ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಹ್ಯಾಲೋವೀನ್ ಡೇ ಸಂಭ್ರಮಾಚರಣೆ: ಯಕ್ಷ-ಯಕ್ಷಣಿಯರ ವೇಷ ಧರಿಸಿ ಗಮನ ಸೆಳೆದ ಮಕ್ಕಳು ಹಾಗೂ ಶಿಕ್ಷಕ ಸಿಬ್ಬಂದಿ

ಎಲ್ಲಾ ಸಂತರ ಕ್ರಿಶ್ಚಿಯನ್ ಹಬ್ಬದ ಮುನ್ನಾದಿನದಂದು ಹ್ಯಾಲೋವೀನ್ ದಿನವನ್ನು ಆಚರಿಸಲಾಗುತ್ತದೆ. ಚರ್ಚ್‌ನ ಸಂತರನ್ನು ಗೌರವಿಸಲು ಇದನ್ನು ಪ್ರತಿ ವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುತ್ತದೆ. ಆದ್ದರಿಂದ ಪ್ರಪಂಚದಾದ್ಯಂತ ಹ್ಯಾಲೋವೀನ್ ದಿನವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಅದೇರೀತಿ ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಹ್ಯಾಲೋವಿನ್ ಡೇ ಆಚರಣೆ ಮಾಡಲಾಗಿದ್ದು, ಹಬ್ಬದ ಸಂಪ್ರದಾಯದಂತೆ ಶಾಲಾ ಪುಠಾಣಿಗಳು ವಿಭಿನ್ನವಾದ ಪ್ರೇತಗಳ ವೇಷ ಧರಿಸಿ ಗಮನ ಸೆಳೆದರು.

ಪಾಶ್ಚಿಮಾತ್ಯ ದೇಶಗಳಲ್ಲಿ ಚಾಲ್ತಿಯಲ್ಲಿದ್ದ “ಹಲೋ ವಿನ್ ಡೇ ಸೆಲೆಬ್ರೇಷನ್” ಈಗ ನಮ್ಮ ಎನ್‌.ಪಿ.ಎಸ್ ನಲ್ಲೂ ಆಚರಿಸಲಾಗಿದೆ. ಇದು ಒಂದು ಕ್ರಿಶ್ಚಿಯನ್ ಸಮುದಾಯದ ಆಚರಣೆಯಾಗಿದೆ. ಪೂರ್ವಿಕರ ಆತ್ಮಗಳನ್ನು ಆರಾಧಿಸುವ ಸಲುವಾಗಿ ಆಚರಣೆಯಲ್ಲಿದ್ದ ಹಾಲೋಯಿಂಗ್ ಡೇ ಈಗ ಫ್ಯಾಷನ್ ಲೋಕಕ್ಕೂ ಕಾಲಿಟ್ಟಿದೆ. ವಿವಿಧ ರೀತಿಯ ಭಯಾನಕ ನೋಟ, ಯಕ್ಷ-ಯಕ್ಷಣಿಯರು, ಮಾಟಗಾತಿಯರ ಹಾಗೆ ವಿನ್ಯಾಸದ ಉಡುಗೆ ತೊಡುಗೆಗಳನ್ನು ಧರಿಸಿದ್ದರು ಹಾಗೂ ಮಕ್ಕಳ ಜೊತೆ ಶಿಕ್ಷಕರು ಭಾಗಿಯಾಗಿ ಸಂಭ್ರಮಿಸಿದರು ಎಂದು ನ್ಯಾಷನಲ್ ಪ್ರೈಡ್ ಸ್ಕೂಲ್ ಅಧ್ಯಕ್ಷ ಸತೀಶ್ ಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ನ್ಯಾಷನಲ್ ಪ್ರೈಡ್ ಸ್ಕೂಲ್ ಅಧ್ಯಕ್ಷರಾದ ಸತೀಶ್ ಕುಮಾರ್ , ಆಡಳಿತಾಧಿಕಾರಿ ಬಿಂದು ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಹ್ಯಾಲೋವೀನ್ ದಿನವನ್ನು ಏಕೆ ಆಚರಿಸಲಾಗುತ್ತದೆ?

ಚರ್ಚ್‌ನ ಸಂತರನ್ನು ಗೌರವಿಸಲು ಹ್ಯಾಲೋವೀನ್ ದಿನವನ್ನು ಆಚರಿಸಲಾಗುತ್ತದೆ.  ಹ್ಯಾಲೋವೀನ್‌ನ ಮೂಲವು 2,000 ವರ್ಷಗಳ ಹಿಂದೆ ಯುನೈಟೆಡ್ ಕಿಂಗ್‌ಡಮ್, ಉತ್ತರ ಫ್ರಾನ್ಸ್ ಮತ್ತು ಐರ್ಲೆಂಡ್‌ನಲ್ಲಿ ವಾಸಿಸುತ್ತಿದ್ದ ಸೆಲ್ಟಿಕ್ ತಮ್ಮ ಹಬ್ಬವನ್ನು ಸಂಹೈನ್ ಎಂದು ಆಚರಿಸುತ್ತಿದ್ದರು. ಇದು ಬೇಸಿಗೆಯ ಅಂತ್ಯ ಮತ್ತು ಶೀತ ಚಳಿಗಾಲದ ದಿನಗಳ ಆರಂಭವನ್ನು ಗುರುತಿಸಿತು, ಅದು ಆ ಸಮಯದಲ್ಲಿ ಕೊಳೆತ ಮತ್ತು ಸಾವಿನೊಂದಿಗೆ ಸಂಬಂಧ ಹೊಂದಿತ್ತು. ಇದನ್ನು ತಪ್ಪಿಸಲು, ಜನರು ದೀಪೋತ್ಸವದ ಸುತ್ತಲೂ ದುಷ್ಟಶಕ್ತಿಗಳಿಂದ ರಕ್ಷಿಸಲು ಪ್ರಾರ್ಥಿಸುತ್ತಾರೆ.

ಹ್ಯಾಲೋವೀನ್ ದಿನವನ್ನು ಅ. 31 ರಂದೇ ಏಕೆ ಆಚರಿಸಲಾಗುತ್ತದೆ?

ಸೆಲ್ಟಿಕ್ ನಂಬಿಕೆಗಳ ಪ್ರಕಾರ, ಈ ದಿನವು ಬೇಸಿಗೆಯ ಅಂತ್ಯ ಮತ್ತು ಕತ್ತಲೆಯ ಸಮಯದ ಆರಂಭವನ್ನು ಸೂಚಿಸುತ್ತದೆ. ಅಕ್ಟೋಬರ್ 31 ರಂದು ಸತ್ತವರ ಮತ್ತು ಬದುಕಿರುವವರ ಪ್ರಪಂಚದ ನಡುವಿನ ಗಡಿರೇಖೆಯು ಮಸುಕಾಗುತ್ತದೆ. ಸತ್ತವರ ಪ್ರೇತಗಳು ಅಕ್ಟೋಬರ್ 31 ರ ರಾತ್ರಿ ಜಗತ್ತಿಗೆ ಮರಳಿದವು ಎಂಬ ನಂಬಿಕೆ ಇದೆ. ಆದ್ದರಿಂದ ಈ ಆಚರಣೆ ಮಾಡಲಾಗುತ್ತಿದೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

1 hour ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

2 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

7 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

9 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

11 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

12 hours ago