ನ್ಯೂಜಿಲೆಂಡ್ ಬೌಲಿಂಗ್ ದಾಳಿಗೆ ನಲುಗಿದ ಭಾರತ, ವಾಶಿಂಗ್ಟನ್ ಹೋರಾಟ ವ್ಯರ್ಥ!

ರಾಂಚಿ : ಟಿ-ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿದರೂ ಸಹ ಕಿವೀಸ್ ತಂಡ ಮೇಲುಗೈ ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ನಾಯಕ ಹಾರ್ದಿಕ್ ಪಾಂಡ್ಯ ಅವರ ಯೋಚನೆ ಕೈಗೂಡಲಿಲ್ಲ, ಪ್ರವಾಸಿ ತಂಡದ ಆರಂಭಿಕ ಆಟಗಾರರಾದ ಕಾನ್ವೆ (52) ಹಾಗೂ ಫಿನ್ ಅಲೆನ್ (35) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಈ ಸಂದರ್ಭದಲ್ಲಿ ತಂಡದ ಮೊತ್ತ 43 ರನ್ ಗಳಿಸಿದ್ದ ಸಂದರ್ಭದಲ್ಲಿ ವಾಶಿಂಗ್ಟನ್ ಸುಂದರ್ ಫಿನ್ ಅಲೆನ್ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.

ನಂತರ ಬಂದ ಚಾಂಪನ್ ಬಂದಷ್ಟೇ ವೇಗವಾಗಿ ಹಿಂದಿರುಗಿದರು, ಗ್ಲೆನ್ ಫಿಲಿಪ್ಸ್ (17), ಬ್ರೆಸ್ವೆಲ್, ಸ್ಯಾಂಟ್ನರ್ ಹಾಗೂ ಇಶ್ ಸೌಧಿ ಬೇಗನೇ ವಿಕೆಟ್ ಒಪ್ಪಿಸಿದರು, ಈ ಸಂದರ್ಭದಲ್ಲಿ ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮಿಚೆಲ್ (59) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿ 177 ರನ್ ಗುರಿ ನೀಡಿದರು.

ಬೃಹತ್ ಮೊತ್ತ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ರನ್ ಗಳಿಸುವಲ್ಲಿ ವಿಫಲವಾಯಿತು, ತವರಿನ ಅಂಗಳದಲ್ಲಿ ಆಟವಾಡಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (4), ಏಕದಿನ ಸರಣಿಯಲ್ಲಿ ಮಿಂಚಿದ್ದ ಶುಭ್ಮಮನ್ ಗಿಲ್ (7), ರಾಹುಲ್ ತ್ರಿಪಾಠಿ (0) ಬೇಗನೆ ವಿಕೆಟ್ ಕಳೆದುಕೊಂಡರು.

15 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಮದ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (47) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (21) ಉತ್ತಮ ಜೊತೆಯಾಟದಿಂದಾಗಿ ಗೆಲುವಿನ ಹಾದಿ ತೋರಿಸಿದರು, ಆದರೆ ಇಶ್ ಸೌಧಿಗೆ ವಿಕೆಟ್ ಒಪ್ಪಿಸಿದ ಸೂರ್ಯಕುಮಾರ್ ಯಾದವ್ ನಿರಾಸೆ ಮೂಡಿಸಿದರು.

 

ಹಾರ್ದಿಕ್ ಪಾಂಡ್ಯ ಔಟಾದಾಗ ತಂಡ 89 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು, ಒಂದು ಕಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಕೆಚ್ಚದೆಯ ಪ್ರದರ್ಶನ ತೋರುವಲ್ಲಿ ಯಶಸ್ವಿಯಾದ ಆಲ್ ರೌಂಡರ್ ವಾಶಿಂಗ್ಟನ್ ಸುಂದರ್ (50) ರನ್ ಗಳಿಸಿ ಜಯದ ಸನಿಹ ಕೊಂಡೊಯ್ದರೂ ಸಹ ಗೆಲುವಿನ ಸಿಹಿ ಸವಿಯಲು ಸಾಧ್ಯವಾಗಲಿಲ್ಲ.

ನ್ಯೂಜಿಲೆಂಡ್ ತಂಡದ ಪರವಾಗಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕ ಸ್ಯಾಂಟ್ನರ್ 4 ಓವರುಗಳಲ್ಲಿ 11 ರನ್ ನೀಡಿ 2 ವಿಕೆಟ್ ಪಡೆದರು, ಫರ್ಗುಸನ್, ಬ್ರೆಸ್ವೆಲ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಆಘಾತ ನೀಡಿ 21 ರನ್ ಗಳ ಗೆಲುವು ಪಡೆದರು, ನ್ಯೂಜಿಲೆಂಡ್ ಪರವಾಗಿ ಅಬ್ಬರಿಸಿದ ಡೇನಿಯಲ್ ಮಿಚೆಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

5 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

24 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago