ನ್ಯಾ. ಸಂತೋಷ್ ಹೆಗಡೆ, ನಟಿ ತಾರಾಗೆ ಜೀ ವಾಹಿನಿಯ ‘ ವೀರ ಕನ್ನಡಿಗ ಪ್ರಶಸ್ತಿ’

ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್‌ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ ಆ ಮೂಲಕ ಕನ್ನಡ ನಾಡು-ನುಡಿ, ನೆಲ-ಜಲ ಹಾಗೂ ರಾಜ್ಯದ ಪ್ರಗತಿಗೆ ಶ್ರಮಿಸುತ್ತಿರುವ ಸಾಧಕರನ್ನು ಗೌರವಿಸಲು ವೀರ ಕನ್ನಡಿಗ ಅವಾರ್ಡ್ಸ್‌-2025 ಪ್ರದಾನ ಮಾಡುತ್ತಿದೆ.

ಇದೇ ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮ ಇದಾಗಿದೆ.

ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಸಂತೋಷ್‌ ಹೆಗ್ಡೆ, ಹಿರಿಯ ಸಾಹಿತಿ & ಚಿಂತಕರಾದ ಡಾ. ಬರಗೂರು ರಾಮಚಂದ್ರಪ್ಪ, ಹಿರಿಯ ನಟಿ & ಮಾಜಿ ಎಂಎಲ್‌ಸಿ ಡಾ. ತಾರಾ ಅನುರಾಧ, ಭಾರತ ಮಹಿಳಾ ಕಬಡ್ಡಿ ತಂಡದ ಹೆಡ್‌ ಕೋಚ್‌ ತೇಜಸ್ವಿನಿ ಬಾಯಿ ವಿ, ಹಿರಿಯ ಪತ್ರಕರ್ತ & ರಾಜಕೀಯ ವಿಶ್ಲೇಷಕರಾದ ಶಶಿಧರ್‌ ಭಟ್‌ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಸಾರಿಗೆ & ಮಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್‌.ಕೆ.ಪಾಟೀಲ್‌, ಕೃಷಿ ಸಚಿವರಾದ ಎನ್‌.ಚಲುವರಾಯಸ್ವಾಮಿ, ಸನ್ಮಾನ್ಯ ಅರಣ್ಯ ಚಿವರಾದ ಈಶ್ವರ್‌ ಖಂಡ್ರೆ, ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್‌ ಲಾಡ್‌, ಕನ್ನಡ, ಸಂಸ್ಕೃತಿ & ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್‌ ತಂಗಡಗಿ, ವಿಧಾನಸಭೆ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ, ವಿಧಾನಪರಿಷತ್‌ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷರಾದ ಡಾ. ಎ.ಎಸ್‌.ಕಿರಣ್‌ ಕುಮಾರ್‌, ಖ್ಯಾತ ನಟ ವಸಿಷ್ಠ ಸಿಂಹ, ಖ್ಯಾತ ನಟಿ ಸಪ್ತಮಿ ಗೌಡ ಭಾಗವಹಿಸಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಜೀ ಕನ್ನಡ ನ್ಯೂಸ್‌ ಸಂಪಾದಕರಾದ ರವಿ ಎಸ್‌. ಅವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago