ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಮ್ಮ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ಚಾರ್ಜ್ ಶೀಟ್ ಹಾಕಿದ್ದಾರೆ. ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಅಷ್ಟೆ ಎಂದು ಸಿಎಂ ಸಿದ್ದರಮಯ್ಯ ಹೇಳಿದರು
ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದರು.
ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗೂ ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಮಗೆ ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದರು.
ದಾವಣಗೆರೆಯಲ್ಲಿ ಅನೈತಿಕ ಸಂಬಂಧದ ಆರೋಪದ ಮೇಲೆ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ, ಅಪರಾಧ. ಯಾರೇ ತಪ್ಪು ಮಾಡಿದರೂ ಕೂಡ ಕ್ರಮ ಖಚಿತ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಹೇಳಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…