ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಹ್ಯಾಲೋವೀನ್ ಡೇ ಸಂಭ್ರಮಾಚರಣೆ: ಯಕ್ಷ-ಯಕ್ಷಣಿಯರ ವೇಷ ಧರಿಸಿ ಗಮನ ಸೆಳೆದ ಮಕ್ಕಳು ಹಾಗೂ ಶಿಕ್ಷಕ ಸಿಬ್ಬಂದಿ

ಎಲ್ಲಾ ಸಂತರ ಕ್ರಿಶ್ಚಿಯನ್ ಹಬ್ಬದ ಮುನ್ನಾದಿನದಂದು ಹ್ಯಾಲೋವೀನ್ ದಿನವನ್ನು ಆಚರಿಸಲಾಗುತ್ತದೆ. ಚರ್ಚ್‌ನ ಸಂತರನ್ನು ಗೌರವಿಸಲು ಇದನ್ನು ಪ್ರತಿ ವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುತ್ತದೆ. ಆದ್ದರಿಂದ ಪ್ರಪಂಚದಾದ್ಯಂತ ಹ್ಯಾಲೋವೀನ್ ದಿನವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಅದೇರೀತಿ ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಹ್ಯಾಲೋವಿನ್ ಡೇ ಆಚರಣೆ ಮಾಡಲಾಗಿದ್ದು, ಹಬ್ಬದ ಸಂಪ್ರದಾಯದಂತೆ ಶಾಲಾ ಪುಠಾಣಿಗಳು ವಿಭಿನ್ನವಾದ ಪ್ರೇತಗಳ ವೇಷ ಧರಿಸಿ ಗಮನ ಸೆಳೆದರು.

ಪಾಶ್ಚಿಮಾತ್ಯ ದೇಶಗಳಲ್ಲಿ ಚಾಲ್ತಿಯಲ್ಲಿದ್ದ “ಹಲೋ ವಿನ್ ಡೇ ಸೆಲೆಬ್ರೇಷನ್” ಈಗ ನಮ್ಮ ಎನ್‌.ಪಿ.ಎಸ್ ನಲ್ಲೂ ಆಚರಿಸಲಾಗಿದೆ. ಇದು ಒಂದು ಕ್ರಿಶ್ಚಿಯನ್ ಸಮುದಾಯದ ಆಚರಣೆಯಾಗಿದೆ. ಪೂರ್ವಿಕರ ಆತ್ಮಗಳನ್ನು ಆರಾಧಿಸುವ ಸಲುವಾಗಿ ಆಚರಣೆಯಲ್ಲಿದ್ದ ಹಾಲೋಯಿಂಗ್ ಡೇ ಈಗ ಫ್ಯಾಷನ್ ಲೋಕಕ್ಕೂ ಕಾಲಿಟ್ಟಿದೆ. ವಿವಿಧ ರೀತಿಯ ಭಯಾನಕ ನೋಟ, ಯಕ್ಷ-ಯಕ್ಷಣಿಯರು, ಮಾಟಗಾತಿಯರ ಹಾಗೆ ವಿನ್ಯಾಸದ ಉಡುಗೆ ತೊಡುಗೆಗಳನ್ನು ಧರಿಸಿದ್ದರು ಹಾಗೂ ಮಕ್ಕಳ ಜೊತೆ ಶಿಕ್ಷಕರು ಭಾಗಿಯಾಗಿ ಸಂಭ್ರಮಿಸಿದರು ಎಂದು ನ್ಯಾಷನಲ್ ಪ್ರೈಡ್ ಸ್ಕೂಲ್ ಅಧ್ಯಕ್ಷ ಸತೀಶ್ ಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ನ್ಯಾಷನಲ್ ಪ್ರೈಡ್ ಸ್ಕೂಲ್ ಅಧ್ಯಕ್ಷರಾದ ಸತೀಶ್ ಕುಮಾರ್ , ಆಡಳಿತಾಧಿಕಾರಿ ಬಿಂದು ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಹ್ಯಾಲೋವೀನ್ ದಿನವನ್ನು ಏಕೆ ಆಚರಿಸಲಾಗುತ್ತದೆ?

ಚರ್ಚ್‌ನ ಸಂತರನ್ನು ಗೌರವಿಸಲು ಹ್ಯಾಲೋವೀನ್ ದಿನವನ್ನು ಆಚರಿಸಲಾಗುತ್ತದೆ.  ಹ್ಯಾಲೋವೀನ್‌ನ ಮೂಲವು 2,000 ವರ್ಷಗಳ ಹಿಂದೆ ಯುನೈಟೆಡ್ ಕಿಂಗ್‌ಡಮ್, ಉತ್ತರ ಫ್ರಾನ್ಸ್ ಮತ್ತು ಐರ್ಲೆಂಡ್‌ನಲ್ಲಿ ವಾಸಿಸುತ್ತಿದ್ದ ಸೆಲ್ಟಿಕ್ ತಮ್ಮ ಹಬ್ಬವನ್ನು ಸಂಹೈನ್ ಎಂದು ಆಚರಿಸುತ್ತಿದ್ದರು. ಇದು ಬೇಸಿಗೆಯ ಅಂತ್ಯ ಮತ್ತು ಶೀತ ಚಳಿಗಾಲದ ದಿನಗಳ ಆರಂಭವನ್ನು ಗುರುತಿಸಿತು, ಅದು ಆ ಸಮಯದಲ್ಲಿ ಕೊಳೆತ ಮತ್ತು ಸಾವಿನೊಂದಿಗೆ ಸಂಬಂಧ ಹೊಂದಿತ್ತು. ಇದನ್ನು ತಪ್ಪಿಸಲು, ಜನರು ದೀಪೋತ್ಸವದ ಸುತ್ತಲೂ ದುಷ್ಟಶಕ್ತಿಗಳಿಂದ ರಕ್ಷಿಸಲು ಪ್ರಾರ್ಥಿಸುತ್ತಾರೆ.

ಹ್ಯಾಲೋವೀನ್ ದಿನವನ್ನು ಅ. 31 ರಂದೇ ಏಕೆ ಆಚರಿಸಲಾಗುತ್ತದೆ?

ಸೆಲ್ಟಿಕ್ ನಂಬಿಕೆಗಳ ಪ್ರಕಾರ, ಈ ದಿನವು ಬೇಸಿಗೆಯ ಅಂತ್ಯ ಮತ್ತು ಕತ್ತಲೆಯ ಸಮಯದ ಆರಂಭವನ್ನು ಸೂಚಿಸುತ್ತದೆ. ಅಕ್ಟೋಬರ್ 31 ರಂದು ಸತ್ತವರ ಮತ್ತು ಬದುಕಿರುವವರ ಪ್ರಪಂಚದ ನಡುವಿನ ಗಡಿರೇಖೆಯು ಮಸುಕಾಗುತ್ತದೆ. ಸತ್ತವರ ಪ್ರೇತಗಳು ಅಕ್ಟೋಬರ್ 31 ರ ರಾತ್ರಿ ಜಗತ್ತಿಗೆ ಮರಳಿದವು ಎಂಬ ನಂಬಿಕೆ ಇದೆ. ಆದ್ದರಿಂದ ಈ ಆಚರಣೆ ಮಾಡಲಾಗುತ್ತಿದೆ.

Ramesh Babu

Journalist

Recent Posts

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

28 minutes ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

3 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

3 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

5 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

6 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

7 hours ago