ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಬಲಿಷ್ಠ ತಂಡ ಪ್ರಕಟಿಸಿದ ಬಿಸಿಸಿಐ!

ಸೆಪ್ಟೆಂಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಬಲಿಷ್ಠ ತಂಡ ಕಟ್ಟಲು ಮುಂದಾಗಿದ್ದು ಜನವರಿ 18 ರಿಂದ ನ್ಯೂಜಿಲೆಂಡ್ ವಿರುದ್ಧ ಆರಂಭವಾಗುವ ಏಕದಿನ ಹಾಗೂ ಟಿ-ಟ್ವೆಂಟಿ ಸರಣಿಗೆ ತಂಡವನ್ನು ಪ್ರಕಟಿಸಿದೆ.

ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ-ಟ್ವೆಂಟಿ ಸರಣಿಯನ್ನು ತನ್ನದಾಗಿಸಿಕೊಂಡಿದ್ದ ಭಾರತ ಮತ್ತೆ ಅದೇ ತಂಡವನ್ನು ಪ್ರಕಟಿಸಿದ್ದು ಇತ್ತೀಚೆಗೆ ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ತ್ರಿಶತಕ ಸಿಡಿಸಿದ್ದ ಮುಂಬೈ ಬ್ಯಾಟ್ಸ್‌ಮನ್ ಪೃಥ್ವಿ ಶಾ ತಂಡಕ್ಕೆ ಹೊಸದಾಗಿ ಆಯ್ಕೆಯಾಗಿದ್ದಾರೆ.

ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆ. ಎಸ್. ಭರತ್ ಹೊಸದಾಗಿ ಆಯ್ಕೆಯಾಗಿದ್ದು ತಂಡವನ್ನು ಸೇರಿಕೊಳ್ಳಲಿದ್ದಾರೆ. ಹಿರಿಯ ಆಟಗಾರರಾದ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ ವೈಯಕ್ತಿಕ ಕಾರಣಗಳಿಂದಾಗಿ ಈ ಸರಣಿಗೆ ಲಭ್ಯರಾಗಿಲ್ಲ ಎಂದು ಬಿಸಿಸಿಐ ತಿಳಿಸಿದೆ.

ನ್ಯೂಜಿಲೆಂಡ್ ವಿರುದ್ಧ ಜನವರಿ 18 ರಿಂದ ಪಂದ್ಯಗಳು ಆರಂಭವಾಗಲಿದ್ದು ಮೊದಲ ಏಕದಿನ ಪಂದ್ಯ ಹೈದರಾಬಾದಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು ಫೆಬ್ರುವರಿ 24 ಕ್ಕೆ ಕೊನೆಗೊಳ್ಳಲಿದೆ.

ಫೆಬ್ರವರಿ 9 ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಬಾಡ೯ರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಉಪ ನಾಯಕನಾಗಿ ಕನ್ನಡಿಗ ಕೆ. ಎಲ್. ರಾಹುಲ್ ವಾಪಸ್ ಆಗಿದ್ದು ಮೊದಲ ಎರಡು ಪಂದ್ಯಗಳಿಗೆ ಬಲಿಷ್ಠ ತಂಡ ಕಟ್ಟಲಾಗಿದೆ, ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಫಿಟ್ನೆಸ್ ಟೆಸ್ಟ್ ಪಾಸ್ ಆದರೆ ತಂಡವನ್ನು ಸೇರ್ಪಡೆಯಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಏಕದಿನ ತಂಡದ ವಿವರ :- ರೋಹಿತ್ ಶರ್ಮಾ ( ನಾಯಕ ) , ಶುಬ್ಮನ್ ಗಿಲ್ , ಇಶಾನ್ ಕಿಶನ್ , ವಿರಾಟ್ ಕೊಹ್ಲಿ , ಸುರ್ಯ ಕುಮಾರ್ , ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್ ) , ಹಾರ್ದಿಕ್ ಪಾಂಡ್ಯ ( ಉಪ ನಾಯಕ ) , ವಾಷಿಂಗ್ಟನ್ ಸುಂದರ್ , ಶಹಬಾಜ್ ಅಹ್ಮದ್ , ಶಾರ್ದೂಲ್ ಠಾಕೂರ್ , ಯುಜ್ವೇಂದ್ರ ಚಹಾಲ್ , ಕುಲದೀಪ್ ಯಾದವ್ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್ , ಉಮ್ರಾನ್ ಮಲಿಕ್.

ಟಿ-ಟ್ವೆಂಟಿ ತಂಡದ ವಿವರ: ಹಾರ್ದಿಕ್ ಪಾಂಡ್ಯ (ನಾಯಕ ) , ಸೂರ್ಯಕುಮಾರ್ ಯಾದವ್ ( ಉಪನಾಯಕ ) , ಇಶಾನ್ ಕಿಶನ್ ( ವಿಕೆಟ್ ಕೀಪರ್ ) , ದೀಪಕ್ ಹೂಡ , ರಾಹುಲ್ ತ್ರಿಪಾಠಿ , ರುತುರಾಜ್ ಗಾಯಕ್ವಾಡ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್ , ಕುಲದೀಪ್ ಯಾದವ್ , ಚಾಹಲ್ , ಅರ್ಶ್ದೀಪ್ ಸಿಂಗ್ , ಉಮ್ರಾನ್ ಮಲಿಕ್ , ಶಿವಂ ಮಾವಿ , ಪೃಥ್ವಿ ಶಾ , ಮುಕೇಶ್ ಕುಮಾರ್.

ಟೆಸ್ಟ್‌ ತಂಡದ ವಿವರ: ರೋಹಿತ್ ಶರ್ಮಾ (ನಾಯಕ ), ಕೆಎಲ್ ರಾಹುಲ್ (ಉಪ ನಾಯಕ ) , ಶುಭಮನ್ ಗಿಲ್, ಚತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ , ಕೆಎಸ್ ಭರತ್ (ವಿಕೆಟ್ ಕೀಪರ್ ) , ಇಶಾನ್ ಕಿಶನ್ (ವಿಕೆಟ್ ಕೀಪರ್ ) , ಆರ್ ಅಶ್ವಿನ್, ಅಕ್ಷರ್ ಪಟೇಲ್ , ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್.

Ramesh Babu

Journalist

View Comments

Recent Posts

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

1 hour ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

10 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

12 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

20 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

1 day ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago