ನ್ಯೂಜಿಲೆಂಡ್ ಬೌಲಿಂಗ್ ದಾಳಿಗೆ ನಲುಗಿದ ಭಾರತ, ವಾಶಿಂಗ್ಟನ್ ಹೋರಾಟ ವ್ಯರ್ಥ!

ರಾಂಚಿ : ಟಿ-ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿದರೂ ಸಹ ಕಿವೀಸ್ ತಂಡ ಮೇಲುಗೈ ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ನಾಯಕ ಹಾರ್ದಿಕ್ ಪಾಂಡ್ಯ ಅವರ ಯೋಚನೆ ಕೈಗೂಡಲಿಲ್ಲ, ಪ್ರವಾಸಿ ತಂಡದ ಆರಂಭಿಕ ಆಟಗಾರರಾದ ಕಾನ್ವೆ (52) ಹಾಗೂ ಫಿನ್ ಅಲೆನ್ (35) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಈ ಸಂದರ್ಭದಲ್ಲಿ ತಂಡದ ಮೊತ್ತ 43 ರನ್ ಗಳಿಸಿದ್ದ ಸಂದರ್ಭದಲ್ಲಿ ವಾಶಿಂಗ್ಟನ್ ಸುಂದರ್ ಫಿನ್ ಅಲೆನ್ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.

ನಂತರ ಬಂದ ಚಾಂಪನ್ ಬಂದಷ್ಟೇ ವೇಗವಾಗಿ ಹಿಂದಿರುಗಿದರು, ಗ್ಲೆನ್ ಫಿಲಿಪ್ಸ್ (17), ಬ್ರೆಸ್ವೆಲ್, ಸ್ಯಾಂಟ್ನರ್ ಹಾಗೂ ಇಶ್ ಸೌಧಿ ಬೇಗನೇ ವಿಕೆಟ್ ಒಪ್ಪಿಸಿದರು, ಈ ಸಂದರ್ಭದಲ್ಲಿ ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮಿಚೆಲ್ (59) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿ 177 ರನ್ ಗುರಿ ನೀಡಿದರು.

ಬೃಹತ್ ಮೊತ್ತ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ರನ್ ಗಳಿಸುವಲ್ಲಿ ವಿಫಲವಾಯಿತು, ತವರಿನ ಅಂಗಳದಲ್ಲಿ ಆಟವಾಡಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (4), ಏಕದಿನ ಸರಣಿಯಲ್ಲಿ ಮಿಂಚಿದ್ದ ಶುಭ್ಮಮನ್ ಗಿಲ್ (7), ರಾಹುಲ್ ತ್ರಿಪಾಠಿ (0) ಬೇಗನೆ ವಿಕೆಟ್ ಕಳೆದುಕೊಂಡರು.

15 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಮದ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (47) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (21) ಉತ್ತಮ ಜೊತೆಯಾಟದಿಂದಾಗಿ ಗೆಲುವಿನ ಹಾದಿ ತೋರಿಸಿದರು, ಆದರೆ ಇಶ್ ಸೌಧಿಗೆ ವಿಕೆಟ್ ಒಪ್ಪಿಸಿದ ಸೂರ್ಯಕುಮಾರ್ ಯಾದವ್ ನಿರಾಸೆ ಮೂಡಿಸಿದರು.

 

ಹಾರ್ದಿಕ್ ಪಾಂಡ್ಯ ಔಟಾದಾಗ ತಂಡ 89 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು, ಒಂದು ಕಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಕೆಚ್ಚದೆಯ ಪ್ರದರ್ಶನ ತೋರುವಲ್ಲಿ ಯಶಸ್ವಿಯಾದ ಆಲ್ ರೌಂಡರ್ ವಾಶಿಂಗ್ಟನ್ ಸುಂದರ್ (50) ರನ್ ಗಳಿಸಿ ಜಯದ ಸನಿಹ ಕೊಂಡೊಯ್ದರೂ ಸಹ ಗೆಲುವಿನ ಸಿಹಿ ಸವಿಯಲು ಸಾಧ್ಯವಾಗಲಿಲ್ಲ.

ನ್ಯೂಜಿಲೆಂಡ್ ತಂಡದ ಪರವಾಗಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕ ಸ್ಯಾಂಟ್ನರ್ 4 ಓವರುಗಳಲ್ಲಿ 11 ರನ್ ನೀಡಿ 2 ವಿಕೆಟ್ ಪಡೆದರು, ಫರ್ಗುಸನ್, ಬ್ರೆಸ್ವೆಲ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಆಘಾತ ನೀಡಿ 21 ರನ್ ಗಳ ಗೆಲುವು ಪಡೆದರು, ನ್ಯೂಜಿಲೆಂಡ್ ಪರವಾಗಿ ಅಬ್ಬರಿಸಿದ ಡೇನಿಯಲ್ ಮಿಚೆಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

4 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

8 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago