ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಮ್ಮ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ಚಾರ್ಜ್ ಶೀಟ್ ಹಾಕಿದ್ದಾರೆ. ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಅಷ್ಟೆ ಎಂದು ಸಿಎಂ ಸಿದ್ದರಮಯ್ಯ ಹೇಳಿದರು
ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದರು.
ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗೂ ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಮಗೆ ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದರು.
ದಾವಣಗೆರೆಯಲ್ಲಿ ಅನೈತಿಕ ಸಂಬಂಧದ ಆರೋಪದ ಮೇಲೆ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ, ಅಪರಾಧ. ಯಾರೇ ತಪ್ಪು ಮಾಡಿದರೂ ಕೂಡ ಕ್ರಮ ಖಚಿತ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಹೇಳಿದರು.
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…