ರಾಂಚಿ : ಟಿ-ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿದರೂ ಸಹ ಕಿವೀಸ್ ತಂಡ ಮೇಲುಗೈ ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಸಾಧಿಸಿತು.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ನಾಯಕ ಹಾರ್ದಿಕ್ ಪಾಂಡ್ಯ ಅವರ ಯೋಚನೆ ಕೈಗೂಡಲಿಲ್ಲ, ಪ್ರವಾಸಿ ತಂಡದ ಆರಂಭಿಕ ಆಟಗಾರರಾದ ಕಾನ್ವೆ (52) ಹಾಗೂ ಫಿನ್ ಅಲೆನ್ (35) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಈ ಸಂದರ್ಭದಲ್ಲಿ ತಂಡದ ಮೊತ್ತ 43 ರನ್ ಗಳಿಸಿದ್ದ ಸಂದರ್ಭದಲ್ಲಿ ವಾಶಿಂಗ್ಟನ್ ಸುಂದರ್ ಫಿನ್ ಅಲೆನ್ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.
ನಂತರ ಬಂದ ಚಾಂಪನ್ ಬಂದಷ್ಟೇ ವೇಗವಾಗಿ ಹಿಂದಿರುಗಿದರು, ಗ್ಲೆನ್ ಫಿಲಿಪ್ಸ್ (17), ಬ್ರೆಸ್ವೆಲ್, ಸ್ಯಾಂಟ್ನರ್ ಹಾಗೂ ಇಶ್ ಸೌಧಿ ಬೇಗನೇ ವಿಕೆಟ್ ಒಪ್ಪಿಸಿದರು, ಈ ಸಂದರ್ಭದಲ್ಲಿ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಮಿಚೆಲ್ (59) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿ 177 ರನ್ ಗುರಿ ನೀಡಿದರು.
ಬೃಹತ್ ಮೊತ್ತ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ರನ್ ಗಳಿಸುವಲ್ಲಿ ವಿಫಲವಾಯಿತು, ತವರಿನ ಅಂಗಳದಲ್ಲಿ ಆಟವಾಡಿದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (4), ಏಕದಿನ ಸರಣಿಯಲ್ಲಿ ಮಿಂಚಿದ್ದ ಶುಭ್ಮಮನ್ ಗಿಲ್ (7), ರಾಹುಲ್ ತ್ರಿಪಾಠಿ (0) ಬೇಗನೆ ವಿಕೆಟ್ ಕಳೆದುಕೊಂಡರು.
15 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಮದ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (47) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (21) ಉತ್ತಮ ಜೊತೆಯಾಟದಿಂದಾಗಿ ಗೆಲುವಿನ ಹಾದಿ ತೋರಿಸಿದರು, ಆದರೆ ಇಶ್ ಸೌಧಿಗೆ ವಿಕೆಟ್ ಒಪ್ಪಿಸಿದ ಸೂರ್ಯಕುಮಾರ್ ಯಾದವ್ ನಿರಾಸೆ ಮೂಡಿಸಿದರು.
ಹಾರ್ದಿಕ್ ಪಾಂಡ್ಯ ಔಟಾದಾಗ ತಂಡ 89 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು, ಒಂದು ಕಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಕೆಚ್ಚದೆಯ ಪ್ರದರ್ಶನ ತೋರುವಲ್ಲಿ ಯಶಸ್ವಿಯಾದ ಆಲ್ ರೌಂಡರ್ ವಾಶಿಂಗ್ಟನ್ ಸುಂದರ್ (50) ರನ್ ಗಳಿಸಿ ಜಯದ ಸನಿಹ ಕೊಂಡೊಯ್ದರೂ ಸಹ ಗೆಲುವಿನ ಸಿಹಿ ಸವಿಯಲು ಸಾಧ್ಯವಾಗಲಿಲ್ಲ.
ನ್ಯೂಜಿಲೆಂಡ್ ತಂಡದ ಪರವಾಗಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕ ಸ್ಯಾಂಟ್ನರ್ 4 ಓವರುಗಳಲ್ಲಿ 11 ರನ್ ನೀಡಿ 2 ವಿಕೆಟ್ ಪಡೆದರು, ಫರ್ಗುಸನ್, ಬ್ರೆಸ್ವೆಲ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಆಘಾತ ನೀಡಿ 21 ರನ್ ಗಳ ಗೆಲುವು ಪಡೆದರು, ನ್ಯೂಜಿಲೆಂಡ್ ಪರವಾಗಿ ಅಬ್ಬರಿಸಿದ ಡೇನಿಯಲ್ ಮಿಚೆಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…