯನ್ನು ಪೂಜಿಸಲಾಯಿತು. ಕೊನೆಯಲ್ಲಿ ಪ್ರಸಾದವನ್ನು ನೀಡಲಾಯಿತು.

ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪವಿತ್ರವಾದ ಆಚರಣೆ ಇದು ಕೇವಲ ಒಂದು ಸಂಪ್ರದಾಯವಲ್ಲ ಅದು ಕೃತಜ್ಞತೆ ಗೌರವ ಮತ್ತು ಭಕ್ತಿಯ ಸಂಕೇತವಾಗಿದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯದರ್ಶಿ ಸತೀಶ್ ರಾಜ್ “ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು” ಹಾಗಾಗಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ತಂದೆ ತಾಯಿಗಳನ್ನು ಗೌರವಿಸುವುದು. ವಿನಯ ವಿಧೇಯತೆಯಿಂದ ನಡೆದುಕೊಳ್ಳುವುದು ಹೇಗೆ ಎಂದು ಕಲಿಸಿ ಉತ್ತಮ ಪ್ರಜೆಯನ್ನಾಗಿ ನಿರ್ಮಿಸುವುದು, ನಮ್ಮ ಉದ್ದೇಶವಾಗಿದೆ. ಅದರ ಒಂದು ಭಾಗವಾಗಿ ಸರಸ್ವತಿ ಪೂಜೆ ಮತ್ತು ತಂದೆ ತಾಯಿಗಳ ಪಾದಗಳಿಗೆ ಪೂಜಿಸಿ ಆಶೀರ್ವಾದ ಪಡೆಯುವ ಕಾರ್ಯಕ್ರಮ ಇದಾಗಿದೆ.  ಇದರ ಮೂಲಕ ಎಲ್ಲ ವಿದ್ಯಾರ್ಥಿಗಳು ಯಶಸ್ಸನ್ನ ಗಳಿಸಲಿ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಲಿ ಎಂದು ಬಯಸುತ್ತೇನೆ ಎಂದು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರು ತುಂಬಾ ಉತ್ಸಾಹದಿಂದ ಭಾಗವಹಿಸಿ ತಮ್ಮ ಮಕ್ಕಳಿಗೆ ಆಶೀರ್ವದಿಸಿ, ತುಂಬಾ ಸಂತೋಷ ಮತ್ತು ಗೌರವ ಸಮರ್ಪಣ ಭಾವವನ್ನು ವ್ಯಕ್ತಪಡಿಸಿದರು.

ಯಶಸ್ವಿಯಾಗಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರಿಗೆ ಹಾಗೂ ಗುರು ಹಿರಿಯರಿಗೆ ನ್ಯಾಷನಲ್ ಪ್ರೈಡ್ ಶಾಲೆಯ ಆಡಳಿತ ಮಂಡಳಿ ಧನ್ಯವಾದಗಳನ್ನು ಅರ್ಪಿಸಿತು.

Ramesh Babu

Journalist

Recent Posts

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

40 minutes ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

3 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

6 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

9 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago