ನ್ಯೂಜಿಲೆಂಡ್ ಬೌಲಿಂಗ್ ದಾಳಿಗೆ ನಲುಗಿದ ಭಾರತ, ವಾಶಿಂಗ್ಟನ್ ಹೋರಾಟ ವ್ಯರ್ಥ!

ರಾಂಚಿ : ಟಿ-ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿದರೂ ಸಹ ಕಿವೀಸ್ ತಂಡ ಮೇಲುಗೈ ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ನಾಯಕ ಹಾರ್ದಿಕ್ ಪಾಂಡ್ಯ ಅವರ ಯೋಚನೆ ಕೈಗೂಡಲಿಲ್ಲ, ಪ್ರವಾಸಿ ತಂಡದ ಆರಂಭಿಕ ಆಟಗಾರರಾದ ಕಾನ್ವೆ (52) ಹಾಗೂ ಫಿನ್ ಅಲೆನ್ (35) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಈ ಸಂದರ್ಭದಲ್ಲಿ ತಂಡದ ಮೊತ್ತ 43 ರನ್ ಗಳಿಸಿದ್ದ ಸಂದರ್ಭದಲ್ಲಿ ವಾಶಿಂಗ್ಟನ್ ಸುಂದರ್ ಫಿನ್ ಅಲೆನ್ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು.

ನಂತರ ಬಂದ ಚಾಂಪನ್ ಬಂದಷ್ಟೇ ವೇಗವಾಗಿ ಹಿಂದಿರುಗಿದರು, ಗ್ಲೆನ್ ಫಿಲಿಪ್ಸ್ (17), ಬ್ರೆಸ್ವೆಲ್, ಸ್ಯಾಂಟ್ನರ್ ಹಾಗೂ ಇಶ್ ಸೌಧಿ ಬೇಗನೇ ವಿಕೆಟ್ ಒಪ್ಪಿಸಿದರು, ಈ ಸಂದರ್ಭದಲ್ಲಿ ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮಿಚೆಲ್ (59) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿ 177 ರನ್ ಗುರಿ ನೀಡಿದರು.

ಬೃಹತ್ ಮೊತ್ತ ಬೆನ್ನಟ್ಟಿದ ಭಾರತ ಆರಂಭಿಕ ಜೋಡಿ ರನ್ ಗಳಿಸುವಲ್ಲಿ ವಿಫಲವಾಯಿತು, ತವರಿನ ಅಂಗಳದಲ್ಲಿ ಆಟವಾಡಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ (4), ಏಕದಿನ ಸರಣಿಯಲ್ಲಿ ಮಿಂಚಿದ್ದ ಶುಭ್ಮಮನ್ ಗಿಲ್ (7), ರಾಹುಲ್ ತ್ರಿಪಾಠಿ (0) ಬೇಗನೆ ವಿಕೆಟ್ ಕಳೆದುಕೊಂಡರು.

15 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಮದ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (47) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (21) ಉತ್ತಮ ಜೊತೆಯಾಟದಿಂದಾಗಿ ಗೆಲುವಿನ ಹಾದಿ ತೋರಿಸಿದರು, ಆದರೆ ಇಶ್ ಸೌಧಿಗೆ ವಿಕೆಟ್ ಒಪ್ಪಿಸಿದ ಸೂರ್ಯಕುಮಾರ್ ಯಾದವ್ ನಿರಾಸೆ ಮೂಡಿಸಿದರು.

 

ಹಾರ್ದಿಕ್ ಪಾಂಡ್ಯ ಔಟಾದಾಗ ತಂಡ 89 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು, ಒಂದು ಕಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಕೆಚ್ಚದೆಯ ಪ್ರದರ್ಶನ ತೋರುವಲ್ಲಿ ಯಶಸ್ವಿಯಾದ ಆಲ್ ರೌಂಡರ್ ವಾಶಿಂಗ್ಟನ್ ಸುಂದರ್ (50) ರನ್ ಗಳಿಸಿ ಜಯದ ಸನಿಹ ಕೊಂಡೊಯ್ದರೂ ಸಹ ಗೆಲುವಿನ ಸಿಹಿ ಸವಿಯಲು ಸಾಧ್ಯವಾಗಲಿಲ್ಲ.

ನ್ಯೂಜಿಲೆಂಡ್ ತಂಡದ ಪರವಾಗಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕ ಸ್ಯಾಂಟ್ನರ್ 4 ಓವರುಗಳಲ್ಲಿ 11 ರನ್ ನೀಡಿ 2 ವಿಕೆಟ್ ಪಡೆದರು, ಫರ್ಗುಸನ್, ಬ್ರೆಸ್ವೆಲ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಆಘಾತ ನೀಡಿ 21 ರನ್ ಗಳ ಗೆಲುವು ಪಡೆದರು, ನ್ಯೂಜಿಲೆಂಡ್ ಪರವಾಗಿ ಅಬ್ಬರಿಸಿದ ಡೇನಿಯಲ್ ಮಿಚೆಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

6 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

6 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

7 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

8 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

11 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

11 hours ago