ದೊಡ್ಡಬಳ್ಳಾಪುರದ ಪ್ರತಿಷ್ಠಿತ ಶಾಲೆಯಾದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಧೈರ್ಯವಾಗಿ ಎದುರಿಸಲಿ, ಒಳ್ಳೆಯ ಸಂಸ್ಕಾರ ಪಡೆಯಲಿ ಎಂಬ ಉದ್ದೇಶದಿಂದ ಸರಸ್ವತಿ ಪೂಜೆ ಮತ್ತು ತಂದೆ ತಾಯಿಗಳ ಪಾದಪೂಜೆಯನ್ನು ಶಾಲೆಯ ಸಂಸ್ಥಾಪಕರಾದ ಸಿ ನಾಗರಾಜು ಕಾರ್ಯದರ್ಶಿ ಸತೀಶ್ ರಾಜ್, ಮುಖ್ಯ ಶಿಕ್ಷಕಿ ರಶ್ಮಿ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು. ಶಾಲೆಯ ಎಲ್ಲಾ ಪೋಷಕರು ಪೂಜಾ ಕಾರ್ಯಗಳಲ್ಲಿ ತುಂಬಾ ಉತ್ಸಾಹದಿಂದ ಭಾಗವಹಿಸಿದ್ದರು.
“ಮಾತೃ ದೇವೋ ಭವ ಪಿತೃ ದೇವೋ ಭವ” ಎಂಬ ನುಡಿಯಂತೆ ವಿದ್ಯಾರ್ಥಿಗಳಿಗೆ ತಂದೆ ತಾಯಿಯ ಮಹತ್ವ ಎಷ್ಟು, ಯಾವ ರೀತಿ ಗೌರವದಿಂದ ಕಾಣಬೇಕು, ತಂದೆ ತಾಯಿಗಳೆ ನಮಗೆ ಕಣ್ಣಿಗೆ ಕಾಣುವ ದೇವರ ಸಮಾನ ಎಂಬ ಕಲ್ಪನೆಯನ್ನು ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳ ಅರಿವಿಗೆ ತರಲಾಯಿತು.
ಈ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಪೋಷಕರನ್ನು ವಿಶೇಷ ವ್ಯವಸ್ಥೆ ಮಾಡಿ, ಸಾಲಾಗಿ ಕೂರಿಸಿ ತಮ್ಮ ಮಕ್ಕಳಿಂದ ಪಾದಗಳಿಗೆ ಪೂಜೆಯನ್ನು ಮಾಡಿಸಿ, ತಂದೆ ತಾಯಿಯಿಂದ ಆಶೀರ್ವಾದವನ್ನು ಮಾಡಿಸಲಾಯಿತು. ಇದು ಮಕ್ಕಳ ವಿದ್ಯಾಭ್ಯಾಸದ ಕಡೆ ಧನಾತ್ಮಕ ಪ್ರಗತಿಯನ್ನು ನೀಡಲಿದೆ. ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಪೋಷಕರು ಆಶೀರ್ವದಿಸಿ ಸಂತೃಪ್ತ ಭಾವನೆಯನ್ನು ವ್ಯಕ್ತಪಡಿಸಿದರು ವಿದ್ಯಾರ್ಥಿಗಳು ಸಹ ತಂದೆ ತಾಯಿ ಆಶೀರ್ವಾದದ ಮಹತ್ವವನ್ನು ಅರಿತು ಸುಸಂದರ್ಭವನ್ನು ಸ್ಮರಿಸಿದರು.
ಸರಸ್ವತಿ ಪೂಜೆಯು ವಿದ್ಯಾರ್ಥಿಗಳಲ್ಲಿ ವಿದ್ಯೆಯ ಕಡೆಗೆ ಗಮನಹರಿಸಿ ವಿದ್ಯೆ, ಬುದ್ಧಿಯನ್ನು ನೀಡಮ್ಮ ಎಂದು ಸ್ಮರಿಸಿ, ಪೂಜಿಸುವ ಪೂಜಾ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯಲು, ಅವರು ಓದಿದ್ದೆಲ್ಲ ನೆನಪಿಗೆ ಬರಲು, ತಾಯಿ ಶಾರದೆ ಆಶೀರ್ವಾದ ಮಕ್ಕಳಿಗೆ ಸಿಗಲಿ ಎಂದು ಭಕ್ತಿಯಿಂದ ತಾಯಿ ಶಾರದೆಯನ್ನು ಪೂಜಿಸಲಾಯಿತು. ಕೊನೆಯಲ್ಲಿ ಪ್ರಸಾದವನ್ನು ನೀಡಲಾಯಿತು.
ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪವಿತ್ರವಾದ ಆಚರಣೆ ಇದು ಕೇವಲ ಒಂದು ಸಂಪ್ರದಾಯವಲ್ಲ ಅದು ಕೃತಜ್ಞತೆ ಗೌರವ ಮತ್ತು ಭಕ್ತಿಯ ಸಂಕೇತವಾಗಿದೆ.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯದರ್ಶಿ ಸತೀಶ್ ರಾಜ್ “ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು” ಹಾಗಾಗಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ತಂದೆ ತಾಯಿಗಳನ್ನು ಗೌರವಿಸುವುದು. ವಿನಯ ವಿಧೇಯತೆಯಿಂದ ನಡೆದುಕೊಳ್ಳುವುದು ಹೇಗೆ ಎಂದು ಕಲಿಸಿ ಉತ್ತಮ ಪ್ರಜೆಯನ್ನಾಗಿ ನಿರ್ಮಿಸುವುದು, ನಮ್ಮ ಉದ್ದೇಶವಾಗಿದೆ. ಅದರ ಒಂದು ಭಾಗವಾಗಿ ಸರಸ್ವತಿ ಪೂಜೆ ಮತ್ತು ತಂದೆ ತಾಯಿಗಳ ಪಾದಗಳಿಗೆ ಪೂಜಿಸಿ ಆಶೀರ್ವಾದ ಪಡೆಯುವ ಕಾರ್ಯಕ್ರಮ ಇದಾಗಿದೆ. ಇದರ ಮೂಲಕ ಎಲ್ಲ ವಿದ್ಯಾರ್ಥಿಗಳು ಯಶಸ್ಸನ್ನ ಗಳಿಸಲಿ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಲಿ ಎಂದು ಬಯಸುತ್ತೇನೆ ಎಂದು ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರು ತುಂಬಾ ಉತ್ಸಾಹದಿಂದ ಭಾಗವಹಿಸಿ ತಮ್ಮ ಮಕ್ಕಳಿಗೆ ಆಶೀರ್ವದಿಸಿ, ತುಂಬಾ ಸಂತೋಷ ಮತ್ತು ಗೌರವ ಸಮರ್ಪಣ ಭಾವವನ್ನು ವ್ಯಕ್ತಪಡಿಸಿದರು.
ಯಶಸ್ವಿಯಾಗಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರಿಗೆ ಹಾಗೂ ಗುರು ಹಿರಿಯರಿಗೆ ನ್ಯಾಷನಲ್ ಪ್ರೈಡ್ ಶಾಲೆಯ ಆಡಳಿತ ಮಂಡಳಿ ಧನ್ಯವಾದಗಳನ್ನು ಅರ್ಪಿಸಿತು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…