ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ ಆ ಮೂಲಕ ಕನ್ನಡ ನಾಡು-ನುಡಿ, ನೆಲ-ಜಲ ಹಾಗೂ ರಾಜ್ಯದ ಪ್ರಗತಿಗೆ ಶ್ರಮಿಸುತ್ತಿರುವ ಸಾಧಕರನ್ನು ಗೌರವಿಸಲು ವೀರ ಕನ್ನಡಿಗ ಅವಾರ್ಡ್ಸ್-2025 ಪ್ರದಾನ ಮಾಡುತ್ತಿದೆ.
ಇದೇ ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮ ಇದಾಗಿದೆ.
ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ, ಹಿರಿಯ ಸಾಹಿತಿ & ಚಿಂತಕರಾದ ಡಾ. ಬರಗೂರು ರಾಮಚಂದ್ರಪ್ಪ, ಹಿರಿಯ ನಟಿ & ಮಾಜಿ ಎಂಎಲ್ಸಿ ಡಾ. ತಾರಾ ಅನುರಾಧ, ಭಾರತ ಮಹಿಳಾ ಕಬಡ್ಡಿ ತಂಡದ ಹೆಡ್ ಕೋಚ್ ತೇಜಸ್ವಿನಿ ಬಾಯಿ ವಿ, ಹಿರಿಯ ಪತ್ರಕರ್ತ & ರಾಜಕೀಯ ವಿಶ್ಲೇಷಕರಾದ ಶಶಿಧರ್ ಭಟ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಸಾರಿಗೆ & ಮಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ, ಸನ್ಮಾನ್ಯ ಅರಣ್ಯ ಚಿವರಾದ ಈಶ್ವರ್ ಖಂಡ್ರೆ, ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್, ಕನ್ನಡ, ಸಂಸ್ಕೃತಿ & ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ವಿಧಾನಸಭೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ, ವಿಧಾನಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷರಾದ ಡಾ. ಎ.ಎಸ್.ಕಿರಣ್ ಕುಮಾರ್, ಖ್ಯಾತ ನಟ ವಸಿಷ್ಠ ಸಿಂಹ, ಖ್ಯಾತ ನಟಿ ಸಪ್ತಮಿ ಗೌಡ ಭಾಗವಹಿಸಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಜೀ ಕನ್ನಡ ನ್ಯೂಸ್ ಸಂಪಾದಕರಾದ ರವಿ ಎಸ್. ಅವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…
ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…