ರಾಂಚಿ : ಟಿ-ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿದರೂ ಸಹ ಕಿವೀಸ್ ತಂಡ ಮೇಲುಗೈ ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಸಾಧಿಸಿತು.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ನಾಯಕ ಹಾರ್ದಿಕ್ ಪಾಂಡ್ಯ ಅವರ ಯೋಚನೆ ಕೈಗೂಡಲಿಲ್ಲ, ಪ್ರವಾಸಿ ತಂಡದ ಆರಂಭಿಕ ಆಟಗಾರರಾದ ಕಾನ್ವೆ (52) ಹಾಗೂ ಫಿನ್ ಅಲೆನ್ (35) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಈ ಸಂದರ್ಭದಲ್ಲಿ ತಂಡದ ಮೊತ್ತ 43 ರನ್ ಗಳಿಸಿದ್ದ ಸಂದರ್ಭದಲ್ಲಿ ವಾಶಿಂಗ್ಟನ್ ಸುಂದರ್ ಫಿನ್ ಅಲೆನ್ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.
ನಂತರ ಬಂದ ಚಾಂಪನ್ ಬಂದಷ್ಟೇ ವೇಗವಾಗಿ ಹಿಂದಿರುಗಿದರು, ಗ್ಲೆನ್ ಫಿಲಿಪ್ಸ್ (17), ಬ್ರೆಸ್ವೆಲ್, ಸ್ಯಾಂಟ್ನರ್ ಹಾಗೂ ಇಶ್ ಸೌಧಿ ಬೇಗನೇ ವಿಕೆಟ್ ಒಪ್ಪಿಸಿದರು, ಈ ಸಂದರ್ಭದಲ್ಲಿ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಮಿಚೆಲ್ (59) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿ 177 ರನ್ ಗುರಿ ನೀಡಿದರು.
ಬೃಹತ್ ಮೊತ್ತ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ರನ್ ಗಳಿಸುವಲ್ಲಿ ವಿಫಲವಾಯಿತು, ತವರಿನ ಅಂಗಳದಲ್ಲಿ ಆಟವಾಡಿದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (4), ಏಕದಿನ ಸರಣಿಯಲ್ಲಿ ಮಿಂಚಿದ್ದ ಶುಭ್ಮಮನ್ ಗಿಲ್ (7), ರಾಹುಲ್ ತ್ರಿಪಾಠಿ (0) ಬೇಗನೆ ವಿಕೆಟ್ ಕಳೆದುಕೊಂಡರು.
15 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಮದ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (47) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (21) ಉತ್ತಮ ಜೊತೆಯಾಟದಿಂದಾಗಿ ಗೆಲುವಿನ ಹಾದಿ ತೋರಿಸಿದರು, ಆದರೆ ಇಶ್ ಸೌಧಿಗೆ ವಿಕೆಟ್ ಒಪ್ಪಿಸಿದ ಸೂರ್ಯಕುಮಾರ್ ಯಾದವ್ ನಿರಾಸೆ ಮೂಡಿಸಿದರು.
ಹಾರ್ದಿಕ್ ಪಾಂಡ್ಯ ಔಟಾದಾಗ ತಂಡ 89 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು, ಒಂದು ಕಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಕೆಚ್ಚದೆಯ ಪ್ರದರ್ಶನ ತೋರುವಲ್ಲಿ ಯಶಸ್ವಿಯಾದ ಆಲ್ ರೌಂಡರ್ ವಾಶಿಂಗ್ಟನ್ ಸುಂದರ್ (50) ರನ್ ಗಳಿಸಿ ಜಯದ ಸನಿಹ ಕೊಂಡೊಯ್ದರೂ ಸಹ ಗೆಲುವಿನ ಸಿಹಿ ಸವಿಯಲು ಸಾಧ್ಯವಾಗಲಿಲ್ಲ.
ನ್ಯೂಜಿಲೆಂಡ್ ತಂಡದ ಪರವಾಗಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕ ಸ್ಯಾಂಟ್ನರ್ 4 ಓವರುಗಳಲ್ಲಿ 11 ರನ್ ನೀಡಿ 2 ವಿಕೆಟ್ ಪಡೆದರು, ಫರ್ಗುಸನ್, ಬ್ರೆಸ್ವೆಲ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಆಘಾತ ನೀಡಿ 21 ರನ್ ಗಳ ಗೆಲುವು ಪಡೆದರು, ನ್ಯೂಜಿಲೆಂಡ್ ಪರವಾಗಿ ಅಬ್ಬರಿಸಿದ ಡೇನಿಯಲ್ ಮಿಚೆಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…