ನ್ಯೂಜಿಲೆಂಡ್ ವಿರುದ್ಧ ಟಿ-ಟ್ವೆಂಟಿ ಸರಣಿ: ಶುಭಾರಂಭದ ನಿರೀಕ್ಷೆಯಲ್ಲಿ ಹಾರ್ದಿಕ್ ಪಡೆ!

ರಾಂಚಿ : ಏಕದಿನ ಸರಣಿಯಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಸಾಧಿಸಿರುವ ಭಾರತ ತಂಡ ಶುಕ್ರವಾರ ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣ ರಾಂಚಿಯಲ್ಲಿ ನಡೆಯುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಮೊದಲ ಪಂದ್ಯ ಗೆಲ್ಲುವ ಮೂಲಕ ಹಾರ್ದಿಕ್ ಪಡೆ ಶುಭಾರಂಭ ಮಾಡುವ ನಿರೀಕ್ಷೆಯಿದೆ.

ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಹಾಗೂ ಅನುಭವಿ ಆಟಗಾರ ಕೆ. ಎಲ್. ರಾಹುಲ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ, ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧ ಟಿ-ಟ್ವೆಂಟಿ ಸರಣಿ ಜಯಿಸುವ ಮೂಲಕ ಹೊಸ ಭರವಸೆ ಮೂಡಿಸಿದ್ದು ನ್ಯೂಜಿಲೆಂಡ್ ವಿರುದ್ಧ ಅದನ್ನೇ ಮುಂದುವರಿಸುವ ವಿಶ್ವಾಸವಿದೆ.

ಆರಂಭಿಕ ಆಟಗಾರರು ಸೇರಿದಂತೆ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಅದ್ಬುತವಾದ ಪ್ರದರ್ಶನ ನೀಡುತ್ತಿದೆ, ಈಗಾಗಲೇ ಪ್ರವಾಸಿ ತಂಡದ ವಿರುದ್ಧ ಏಕದಿನ ಸರಣಿ ಜಯಿಸಿದ್ದು ತಂಡದ ವಿಶ್ವಾಸವನ್ನು ಹೆಚ್ಚಿಸಿದೆ.

ಯುವ ಆಟಗಾರರ ದಂಡನ್ನೇ ಕಟ್ಟಿರುವ ಆಯ್ಕೆ ಸಮಿತಿ ಮತ್ತೊಮ್ಮೆ ಯುವಕರ ಮೇಲೆ ವಿಶ್ವಾಸವಿಟ್ಟು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದೆ, ಉತ್ತಮವಾದ ಅವಕಾಶ ಸಿಕ್ಕಿದ್ದು ಯುವ ಪಡೆ ತಮ್ಮ ಶಕ್ತಿ ಸಾಮರ್ಥ್ಯವನ್ನು ಸಾಬೀತು ಪಡಿಸಲು ಇದೊಂದು ಉತ್ತಮ ವೇದಿಕೆಯಾಗಿದೆ.

ಆರಂಭಿಕ ಆಟಗಾರರಾಗಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಹಾಗೂ ಶುಭಮನ್ ಗಿಲ್ ಮಿಂಚುವ ವಿಶ್ವಾಸವಿದೆ, ಮದ್ಯಮ ಕ್ರಮಾಂಕದಲ್ಲಿ ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಬಲ ತುಂಬಲಿದ್ದು ಉಮ್ರಾನ್ ಮಲ್ಲಿಕ್, ಅಶ೯ದೀಪ್ ಸಿಂಗ್, ಶಿವಮ್ ಮಾವಿ ಹಾಗೂ ಚಹಲ್ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಇದೆ.

ಪ್ರವಾಸಿ ತಂಡ ಸ್ಯಾಂಟ್ನರ್ ಅವರ ನಾಯಕತ್ವದಲ್ಲಿ ಮೈದಾನಕ್ಕೆ ಇಳಿಯಲಿದ್ದು ಏಕದಿನ ಸರಣಿಯಲ್ಲಿನ ಸೋಲನ್ನು ಮರೆಯಲು ಪಂದ್ಯ ಗೆಲ್ಲುವ ಉತ್ಸಾಹದಲ್ಲಿದೆ, ಆರಂಭಿಕ ಬ್ಯಾಟ್ಸ್‌ಮನ್ ಕಾನ್ವೆ, ಫಿನ್ ಅಲೆನ್, ಫಿಲಿಪ್, ಬ್ರೆಸ್ವೆಲ್ ಮಿಂಚುವಂತ ಆಟಗಾರರಾಗಿದ್ದು ತಿರುಗೇಟು ನೀಡಲಿದ್ದಾರೆ.

ಈಗಾಗಲೇ ಅಭ್ಯಾಸ ಆರಂಭಿಸಿರುವ ಎರಡೂ ತಂಡಗಳಿಂದ ಉತ್ತಮ ಪೈಪೋಟಿ ನಿರೀಕ್ಷಿಸಲಾಗಿದೆ, ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ದೋನಿ ಅವರ ತವರೂರಿನಲ್ಲಿ ನಡೆಯುತ್ತಿರುವುದರಿಂದ ಕ್ಯಾಪ್ಟನ್ ಕೂಲ್ ಭಾರತ ತಂಡದ ಡ್ರೆಸಿಂಗ್ ಕೋಣೆಗೆ ತೆರಳಿ ಆಟಗಾರರಿಗೆ ಕೆಲವು ಸಲಹೆ ನೀಡಿದ್ದಾರೆ, ಪಂದ್ಯ 7.30 ಕ್ಕೆ ಪ್ರಾರಂಭವಾಗಲಿದ್ದು ಅಭಿಮಾನಿಗಳು ಕಾತರದಿಂದ ಎದುರುನೋಡುತ್ತಿದ್ದಾರೆ.

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

1 hour ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago