ನ್ಯೂಜಿಲೆಂಡ್ ವಿರುದ್ಧ ಟಿ-ಟ್ವೆಂಟಿ ಸರಣಿ: ಶುಭಾರಂಭದ ನಿರೀಕ್ಷೆಯಲ್ಲಿ ಹಾರ್ದಿಕ್ ಪಡೆ!

ರಾಂಚಿ : ಏಕದಿನ ಸರಣಿಯಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಸಾಧಿಸಿರುವ ಭಾರತ ತಂಡ ಶುಕ್ರವಾರ ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣ ರಾಂಚಿಯಲ್ಲಿ ನಡೆಯುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಮೊದಲ ಪಂದ್ಯ ಗೆಲ್ಲುವ ಮೂಲಕ ಹಾರ್ದಿಕ್ ಪಡೆ ಶುಭಾರಂಭ ಮಾಡುವ ನಿರೀಕ್ಷೆಯಿದೆ.

ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಹಾಗೂ ಅನುಭವಿ ಆಟಗಾರ ಕೆ. ಎಲ್. ರಾಹುಲ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ, ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧ ಟಿ-ಟ್ವೆಂಟಿ ಸರಣಿ ಜಯಿಸುವ ಮೂಲಕ ಹೊಸ ಭರವಸೆ ಮೂಡಿಸಿದ್ದು ನ್ಯೂಜಿಲೆಂಡ್ ವಿರುದ್ಧ ಅದನ್ನೇ ಮುಂದುವರಿಸುವ ವಿಶ್ವಾಸವಿದೆ.

ಆರಂಭಿಕ ಆಟಗಾರರು ಸೇರಿದಂತೆ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಅದ್ಬುತವಾದ ಪ್ರದರ್ಶನ ನೀಡುತ್ತಿದೆ, ಈಗಾಗಲೇ ಪ್ರವಾಸಿ ತಂಡದ ವಿರುದ್ಧ ಏಕದಿನ ಸರಣಿ ಜಯಿಸಿದ್ದು ತಂಡದ ವಿಶ್ವಾಸವನ್ನು ಹೆಚ್ಚಿಸಿದೆ.

ಯುವ ಆಟಗಾರರ ದಂಡನ್ನೇ ಕಟ್ಟಿರುವ ಆಯ್ಕೆ ಸಮಿತಿ ಮತ್ತೊಮ್ಮೆ ಯುವಕರ ಮೇಲೆ ವಿಶ್ವಾಸವಿಟ್ಟು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದೆ, ಉತ್ತಮವಾದ ಅವಕಾಶ ಸಿಕ್ಕಿದ್ದು ಯುವ ಪಡೆ ತಮ್ಮ ಶಕ್ತಿ ಸಾಮರ್ಥ್ಯವನ್ನು ಸಾಬೀತು ಪಡಿಸಲು ಇದೊಂದು ಉತ್ತಮ ವೇದಿಕೆಯಾಗಿದೆ.

ಆರಂಭಿಕ ಆಟಗಾರರಾಗಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಹಾಗೂ ಶುಭಮನ್ ಗಿಲ್ ಮಿಂಚುವ ವಿಶ್ವಾಸವಿದೆ, ಮದ್ಯಮ ಕ್ರಮಾಂಕದಲ್ಲಿ ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಬಲ ತುಂಬಲಿದ್ದು ಉಮ್ರಾನ್ ಮಲ್ಲಿಕ್, ಅಶ೯ದೀಪ್ ಸಿಂಗ್, ಶಿವಮ್ ಮಾವಿ ಹಾಗೂ ಚಹಲ್ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಇದೆ.

ಪ್ರವಾಸಿ ತಂಡ ಸ್ಯಾಂಟ್ನರ್ ಅವರ ನಾಯಕತ್ವದಲ್ಲಿ ಮೈದಾನಕ್ಕೆ ಇಳಿಯಲಿದ್ದು ಏಕದಿನ ಸರಣಿಯಲ್ಲಿನ ಸೋಲನ್ನು ಮರೆಯಲು ಪಂದ್ಯ ಗೆಲ್ಲುವ ಉತ್ಸಾಹದಲ್ಲಿದೆ, ಆರಂಭಿಕ ಬ್ಯಾಟ್ಸ್‌ಮನ್ ಕಾನ್ವೆ, ಫಿನ್ ಅಲೆನ್, ಫಿಲಿಪ್, ಬ್ರೆಸ್ವೆಲ್ ಮಿಂಚುವಂತ ಆಟಗಾರರಾಗಿದ್ದು ತಿರುಗೇಟು ನೀಡಲಿದ್ದಾರೆ.

ಈಗಾಗಲೇ ಅಭ್ಯಾಸ ಆರಂಭಿಸಿರುವ ಎರಡೂ ತಂಡಗಳಿಂದ ಉತ್ತಮ ಪೈಪೋಟಿ ನಿರೀಕ್ಷಿಸಲಾಗಿದೆ, ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ದೋನಿ ಅವರ ತವರೂರಿನಲ್ಲಿ ನಡೆಯುತ್ತಿರುವುದರಿಂದ ಕ್ಯಾಪ್ಟನ್ ಕೂಲ್ ಭಾರತ ತಂಡದ ಡ್ರೆಸಿಂಗ್ ಕೋಣೆಗೆ ತೆರಳಿ ಆಟಗಾರರಿಗೆ ಕೆಲವು ಸಲಹೆ ನೀಡಿದ್ದಾರೆ, ಪಂದ್ಯ 7.30 ಕ್ಕೆ ಪ್ರಾರಂಭವಾಗಲಿದ್ದು ಅಭಿಮಾನಿಗಳು ಕಾತರದಿಂದ ಎದುರುನೋಡುತ್ತಿದ್ದಾರೆ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

3 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

7 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

11 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago