ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಹ್ಯಾಲೋವೀನ್ ಡೇ ಸಂಭ್ರಮಾಚರಣೆ: ಯಕ್ಷ-ಯಕ್ಷಣಿಯರ ವೇಷ ಧರಿಸಿ ಗಮನ ಸೆಳೆದ ಮಕ್ಕಳು ಹಾಗೂ ಶಿಕ್ಷಕ ಸಿಬ್ಬಂದಿ

ಎಲ್ಲಾ ಸಂತರ ಕ್ರಿಶ್ಚಿಯನ್ ಹಬ್ಬದ ಮುನ್ನಾದಿನದಂದು ಹ್ಯಾಲೋವೀನ್ ದಿನವನ್ನು ಆಚರಿಸಲಾಗುತ್ತದೆ. ಚರ್ಚ್‌ನ ಸಂತರನ್ನು ಗೌರವಿಸಲು ಇದನ್ನು ಪ್ರತಿ ವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುತ್ತದೆ. ಆದ್ದರಿಂದ ಪ್ರಪಂಚದಾದ್ಯಂತ ಹ್ಯಾಲೋವೀನ್ ದಿನವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಅದೇರೀತಿ ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಹ್ಯಾಲೋವಿನ್ ಡೇ ಆಚರಣೆ ಮಾಡಲಾಗಿದ್ದು, ಹಬ್ಬದ ಸಂಪ್ರದಾಯದಂತೆ ಶಾಲಾ ಪುಠಾಣಿಗಳು ವಿಭಿನ್ನವಾದ ಪ್ರೇತಗಳ ವೇಷ ಧರಿಸಿ ಗಮನ ಸೆಳೆದರು.

ಪಾಶ್ಚಿಮಾತ್ಯ ದೇಶಗಳಲ್ಲಿ ಚಾಲ್ತಿಯಲ್ಲಿದ್ದ “ಹಲೋ ವಿನ್ ಡೇ ಸೆಲೆಬ್ರೇಷನ್” ಈಗ ನಮ್ಮ ಎನ್‌.ಪಿ.ಎಸ್ ನಲ್ಲೂ ಆಚರಿಸಲಾಗಿದೆ. ಇದು ಒಂದು ಕ್ರಿಶ್ಚಿಯನ್ ಸಮುದಾಯದ ಆಚರಣೆಯಾಗಿದೆ. ಪೂರ್ವಿಕರ ಆತ್ಮಗಳನ್ನು ಆರಾಧಿಸುವ ಸಲುವಾಗಿ ಆಚರಣೆಯಲ್ಲಿದ್ದ ಹಾಲೋಯಿಂಗ್ ಡೇ ಈಗ ಫ್ಯಾಷನ್ ಲೋಕಕ್ಕೂ ಕಾಲಿಟ್ಟಿದೆ. ವಿವಿಧ ರೀತಿಯ ಭಯಾನಕ ನೋಟ, ಯಕ್ಷ-ಯಕ್ಷಣಿಯರು, ಮಾಟಗಾತಿಯರ ಹಾಗೆ ವಿನ್ಯಾಸದ ಉಡುಗೆ ತೊಡುಗೆಗಳನ್ನು ಧರಿಸಿದ್ದರು ಹಾಗೂ ಮಕ್ಕಳ ಜೊತೆ ಶಿಕ್ಷಕರು ಭಾಗಿಯಾಗಿ ಸಂಭ್ರಮಿಸಿದರು ಎಂದು ನ್ಯಾಷನಲ್ ಪ್ರೈಡ್ ಸ್ಕೂಲ್ ಅಧ್ಯಕ್ಷ ಸತೀಶ್ ಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ನ್ಯಾಷನಲ್ ಪ್ರೈಡ್ ಸ್ಕೂಲ್ ಅಧ್ಯಕ್ಷರಾದ ಸತೀಶ್ ಕುಮಾರ್ , ಆಡಳಿತಾಧಿಕಾರಿ ಬಿಂದು ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಹ್ಯಾಲೋವೀನ್ ದಿನವನ್ನು ಏಕೆ ಆಚರಿಸಲಾಗುತ್ತದೆ?

ಚರ್ಚ್‌ನ ಸಂತರನ್ನು ಗೌರವಿಸಲು ಹ್ಯಾಲೋವೀನ್ ದಿನವನ್ನು ಆಚರಿಸಲಾಗುತ್ತದೆ.  ಹ್ಯಾಲೋವೀನ್‌ನ ಮೂಲವು 2,000 ವರ್ಷಗಳ ಹಿಂದೆ ಯುನೈಟೆಡ್ ಕಿಂಗ್‌ಡಮ್, ಉತ್ತರ ಫ್ರಾನ್ಸ್ ಮತ್ತು ಐರ್ಲೆಂಡ್‌ನಲ್ಲಿ ವಾಸಿಸುತ್ತಿದ್ದ ಸೆಲ್ಟಿಕ್ ತಮ್ಮ ಹಬ್ಬವನ್ನು ಸಂಹೈನ್ ಎಂದು ಆಚರಿಸುತ್ತಿದ್ದರು. ಇದು ಬೇಸಿಗೆಯ ಅಂತ್ಯ ಮತ್ತು ಶೀತ ಚಳಿಗಾಲದ ದಿನಗಳ ಆರಂಭವನ್ನು ಗುರುತಿಸಿತು, ಅದು ಆ ಸಮಯದಲ್ಲಿ ಕೊಳೆತ ಮತ್ತು ಸಾವಿನೊಂದಿಗೆ ಸಂಬಂಧ ಹೊಂದಿತ್ತು. ಇದನ್ನು ತಪ್ಪಿಸಲು, ಜನರು ದೀಪೋತ್ಸವದ ಸುತ್ತಲೂ ದುಷ್ಟಶಕ್ತಿಗಳಿಂದ ರಕ್ಷಿಸಲು ಪ್ರಾರ್ಥಿಸುತ್ತಾರೆ.

ಹ್ಯಾಲೋವೀನ್ ದಿನವನ್ನು ಅ. 31 ರಂದೇ ಏಕೆ ಆಚರಿಸಲಾಗುತ್ತದೆ?

ಸೆಲ್ಟಿಕ್ ನಂಬಿಕೆಗಳ ಪ್ರಕಾರ, ಈ ದಿನವು ಬೇಸಿಗೆಯ ಅಂತ್ಯ ಮತ್ತು ಕತ್ತಲೆಯ ಸಮಯದ ಆರಂಭವನ್ನು ಸೂಚಿಸುತ್ತದೆ. ಅಕ್ಟೋಬರ್ 31 ರಂದು ಸತ್ತವರ ಮತ್ತು ಬದುಕಿರುವವರ ಪ್ರಪಂಚದ ನಡುವಿನ ಗಡಿರೇಖೆಯು ಮಸುಕಾಗುತ್ತದೆ. ಸತ್ತವರ ಪ್ರೇತಗಳು ಅಕ್ಟೋಬರ್ 31 ರ ರಾತ್ರಿ ಜಗತ್ತಿಗೆ ಮರಳಿದವು ಎಂಬ ನಂಬಿಕೆ ಇದೆ. ಆದ್ದರಿಂದ ಈ ಆಚರಣೆ ಮಾಡಲಾಗುತ್ತಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

12 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

13 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

14 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

14 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

18 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

20 hours ago