ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ ಆ ಮೂಲಕ ಕನ್ನಡ ನಾಡು-ನುಡಿ, ನೆಲ-ಜಲ ಹಾಗೂ ರಾಜ್ಯದ ಪ್ರಗತಿಗೆ ಶ್ರಮಿಸುತ್ತಿರುವ ಸಾಧಕರನ್ನು ಗೌರವಿಸಲು ವೀರ ಕನ್ನಡಿಗ ಅವಾರ್ಡ್ಸ್-2025 ಪ್ರದಾನ ಮಾಡುತ್ತಿದೆ.
ಇದೇ ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮ ಇದಾಗಿದೆ.
ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ, ಹಿರಿಯ ಸಾಹಿತಿ & ಚಿಂತಕರಾದ ಡಾ. ಬರಗೂರು ರಾಮಚಂದ್ರಪ್ಪ, ಹಿರಿಯ ನಟಿ & ಮಾಜಿ ಎಂಎಲ್ಸಿ ಡಾ. ತಾರಾ ಅನುರಾಧ, ಭಾರತ ಮಹಿಳಾ ಕಬಡ್ಡಿ ತಂಡದ ಹೆಡ್ ಕೋಚ್ ತೇಜಸ್ವಿನಿ ಬಾಯಿ ವಿ, ಹಿರಿಯ ಪತ್ರಕರ್ತ & ರಾಜಕೀಯ ವಿಶ್ಲೇಷಕರಾದ ಶಶಿಧರ್ ಭಟ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಸಾರಿಗೆ & ಮಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ, ಸನ್ಮಾನ್ಯ ಅರಣ್ಯ ಚಿವರಾದ ಈಶ್ವರ್ ಖಂಡ್ರೆ, ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್, ಕನ್ನಡ, ಸಂಸ್ಕೃತಿ & ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ವಿಧಾನಸಭೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ, ವಿಧಾನಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷರಾದ ಡಾ. ಎ.ಎಸ್.ಕಿರಣ್ ಕುಮಾರ್, ಖ್ಯಾತ ನಟ ವಸಿಷ್ಠ ಸಿಂಹ, ಖ್ಯಾತ ನಟಿ ಸಪ್ತಮಿ ಗೌಡ ಭಾಗವಹಿಸಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಜೀ ಕನ್ನಡ ನ್ಯೂಸ್ ಸಂಪಾದಕರಾದ ರವಿ ಎಸ್. ಅವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…