ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಹ್ಯಾಲೋವೀನ್ ಡೇ ಸಂಭ್ರಮಾಚರಣೆ: ಯಕ್ಷ-ಯಕ್ಷಣಿಯರ ವೇಷ ಧರಿಸಿ ಗಮನ ಸೆಳೆದ ಮಕ್ಕಳು ಹಾಗೂ ಶಿಕ್ಷಕ ಸಿಬ್ಬಂದಿ

ಎಲ್ಲಾ ಸಂತರ ಕ್ರಿಶ್ಚಿಯನ್ ಹಬ್ಬದ ಮುನ್ನಾದಿನದಂದು ಹ್ಯಾಲೋವೀನ್ ದಿನವನ್ನು ಆಚರಿಸಲಾಗುತ್ತದೆ. ಚರ್ಚ್‌ನ ಸಂತರನ್ನು ಗೌರವಿಸಲು ಇದನ್ನು ಪ್ರತಿ ವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುತ್ತದೆ. ಆದ್ದರಿಂದ ಪ್ರಪಂಚದಾದ್ಯಂತ ಹ್ಯಾಲೋವೀನ್ ದಿನವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಅದೇರೀತಿ ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಹ್ಯಾಲೋವಿನ್ ಡೇ ಆಚರಣೆ ಮಾಡಲಾಗಿದ್ದು, ಹಬ್ಬದ ಸಂಪ್ರದಾಯದಂತೆ ಶಾಲಾ ಪುಠಾಣಿಗಳು ವಿಭಿನ್ನವಾದ ಪ್ರೇತಗಳ ವೇಷ ಧರಿಸಿ ಗಮನ ಸೆಳೆದರು.

ಪಾಶ್ಚಿಮಾತ್ಯ ದೇಶಗಳಲ್ಲಿ ಚಾಲ್ತಿಯಲ್ಲಿದ್ದ “ಹಲೋ ವಿನ್ ಡೇ ಸೆಲೆಬ್ರೇಷನ್” ಈಗ ನಮ್ಮ ಎನ್‌.ಪಿ.ಎಸ್ ನಲ್ಲೂ ಆಚರಿಸಲಾಗಿದೆ. ಇದು ಒಂದು ಕ್ರಿಶ್ಚಿಯನ್ ಸಮುದಾಯದ ಆಚರಣೆಯಾಗಿದೆ. ಪೂರ್ವಿಕರ ಆತ್ಮಗಳನ್ನು ಆರಾಧಿಸುವ ಸಲುವಾಗಿ ಆಚರಣೆಯಲ್ಲಿದ್ದ ಹಾಲೋಯಿಂಗ್ ಡೇ ಈಗ ಫ್ಯಾಷನ್ ಲೋಕಕ್ಕೂ ಕಾಲಿಟ್ಟಿದೆ. ವಿವಿಧ ರೀತಿಯ ಭಯಾನಕ ನೋಟ, ಯಕ್ಷ-ಯಕ್ಷಣಿಯರು, ಮಾಟಗಾತಿಯರ ಹಾಗೆ ವಿನ್ಯಾಸದ ಉಡುಗೆ ತೊಡುಗೆಗಳನ್ನು ಧರಿಸಿದ್ದರು ಹಾಗೂ ಮಕ್ಕಳ ಜೊತೆ ಶಿಕ್ಷಕರು ಭಾಗಿಯಾಗಿ ಸಂಭ್ರಮಿಸಿದರು ಎಂದು ನ್ಯಾಷನಲ್ ಪ್ರೈಡ್ ಸ್ಕೂಲ್ ಅಧ್ಯಕ್ಷ ಸತೀಶ್ ಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ನ್ಯಾಷನಲ್ ಪ್ರೈಡ್ ಸ್ಕೂಲ್ ಅಧ್ಯಕ್ಷರಾದ ಸತೀಶ್ ಕುಮಾರ್ , ಆಡಳಿತಾಧಿಕಾರಿ ಬಿಂದು ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಹ್ಯಾಲೋವೀನ್ ದಿನವನ್ನು ಏಕೆ ಆಚರಿಸಲಾಗುತ್ತದೆ?

ಚರ್ಚ್‌ನ ಸಂತರನ್ನು ಗೌರವಿಸಲು ಹ್ಯಾಲೋವೀನ್ ದಿನವನ್ನು ಆಚರಿಸಲಾಗುತ್ತದೆ.  ಹ್ಯಾಲೋವೀನ್‌ನ ಮೂಲವು 2,000 ವರ್ಷಗಳ ಹಿಂದೆ ಯುನೈಟೆಡ್ ಕಿಂಗ್‌ಡಮ್, ಉತ್ತರ ಫ್ರಾನ್ಸ್ ಮತ್ತು ಐರ್ಲೆಂಡ್‌ನಲ್ಲಿ ವಾಸಿಸುತ್ತಿದ್ದ ಸೆಲ್ಟಿಕ್ ತಮ್ಮ ಹಬ್ಬವನ್ನು ಸಂಹೈನ್ ಎಂದು ಆಚರಿಸುತ್ತಿದ್ದರು. ಇದು ಬೇಸಿಗೆಯ ಅಂತ್ಯ ಮತ್ತು ಶೀತ ಚಳಿಗಾಲದ ದಿನಗಳ ಆರಂಭವನ್ನು ಗುರುತಿಸಿತು, ಅದು ಆ ಸಮಯದಲ್ಲಿ ಕೊಳೆತ ಮತ್ತು ಸಾವಿನೊಂದಿಗೆ ಸಂಬಂಧ ಹೊಂದಿತ್ತು. ಇದನ್ನು ತಪ್ಪಿಸಲು, ಜನರು ದೀಪೋತ್ಸವದ ಸುತ್ತಲೂ ದುಷ್ಟಶಕ್ತಿಗಳಿಂದ ರಕ್ಷಿಸಲು ಪ್ರಾರ್ಥಿಸುತ್ತಾರೆ.

ಹ್ಯಾಲೋವೀನ್ ದಿನವನ್ನು ಅ. 31 ರಂದೇ ಏಕೆ ಆಚರಿಸಲಾಗುತ್ತದೆ?

ಸೆಲ್ಟಿಕ್ ನಂಬಿಕೆಗಳ ಪ್ರಕಾರ, ಈ ದಿನವು ಬೇಸಿಗೆಯ ಅಂತ್ಯ ಮತ್ತು ಕತ್ತಲೆಯ ಸಮಯದ ಆರಂಭವನ್ನು ಸೂಚಿಸುತ್ತದೆ. ಅಕ್ಟೋಬರ್ 31 ರಂದು ಸತ್ತವರ ಮತ್ತು ಬದುಕಿರುವವರ ಪ್ರಪಂಚದ ನಡುವಿನ ಗಡಿರೇಖೆಯು ಮಸುಕಾಗುತ್ತದೆ. ಸತ್ತವರ ಪ್ರೇತಗಳು ಅಕ್ಟೋಬರ್ 31 ರ ರಾತ್ರಿ ಜಗತ್ತಿಗೆ ಮರಳಿದವು ಎಂಬ ನಂಬಿಕೆ ಇದೆ. ಆದ್ದರಿಂದ ಈ ಆಚರಣೆ ಮಾಡಲಾಗುತ್ತಿದೆ.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

6 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

8 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

9 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

15 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

16 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

19 hours ago