ನ್ಯಾ. ಸಂತೋಷ್ ಹೆಗಡೆ, ನಟಿ ತಾರಾಗೆ ಜೀ ವಾಹಿನಿಯ ‘ ವೀರ ಕನ್ನಡಿಗ ಪ್ರಶಸ್ತಿ’

ಕನ್ನಡಿಗರ ನೆಚ್ಚಿನ ಜೀ ಕನ್ನಡ ನ್ಯೂಸ್‌ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ ಆ ಮೂಲಕ ಕನ್ನಡ ನಾಡು-ನುಡಿ, ನೆಲ-ಜಲ ಹಾಗೂ ರಾಜ್ಯದ ಪ್ರಗತಿಗೆ ಶ್ರಮಿಸುತ್ತಿರುವ ಸಾಧಕರನ್ನು ಗೌರವಿಸಲು ವೀರ ಕನ್ನಡಿಗ ಅವಾರ್ಡ್ಸ್‌-2025 ಪ್ರದಾನ ಮಾಡುತ್ತಿದೆ.

ಇದೇ ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಪ್ರತಿಷ್ಠಿತ ದಿ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಉದ್ಯಮ, ಕ್ರೀಡೆ, ಆರೋಗ್ಯ, ಕೃಷಿ, ಸಿನಿಮಾ, ಕಲೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸುತ್ತಿರುವ ಸಾಧಕರನ್ನು ಅಭಿನಂದಿಸುವ ಕಾರ್ಯಕ್ರಮ ಇದಾಗಿದೆ.

ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಸಂತೋಷ್‌ ಹೆಗ್ಡೆ, ಹಿರಿಯ ಸಾಹಿತಿ & ಚಿಂತಕರಾದ ಡಾ. ಬರಗೂರು ರಾಮಚಂದ್ರಪ್ಪ, ಹಿರಿಯ ನಟಿ & ಮಾಜಿ ಎಂಎಲ್‌ಸಿ ಡಾ. ತಾರಾ ಅನುರಾಧ, ಭಾರತ ಮಹಿಳಾ ಕಬಡ್ಡಿ ತಂಡದ ಹೆಡ್‌ ಕೋಚ್‌ ತೇಜಸ್ವಿನಿ ಬಾಯಿ ವಿ, ಹಿರಿಯ ಪತ್ರಕರ್ತ & ರಾಜಕೀಯ ವಿಶ್ಲೇಷಕರಾದ ಶಶಿಧರ್‌ ಭಟ್‌ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಸಾರಿಗೆ & ಮಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್‌.ಕೆ.ಪಾಟೀಲ್‌, ಕೃಷಿ ಸಚಿವರಾದ ಎನ್‌.ಚಲುವರಾಯಸ್ವಾಮಿ, ಸನ್ಮಾನ್ಯ ಅರಣ್ಯ ಚಿವರಾದ ಈಶ್ವರ್‌ ಖಂಡ್ರೆ, ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್‌ ಲಾಡ್‌, ಕನ್ನಡ, ಸಂಸ್ಕೃತಿ & ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್‌ ತಂಗಡಗಿ, ವಿಧಾನಸಭೆ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ, ವಿಧಾನಪರಿಷತ್‌ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷರಾದ ಡಾ. ಎ.ಎಸ್‌.ಕಿರಣ್‌ ಕುಮಾರ್‌, ಖ್ಯಾತ ನಟ ವಸಿಷ್ಠ ಸಿಂಹ, ಖ್ಯಾತ ನಟಿ ಸಪ್ತಮಿ ಗೌಡ ಭಾಗವಹಿಸಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಜೀ ಕನ್ನಡ ನ್ಯೂಸ್‌ ಸಂಪಾದಕರಾದ ರವಿ ಎಸ್‌. ಅವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

37 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

6 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

7 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago